ಕಡೂರು: ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವಾದರೆ ಅಂತಹವರ ಪಟ್ಟಿ ತಯಾರಿಸಿ ವರದಿ ನೀಡಿ: ಶಾಸಕ ಆನಂದ್
ಚಿಕ್ಕಮಗಳೂರು, ಅಕ್ಟೋಬರ್, 04: ಸರ್ಕಾರದ ಗೃಹಲಕ್ಷ್ಮಿ, ಅನ್ನಭಾಗ್ಯ ಮುಂತಾದ ಯೋಜನೆಗಳ ಹಣವನ್ನು ಯಾವುದೇ ಬ್ಯಾಂಕುಗಳು ಸಾಲಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ. ಯಾರಿಗಾದರೂ ಹಣ ಬಂದಿಲ್ಲವಾದರೆ ಅಂತಹವರ ಪಟ್ಟಿ ತಯಾರಿಸಿ ವರದಿ ನೀಡಿ ಎಂದು ಶಾಸಕ ಆನಂದ್ ಅಧಿಕಾರಿಗಳಿಗೆ ಸೂಚಿಸಿದರು.
ಕಡೂರಿನಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಸಂಪೂರ್ಣ ಅನುಷ್ಟಾನವಾಗಬೇಕು. ಸರ್ಕಾರ ನೀಡುವ ಹಣ ಅರ್ಹರಿಗೆ ಸಕಾಲದಲ್ಲಿ ತಲುಪಬೇಕು. ಅಕಸ್ಮಾತ್ ಯಾರಿಗಾದರೂ ಹಣ ತಲುಪುವಲ್ಲಿ ವಿಳಂಬವಾಗಿದ್ದರೆ ಆಶಾ ಕಾರ್ಯಕರ್ತೆಯರ ಸಹಕಾರ ಪಡೆದು ಅಂತಹವರ ವಿವರ ಸಂಪಾದಿಸಿ ಶೀಘ್ರಕ್ರಮ ಕೈಗೊಳ್ಳಿ ಎಂದು ಸಿಡಿಪಿಓ ಶಿವಪ್ರಕಾಶ್ ಅವರಿಗೆ ಸೂಚನೆ ನೀಡಿದರು.
ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ವಿಳಂಬವಾಗುತ್ತಿದೆ. ಯಾವುದೇ ಕಾರಣವಿರಲಿ ಗುತ್ತಿಗೆದಾರರಿಗೆ ಚುರುಕು ಮುಟ್ಟಿಸಿ ಕಾಮಗಾರಿ ಶೀಘ್ರ ಮುಗಿಯುವಂತೆ ಕ್ರಮ ಕೈಗೊಳ್ಳಬೇಕು. ಎರಡೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳನ್ನು ಮುಗಿಸಿ ಒಟ್ಟಿಗೆ ಉದ್ಘಾಟನೆ ಮಾಡುವಂತೆ ಕಾರ್ಯಕ್ರಮ ರೂಪಿಸಿ ಎಂದು ಸೂಚನೆ ನೀಡಿದರು.
ಕೆಲವರಿಗೆ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ
ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವರಿಗೆ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ. ಕೆಲ ಕುಟುಂಬದ ಯಜಮಾನಿ ಯಾರೆಂಬ ಗೊಂದಲದಲ್ಲಿ ಅವರು ಇನ್ನೂ ಅರ್ಜಿ ಹಾಕಿಲ್ಲ. ಇದರ ಜೊತೆ ಯಾವ ಖಾತೆಗೆ ಹಣ ಹೋಗಿದೆಯೆಂಬ ಬಗ್ಗೆ ಹಲವಾರು ಜನರು ಗೊಂದಲಕ್ಕೊಳಗಾಗಿದ್ದಾರೆ. ಯೋಜನೆಯಲ್ಲಿ ಯಾವುದೇ ಲೋಪವಾಗದಂತೆ ಅರ್ಹ ಫಲಾನುಭವಿಗಳಿಗೆ ಹಣ ತಲುಪುವಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಖರಾಯಪಟ್ಟಣದ ಕೃಷಿ ಇಲಾಖೆ ಕಟ್ಟಡ ಶಿಥಿಲವಾಗಿದ್ದು, ಅಲ್ಲಿ ನಿವೇಶನ ದೊರೆತಿದೆ. ಕಟ್ಟಡಕ್ಕಾಗಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೃಷಿ ಸಹಾಯಕ ನಿರ್ದೇಶಕ ತಿಮ್ಮನಗೌಡ ಪಾಟೀಲ್ ಅವರು ತಿಳಿಸಿದಾಗ, ಶಾಸಕನಾಗಿ ನಾಲ್ಕು ತಿಂಗಳು ಕಳೆದರೂ ಈ ಬಗ್ಗೆ ನಮ್ಮ ಬಳಿ ಚರ್ಚೆ ನಡೆಸಬೇಕೆಂದು ಅನಿಸಿಲ್ಲವೆ ಎಂದು ಶಾಸಕ ತಮ್ಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications