ಚಿಕ್ಕಮಗಳೂರು: ಅಕ್ರಮವಾಗಿ ಹಸು-ಎಮ್ಮೆ ಸಾಗಾಟ ಮಾಡುತ್ತಿದ್ದವರ ಬಂಧನ

ಚಿಕ್ಕಮಗಳೂರು, ಅಕ್ಟೋಬರ್ 20: ಅಕ್ರಮವಾಗಿ ಹಸು-ಎಮ್ಮೆ ಸಾಗಾಟ ಮಾಡುತ್ತಿದ್ದವರನ್ನು ಚಿಕ್ಕಮಗಳೂರಿನ ಭಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ತಡರಾತ್ರಿ ತಾಲ್ಲೂಕಿನ ಮಲ್ಲೇಶ್ವರದಲ್ಲಿ ನಡೆದಿದೆ.

ಕಂಟೈನರ್ ಗಾಡಿಯಲ್ಲಿ 3 ಎಮ್ಮೆ, 3 ಕೋಣ ಮತ್ತು 2 ಎಮ್ಮೆ ಕರುಗಳು ಹಾಗೂ 3 ಸಿಂದಿ ಹಸುಗಳನ್ನು ಕೇರಳಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಪಡೆದ ಭಜರಂಗದಳದ ಕಾರ್ಯಕರ್ತರು ಪೊಲೀಸರ ಸಹಾಯದೊಂದಿಗೆ ಮಲ್ಲೇಶ್ವರದ ಬಳಿ ತಡೆದು ಹಸು ಎಮ್ಮೆಗಳನ್ನು ರಕ್ಷಿಸಿದ್ದಾರೆ.

ವಾಹನದಲ್ಲಿದ್ದ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಚಟ್ಟಚಟ್ಟಿಹಳ್ಳಿಯ ರೆಹಮಾನ್ ಮತ್ತು ಮೈಸೂರಿನ ನೂರ್ ಅಹಮದ್ ಎಂಬುವವರನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

 Chikkmagaluru: Illegally Transporting Of Cow And Buffalo In Malleshwara: Two Arrested

ಇವರುಗಳು ಕಲ್ಲಾಪುರದ ಆಲಿ ಎಂಬುವವನಿಂದ ಹಸು ಮತ್ತು ಎಮ್ಮೆಗಳನ್ನು ಖರೀದಿಸಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 Chikkmagaluru: Illegally Transporting Of Cow And Buffalo In Malleshwara: Two Arrested

Recommended Video

      ಪರಿಹಾರ ಕೊಡ್ತಾರಾ?? ನೋಡ್ಕೊಂಡು ಸುಮ್ನೆ ಹೋಗ್ತಾರಾ?? | Oneindia Kannada

      ಭಜರಂಗದಳದ ತಾಲ್ಲೂಕು ಸಂಚಾಲಕ ಅಭಿಷೇಕ್, ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಜೈನ್, ಸಚಿನ್, ದರ್ಶನ್, ಲೋಹಿತ್, ರಾಮ್ ಜಾನುವಾರು ರಕ್ಷಿಸಿದ ತಂಡದಲ್ಲಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+