ಸಿ.ಟಿ.ರವಿ ವಿರುದ್ದ ಸ್ಪರ್ಧಿಸಿದರೆ 1 ಕೋಟಿ ನೀಡುತ್ತೇನೆ: ಚಿಕ್ಕಗಳೂರಿನಲ್ಲಿ ಸಿದ್ದರಾಮಯ್ಯಗೆ ಆಫರ್ ನೀಡಿದ ಅಭಿಮಾನಿ
ಚಿಕ್ಕಮಗಳೂರಿನಲ್ಲೊಬ್ಬ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿಯೋಬ್ಬರು ಆಫರ್ ನೀಡಿದ್ದಾರೆ. ಸಿ.ಟಿ ರವಿ ವಿರುದ್ಧ ಸ್ಪರ್ಧೆ ಮಾಡಿದ್ರೆ ಸಿದ್ದರಾಮಯ್ಯಗೆ ಹಣವನ್ನು ಕೊಡುವುದಾಗಿ ಹೇಳಿದ್ದಾರೆ. ಹಾಗಾದರೆ ಆಫರ್ ನೀಡಿದ ಹಣ ಎಷ್ಟು ಅಂತಾ ಇಲ್ಲಿ ತಿಳಿಯಿರಿ.
ಚಿಕ್ಕಮಗಳೂರು, ಫೆಬ್ರವರಿ, 02: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವಿನ ಕ್ಷೇತ್ರಕ್ಕಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆಯೇ ರಾಜ್ಯಾದ್ಯಂತ ಅಭಿಮಾನಿಗಳು ಸಿದ್ದರಾಮಯ್ಯಗೆ ಆಫರ್ ಮೇಲೆ ಆಫರ್ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿ ಎಂದು ಆಹ್ವಾನಿಸುತ್ತಲೇ ಇದ್ದಾರೆ. ಹಾಗೆಯೇ ಚಿಕ್ಕಮಗಳೂರಿನ ಬಾಲಕೃಷ್ಣ ಎಂಬ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿ ಒಂದು ಆಫರ್ ನೀಡಿದ್ದಾರೆ. ಸಿದ್ದರಾಮಯ್ಯನವರು ಶಾಸಕ ಸಿ.ಟಿ. ರವಿ ವಿರುದ್ಧ ಸ್ಪರ್ಧಿಸಿದರೆ ತನಗಿರುವ ಎರಡೂವರೆ ಹೆಕ್ಟೇರ್ ತೋಟವನ್ನು ಮಾರುತ್ತೇನೆ. ಮತ್ತು ಒಂದು ಕೋಟಿ ಕೊಡುವುದಾಗಿ ಸಿದ್ದರಾಮಯ್ಯ ಅವರಿಗೆ ಆಫರ್ ನೀಡಿದ್ದಾರೆ.
ಸಿದ್ದರಾಮಯ್ಯನವರು ಚಿಕ್ಕಮಗಳೂರಿನಿಂದಲೇ ಸ್ಪರ್ಧಿಸಬೇಕು ಎಂದು ಆಹ್ವಾನ ಕೂಡ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ತಾಲೂಕಿನಿಂದ ಸಿ.ಟಿ.ರವಿ ವಿರುದ್ಧ ಸ್ಪರ್ಧಿಸಿದರೆ ತನಗಿರುವ ಎರಡೂವರೆ ಹೆಕ್ಟೇರ್ ತೋಟವನ್ನು ಮಾರಿ, ಸಿದ್ದರಾಮಯ್ಯನವರಿಗೆ ಒಂದು ಕೋಟಿ ರೂಪಾಯಿ ಹಣ ನೀಡುತ್ತೇನೆ. ಅಷ್ಟೆ ಅಲ್ಲ, ಹಗಲಿರುಳು ಕಷ್ಟಪಟ್ಟು ಪ್ರಚಾರ ಮಾಡಿ ಅವರನ್ನು ಗೆದ್ದೆ ಗೆಲ್ಲಿಸುತ್ತೇವೆ ಎಂದು ಪಣ ತೊಟ್ಟಿದ್ದಾರೆ.
ನಾನು ಸಿದ್ದರಾಮಯ್ಯನ ಅಭಿಮಾನಿ
ಸಿದ್ದರಾಮಯ್ಯ ಅಭಿಮಾನಿ ಬಾಲಕೃಷ್ಣ ಅವರ ಈ ನಡೆಗೆ ಕುಟುಂಬದ ಸದಸ್ಯರು ಕೂಡ ಸಂಪೂರ್ಣವಾಗಿ ಒಪ್ಪಿಗೆ ನೀಡಿದ್ದಾರೆ. ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷದಲ್ಲಿ ಇದ್ದಾಗಿನಿಂದಲೂ ನಾನು ಅವರ ಅಭಿಮಾನಿಯಾಗಿದ್ದೇನೆ. ಅವರ ಮೇಲಿನ ಅಭಿಮಾನಕ್ಕೆ ಈ ತೀರ್ಮಾನ ಮಾಡಿದ್ದೇನೆ ಎಂದು ಬಾಲಕೃಷ್ಣ ಹೇಳಿದರು.

"ಕೈ" ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ. ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಎನ್.ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲು
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಶಿವು ಕಳೆದ ತಿಂಗಳು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ಶಾಸಕ ಟಿ.ಡಿ.ರಾಜೇಗೌಡ ಅವರ ಬೆಂಬಲಿಗರ ಕಣ್ಣು ಕೆಂಪಗಾಗಿಸಿದ್ದವು. ಬಿಜೆಪಿ ಸೇರಿದ ವಿಚಾರವಾಗಿ ಶಿವು ಜೊತೆ ಶಾಸಕರ ಹಿಂಬಾಲಕರು ಗಲಾಟೆ ಕೂಡ ಮಾಡಿದ್ದರು. ಕಿಡಿಗೇಡಿಗಳು ಬುಧವಾರ ಮನೆಗೆ ನುಗ್ಗಿ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಶಿವುನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಸಂಬಂಧ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications