ಸರ್ಕಾರಿ ಕಾರು ನನಗೆ ಅವಶ್ಯಕತೆ ಇಲ್ಲ: ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ

ಚಿಕ್ಕಮಗಳೂರು, ಜುಲೈ 27: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

Recommended Video

      PUBG to get banned soon | Oneindia Kannada

      ಈ ಸಂಬಂಧ ಪ್ರತಿಕ್ರಿಯೆಗೆ ನಿರಾಕರಿಸಿದ ಶಾಸಕ ಕುಮಾರಸ್ವಾಮಿ, ನಿಗಮ ಮಂಡಳಿ, ಸರ್ಕಾರದ ಕಾರು ಯಾವುದು ನನಗೆ ಬೇಡ, ಸಾಯಲಿ ಬಿಡಿ ಎಂದು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನಗೆ ಸರ್ಕಾರದ ಕಾರು, ಅಧಿಕಾರ ಬೇಡ ನನ್ನ ಕ್ಷೇತ್ರಕ್ಕೆ ಅನುದಾನ ಕೊಟ್ಟರೆ ಸಾಕು. ನನಗೆ ಸರ್ಕಾರಿ ವಾಹನದ ಅಗತ್ಯ ಇಲ್ಲ ಎಂದು ಸರ್ಕಾರದ ವಿರುದ್ಧ ಪರೋಕ್ಷ ಅಸಮಾಧಾನ ಹೊರ ಹಾಕಿದರು.

      ಎಂ.ಪಿಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. ನನಗೆ ಅಷ್ಟು ದೊಡ್ಡ ಹುದ್ದೆ ಕೊಟ್ಟರೆ ಹೇಗೆ, ಏನೂ ಬೇಡ, ನಾನು ಯಾವ ನಿಗಮ ಮಂಡಳಿಯನ್ನೂ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

      I Dont Need A Government Car: Mudigere MLA M P Kumaraswamy

      ಬಿಜೆಪಿ ಸರ್ಕಾರ ರಚನೆಯಾಗಿ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೂ ಶಾಸಕ ಎಂ.ಪಿ ಕುಮಾರಸ್ವಾಮಿ ಹೋಗಿರಲಿಲ್ಲ. ಆಗಲೂ ಅಸಮಾಧಾನ ಏನಿಲ್ಲ. ಮೂರು ಬಾರಿ ಶಾಸಕ ಆಗಿದ್ದೇನೆ, ನನ್ನನ್ನೂ ಸಚಿವ ಸ್ಥಾನಕ್ಕೆ ಪರಿಗಣಿಸಬೇಕಿತ್ತು. ಮುಂದೆ ಸಿಗಬಹುದು ನೋಡೋಣ ಎಂದಿದ್ದರು. ಆದರೆ ಈಗ ನಿಗಮ ಮಂಡಳಿಗೆ ನೇಮಕ ಮಾಡಿರುವುದರಿಂದ ಸರ್ಕಾರದ ವಿರುದ್ಧ ಸಹಜವಾಗಿಯೇ ಅಸಮಾಧಾನಗೊಂಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+