ಲೈಂಗಿಕ ಕಿರುಕುಳ ಆರೋಪ:ಪೀಠ ತ್ಯಾಗ ಮಾಡಿದ ಜಯಬಸವಾನಂದ ಸ್ವಾಮೀಜಿ
ಚಿಕ್ಕಮಗಳೂರು, ಡಿಸೆಂಬರ್ 05:ಚಿಕ್ಕಮಗಳೂರು ನಗರದ ಹೊರವಲಯದಲ್ಲಿರುವ ಬಸವ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ
ಸ್ವಾಮೀಜಿ ಪೀಠ ತ್ಯಾಗ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಸ್ವಾಮೀಜಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಸ್ವಾಮೀಜಿ ವಿರುದ್ಧ ಈ ಗುರುತರ ಆರೋಪ ಹಿನ್ನಲೆಯಲ್ಲಿ ಬಸವ ಮಂದಿರ ವಿರಕ್ತ ಮಠದ ಜಯಬಸವಾನಂದ ಸ್ವಾಮೀಜಿ ಪೀಠ ತ್ಯಾಗ ಮಾಡಿದ್ದಾರೆ.

ಸದ್ಯ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಸತ್ಯಾಂಶ ಹೊರ ಬರುವ ತನಕ ಬಸವತತ್ವ ಪೀಠವನ್ನು ತ್ಯಜಿಸಲು ಸ್ವಾಮೀಜಿ ನಿರ್ಧರಿಸಿದ್ದಾರೆ. ಇದೀಗ ಪೀಠ ತ್ಯಜಿಸಿ ಸ್ವಾಮೀಜಿ ಬೆಂಗಳೂರಿಗೆ ತೆರಳಿದ್ದು, ಅವರು ಸಲ್ಲಿರುವ ರಾಜೀನಾಮೆ ಪತ್ರದಲ್ಲಿ ವಿವರ ಇಂತಿದೆ...

"ತಮ್ಮ ಮೇಲೆ ಗಂಭೀರ ಆರೋಪ ಬಂದಿರುವುದರಿಂದ ಬಸವತತ್ವ ಪೀಠದ ಪಾವಿತ್ರ್ಯವನ್ನು ಕಾಪಾಡುವ ಸಲುವಾಗಿ ಟ್ರಸ್ಟ್ ಮತ್ತು ಸಮಾಜದ ಮುಖಂಡರ ಸಲಹೆ ಮೇರೆಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ. ಚಿಕ್ಕಮಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಪ್ರಕರಣವಿದ್ದು, ಹೊರಿಸಿದ ಆರೋಪ, ಕಳಂಕದಿಂದ ಮುಕ್ತನಾಗಿ ಬರುವವರೆಗೆ ಪೀಠದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುತ್ತೇವೆ. ಸತ್ಯಕ್ಕೆ, ಸಮಾಜಕ್ಕೆ ಗೌರವ ತೋರಿಸಿ ರಾಜೀನಾಮೆ ಸಲ್ಲಿಸಿದ್ದು, ಸತ್ಯಕ್ಕೆ ಕೊನೆಯಲ್ಲಿ ಜಯ ಸಿಗಲಿದೆ" ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications