Get Updates
Get notified of breaking news, exclusive insights, and must-see stories!

ಬಂಡಾಯ ಶಮನಕ್ಕೆ ಕಾಂಗ್ರೆಸ್‌ ಯತ್ನ: ವೈಎಸ್‌ವಿ ದತ್ತಾ ನಡೆ ಇನ್ನೂ ನಿಗೂಢ!

ಚಿಕ್ಕಮಗಳೂರು, ಏಪ್ರಿಲ್‌ 08: ಕಳೆದ ನಾಲ್ಕೈದು ದಶಕಗಳಿಂದ ದೇವೇಗೌಡರಿಗೆ ಮಾನಸ ಪುತ್ರನಂತಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಾಜಿ ಶಾಸಕ ಶಾಸಕ ವೈ.ಎಸ್.ವಿ.ದತ್ತಾ ಜೆಡಿಎಸ್ ಸಖ್ಯ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಕಡೂರು ಕಾಂಗ್ರೆಸ್ ಹಾಗೂ ದತ್ತಾ ಅವರ ಅಭಿಮಾನಿಗಳಿಗೆ ಆನೆ ಬಲ ಬಂದಿತ್ತು.

ಈ ಹಿಂದೆ ಕಾಂಗ್ರೆಸ್ ಪಡಸಾಲೆಯಲ್ಲಿ ವೈ.ಎಸ್.ವಿ.ದತ್ತಾ ಅವರಿಗೆ ಟಿಕೆಟ್ ಎಂದು ಹೇಳಲಾಗ್ತಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಕಾಂಗ್ರೆಸ್‌ ವರಿಷ್ಠರು ಕೆ.ಎಸ್.ಆನಂದ್‍ಗೆ ಮಣಿ ಹಾಕಿದ್ದಾರೆ. ಇದರಿಂದ ದತ್ತಾ ಸೇರಿದಂತೆ ಅವರ ಅಪಾರ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿತ್ತು. ಹೀಗಾಗಿ ಅಭಿಮಾನಿಗಳು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ದತ್ತಾ ಕೂಡ ಇದು ಅಭಿಮಾನಿಗಳ ಆತ್ಮಗೌರವ-ಸ್ವಾಭಿಮಾನದ ಪ್ರಶ್ನೆ ಅಂತ ಭಾವನಾತ್ಮಕ ಪತ್ರ ಬರೆದು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸಿದ್ದರು.

Kadur Congress Candidate Anand Visit YSV Datta House

ಇದೀಗ, ವೈ.ಎಸ್.ವಿ.ದತ್ತಾ ಅವರ ಮನೆಗೆ ಭೇಟಿ ನೀಡ್ತಿರೋ ಅಭಿಮಾನಿಗಳು ಕಾಂಗ್ರೆಸ್ ಟಿಕೆಟ್ ಕೊಡದಿದ್ರೆ ಏನಂತೆ. ಬೇಡ. ನೀವು ಸ್ವತಂತ್ರವಾಗಿ ಚುನಾವಣೆಗೆ ನಿಲ್ಲಿ ನಾವು ಗೆಲ್ಲಿಸ್ತೀವಿ ಅಂತ ಶಪಥಗೈದಿದ್ದಾರೆ. ದತ್ತ ಕೂಡ ಕಡೂರಲ್ಲಿ 300 ಮತ ಹಾಗೂ ಹಣ ಬಲವೂ ಇಲ್ಲದ ಸಣ್ಣ ಜಾತಿ ನಂದು. ಜನ ನನ್ನ 47 ಸಾವಿರ ಮತಗಳ ಅಂತರದಿಂದ ಗೆಲ್ಲಸಿದ್ದರು. ನಾನು ಸೋತಾಗಲೂ ಎರಡನೇ ಸ್ಥಾನದಲ್ಲೇ ಇದ್ದೆ. ಜನ ಹೇಗೆ ಹೇಳುತ್ತಾರೋ ಹಾಗೇ ಮಾಡುತ್ತೇನೆ ಎಂದು ಹೇಳಿದ್ದಾರೆ

ಇನ್ನು ದತ್ತಾ ಅವರ ಭಾವನಾತ್ಮಕ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಕಡೂರಿನ ಕಾಂಗ್ರೆಸ್ ಅಭ್ಯರ್ಥಿ ಆನಂದ್, ದತ್ತಾ ಅವರ ಮನೆಗೆ ಭೇಟಿ ನೀಡಿ ಬಂಡಾಯವನ್ನು ಶಮನ ಮಾಡಲು ಮುಂದಾಗಿದ್ದಾರೆ. ಆದರೆ, ವೈ.ಎಸ್.ವಿ.ದತ್ತಾ ಅವರು ಎಲ್ಲವನ್ನೂ ಕಾರ್ಯಕರ್ತರ ಮೇಲೆ ಹಾಕಿ, ನನ್ನದೇನು ಇಲ್ಲ. ನನಗೆ ಅಭಿಮಾನಿಗಳೇ ದೇವರು. ನನ್ನನ್ನ ಬೆಳೆಸಿದ್ದೇ ಅವರು. ಅವರು ಹೇಳಿದಂತೆ, ನಾನು ಮಾಡುತ್ತೇನೆ ಎಂದು ಕಾಂಗ್ರೆಸ್‌ ವಿರುದ್ಧದ ಬಂಡಾಯವನ್ನು ಶಮನ ಮಾಡದೇ ಮುಂದುವರಿಸಿದ್ದಾರೆ ಎನ್ನಲಾಗಿದೆ.

Kadur Congress Candidate Anand Visit YSV Datta House

ಇನ್ನು ಕಡೂರಲ್ಲಿ ದತ್ತ ಅವರ ನಾಯಕತ್ವ, ಜನಬಳಕೆ, ಅಭಿಮಾನಿ ಬಳಗ ಪ್ರಶ್ನಾತೀತ. ಇಡೀ ತಾಲೂಕಲ್ಲಿ 300 ಮತವಿರುವ ಸಣ್ಣ ಸಮುದಾಯದ ದತ್ತ ಜಾತ್ಯಾತೀತ ನಾಯಕ. ಅವರು ಸ್ವಂತತ್ರವಾಗಿ ಚುನಾವಣೆ ಮಾಡಿದರೆ ಅದು ಕಾಂಗ್ರೆಸ್‌ಗೆ ಮಗ್ಗಲ ಮುಳ್ಳಾಗೋದು ಗ್ಯಾರಂಟಿ. ಯಾಕೆಂದರೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಗೆಲುವಿಗೆ ನಂಬಿರುವ ಮುಸ್ಲಿಂ ಮತಗಳು ಕಾಂಗ್ರೆಸ್‌ಗಿಂತ ದತ್ತಾ ಅವರಿಗೆ ಹೆಚ್ಚು ಮತ ಬೀಳುವುದು ಕಟ್ಟಿಟ್ಟ ಬುತ್ತಿಯಾಗಿದೆ.

ಹಾಗಾಗಿ, ಕಾಂಗ್ರೆಸ್ ಕೂಡ ಬಂಡಾಯ ಶಮನಕ್ಕೆ ಹರಸಾಹಸಪಡ್ತಿದೆ. ಈ ಮಧ್ಯೆ ದತ್ತ ಅವರು ಮತ್ತೆ ಜೆಡಿಎಸ್ ಹೋಗುತ್ತಾರೆಂಬ ಮಾತುಗಳು ಕಡೂರಲ್ಲಿ ಜನ ಜನಿತವಾಗಿದೆ. ಆದರೆ, ಎಲ್ಲವನ್ನೂ ಕಾರ್ಯಕರ್ತರ ಮೇಲೆ ಹಾಕಿರುವ ವೈ.ಎಸ್.ವಿ.ದತ್ತಾ ಅವರು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ.

ಒಟ್ಟಾರೆ, ಟಿಕೆಟ್‌ ಘೋಷಣೆ ಬಳಿಕ ಕಾಫಿನಾಡಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಅನುಕೂಲಕರ ವಾತಾವರಣಕ್ಕಿಂತ ಅನಾನುಕೂಲದ ವಾತಾವರಣವೇ ಹೆಚ್ಚಿದೆ. ಶೃಂಗೇರಿ ಕ್ಷೇತ್ರ ಒಂದನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಬಂಡಾಯ... ಬಂಡಾಯ... ಬಂಡಾಯದ ಧ್ವನಿ ಕೇಳಿ ಬರುತ್ತಿದೆ.

ಇನ್ನು ತರೀಕೆರೆ-ಚಿಕ್ಕಮಗಳೂರು-ಮೂಡಿಗೆರೆಯಲ್ಲಿ ಟಿಕೆಟ್ ಘೋಷಣೆ ಆಗಿಲ್ಲ. ಈಗಲೇ ಬಂಡಾಯ-ಅಸಮಾಧಾನ ಭುಗಿಲೆದ್ದಿದೆ. ಮಧ್ಯೆ ಮಾಜಿ ಶಾಸಕ ಶಾಸಕ ವೈ.ಎಸ್.ವಿ.ದತ್ತಾ ಕೂಡ ಕಾಂಗ್ರೆಸ್ ವಿರುದ್ಧ ಬಂಡಾಯದ ಕಹಳೆ ಊದಿರೋದು ಕಡೂರಲ್ಲಿ ಕಾಂಗ್ರೆಸ್‌ನ ಭವಿಷ್ಯಕ್ಕೆ ಅಡ್ಡಗಾಲು ಹಾಕಿದಂತಾಗಿದೆ. ಆದರೆ ಮತದಾರರು ವ್ಯಕ್ತಿ ಆಧಾರದಲ್ಲೋ ಅಥವಾ ಪಕ್ಷದ ಆಧಾರದಲ್ಲೋ ಮತ ನೀಡುತ್ತಾರಾ ಎಂದು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+