ಕಡೂರು: ಪಟಾಕಿ ವ್ಯಾಪಾರಸ್ಥರ ಮನೆಗಳ ಮೇಲೆ ಪುರಸಭಾ ಅಧಿಕಾರಿಗಳ ದಾಳಿ
ಚಿಕ್ಕಮಗಳೂರು, ಅಕ್ಟೋಬರ್, 13: ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ನಡೆದ ಪಟಾಕಿ ಅವಗಡ ದುರಂತವನ್ನು ಮನಗಂಡು ಯಾವುದೇ ಪಟಾಕಿ ಮಾರಾಟಗಾರರು ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಡೂರು, ಬೀರೂರು ಪುರಸಭಾ ಅಧಿಕಾರಿಗಳು ಬೀರೂರು ಪಟ್ಟಣದ ವಿವಿಧ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದರು.
ದಾಳಿ ಬಳಿಕ ಮಾತನಾಡಿದ ಬೀರೂರು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಸರ್ಕಾರದ ಆದೇಶ ಪಾಲನೆ ಮಾಡುವ ನಿಟ್ಟಿನಲ್ಲಿ ಪಟಾಕಿ ವ್ಯಾಪಾರಸ್ಥರ ಮನೆಗಳಿಗೆ ದಾಳಿ ನಡೆಸಲಾಗಿದೆ. ಬೀರೂರು ಪಟ್ಟಣದಲ್ಲಿ ಒಟ್ಟು 5 ಜನ ಪಟಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಯಾರ ಮನೆಯಲ್ಲೂ ಪಟಾಕಿ ದಾಸ್ತಾನು ಮಾಡಲಾಗಿಲ್ಲ. ಅವರಿಗೆ ಪಟಾಕಿ ಅವಗಡದ ಬಗ್ಗೆ ತಿಳಿಸಿದರು.

ಇನ್ನು ಪಟಾಕಿ ಗೋಡನ್ಗಳನ್ನು ಆದಷ್ಟು ಜನವಸತಿ ಪ್ರದೇಶದಿಂದ ದೂರದಲ್ಲಿ ಇರಿಸುವಂತೆ ತಿಳಿಸಲಾಗಿದೆ. ಪುರಸಭೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅಕ್ರಮವಾಗಿ ದಾಸ್ತಾನು ಸಂಗ್ರಹಿಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಪಟಾಕಿ ಮಳಿಗೆಗಳಲ್ಲಿ ಸುರಕ್ಷತಾ ಕ್ರಮಗಳ ಪರಿಶೀಲನೆ
ಬೆಂಗಳೂರಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಎಚ್ಚೆತ್ತಕೊಂಡಿರುವ ಅಧಿಕಾರಿಗಳು ನಗರದ ಪಟಾಕಿ ಮಳಿಗೆಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.
ತಹಶೀಲ್ದಾರ್ ಕಲಗೌಡ ಆರ್. ಪಾಟೀಲ ನೇತೃತ್ವದಲ್ಲಿ ಹುಬ್ಬಳ್ಳಿ ಉತ್ತರ ಮತ್ತು ದಕ್ಷಿಣ ವಿಭಾಗದ ಎಸಿಪಿಗಳಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡ 12 ಮಳಿಗೆಗಳು ಮತ್ತು 3 ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಕೆಲವು ಮಾರಾಟಗಾರರು ಪಟಾಕಿ ಸಂಗ್ರಹ ಸ್ಥಳದಲ್ಲಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸದಿರುವುದು, ಸ್ಫೋಟಕ ಸಂಗ್ರಹಣಾ ಸ್ಥಳ ಜನವಸತಿ ಪ್ರದೇಶದಲ್ಲಿರುವುದು ಕಂಡುಬಂದಿದೆ. ಕೂಡಲೇ ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
"ನಿಯಮ ಉಲ್ಲಂಘನೆ, ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡದ ಕೆಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 100 ಕೆ.ಜಿ ಪಟಾಕಿ ದಾಸ್ತಾನು ಮಾಡಿದ್ದರೆ ಅದರಲ್ಲಿ 8 ಅಗ್ನಿನಿರೋಧಕ ಸಿಲಿಂಡರ್ ಇರಬೇಕು. ಸ್ಥಳದಲ್ಲಿ 400 ಲೀಟರ್ ನೀರಿನ ಸಂಗ್ರಹ ಇರಬೇಕು. ಕೆಲವು ಅಂಗಡಿಗಳು ಇದನ್ನು ಪಾಲನೆ ಮಾಡದಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ" ಎಂದು ತಹಶೀಲ್ದಾರ್ ಕಲಗೌಡ ಆರ್.ಪಾಟೀಲ ಹೇಳಿದರು.
24 ಗಂಟೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ. ಕೆಲವರು ಈಗಾಗಲೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ. ಪರಿಶೀಲನೆ ವೇಳೆ ಕಂಡುಬಂದ ಲೋಪಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ವರದಿ ಸಲ್ಲಿಸಲಾಗುವುದು. ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸಲು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಳಿಗೆಗಳ ಮಾಲೀಕರಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಅಗ್ನಿ ಶಮನ ವ್ಯವಸ್ಥೆಗೆ ಕೈಗೊಳ್ಳಬೇಕಾದ ಕ್ರಮಗಳು
1. ಪ್ರತಿ ಮಳಿಗೆಯಲ್ಲಿ 9 ಲೀಟರ್ ಸಾಮರ್ಥ್ಯದ ವಾಟರ್ ಪ್ರೆಜರ್ ಮಾದರಿ ಅಗ್ನಿನಂದಕ ಇರಬೇಕು.
2. ಎರಡು ಬಕೆಟ್ಗಳಲ್ಲಿ ನೀರು ಇಟ್ಟಿರಬೇಕು
3. ಮಳಿಗೆಗಳಲ್ಲಿ ಅಡುಗೆ, ಧೂಮಪಾನಕ್ಕೆ ಅವಕಾಶ ಕೊಡಬಾರದು.
4. ಹಗಲು ವೇಳೆ ಮಾತ್ರ ಪಟಾಕಿ ಮಾರಾಟ ಮಾಡಬೇಕು.
ರಾತ್ರಿ ವೇಳೆ ಮಳಿಗೆಯಲ್ಲಿ ಯಾರೂ ಮಲಗಬಾರದು ಎಂದು ಸೂಚಿಸಲಾಗಿದೆ. ಇನ್ನು ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಮಾಹಿತಿ ನೀಡಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪರವಾನಗಿ ಪಡೆದ 17 ಪಟಾಕಿ ಸಂಗ್ರಹ ಗೋದಾಮುಗಳಿವೆ. ಈ ಬಗ್ಗೆ ಅಧಿಕಾರಿಗಳು ಜಂಟಿ ಪರಿಶೀಲನೆ ಮಾಡಿದ್ದಾರೆ. ಜನವಸತಿ ಪ್ರದೇಶದಲ್ಲಿ ಗೋದಾಮುಗಳಿದ್ದರೆ ಅವುಗಳ ಸ್ಥಳಾಂತರಕ್ಕೆ ನೋಟಿಸ್ ನೀಡಲಾಗುವುದು ಎಂದರು.
ಮಳಿಗೆ ನಿರ್ಮಾಣ ಹೇಗಿರಬೇಕು?
1. ಗೋದಾಮುಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು.
2. ನಿರ್ಮಾಣಕ್ಕೆ ಬಳಸುವ ವಸ್ತುಗಳು ಸುಲಭವಾಗಿ ಬೆಂಕಿ ನಂದಿಸುವಂತಿರಬೇಕು.
3. ಪ್ರತಿ ಮಳಿಗೆಗೆ ಹಿಂದಿನಿಂದ ಮತ್ತು ಮುಂದಿನಿಂದ ಪ್ರವೇಶಕ್ಕೆ ವ್ಯವಸ್ಥೆ ಇರಬೇಕು.
4. ಮಳಿಗೆಗಳ ಗಾತ್ರ 10X10ಗೆ ಸೀಮಿತಗೊಳಿಸಬೇಕು, ಹೆಚ್ಚಿನ ದಾಸ್ತಾನು ಮಾಡಬಾರದು.
5. ಮಳಿಗೆಯಿಂದ ಮಳಿಗೆಗೆ 10 ಮೀಟರ್ ಅಂತರ ಕಾಯ್ದುಕೊಳ್ಳಬೇಕು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications