ಕಡೂರು; ಸೋಮನಹಳ್ಳಿ ತಾಂಡದ ರಕ್ಷಿತಾ ಕುಟುಂಬಕ್ಕೆ ಇದುವರೆಗೂ 10 ಲಕ್ಷ ಪರಿಹಾರ
ಚಿಕ್ಕಮಗಳೂರು, ಸೆಪ್ಟೆಂಬರ್, 27: ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡದ ರಕ್ಷಿತಾ ಬಾಯಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಭೈರತಿ ಬಸವರಾಜ್ ಭೇಟಿ ನೀಡಿದ್ದಾರೆ. ಮಗಳು ರಕ್ಷಿತಾಳ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದ ಕುಟುಂಬಕ್ಕೆ ಸಚಿವ ಭೈರತಿ ಬಸವರಾಜ್ 8 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು. ಭೈರತಿ ಬಸವರಾಜ್ ವ್ಯಯಕ್ತಿಕ 2 ಲಕ್ಷ ರೂಪಾಯಿ ನೀಡಿದ್ದು, ಇದುವರೆಗೂ ರಕ್ಷಿತಾ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಿದ್ದಾರೆ.
2 ಲಕ್ಷ ರೂ. ಪರಿಹಾರ ನೀಡಿದ ಭೈರತಿ ಬಸವರಾಜ್
ಜಿಲ್ಲಾಡಳಿತದಿಂದ 5 ಲಕ್ಷ ರೂಪಾಯಿ, ಭೈರತಿ ಬಸವರಾಜ್ ವೈಯಕ್ತಿಕ 2 ಲಕ್ಷ ರೂಪಾಯಿ, ತಾಂಡ ನಿಗಮದಿಂದ 1 ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದ್ದಾರೆ. ಇನ್ನು ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ಪರಿಹಾರವನ್ನು ಮಂಜೂರು ಮಾಡಲಾಗಿತ್ತು. ಎಂಟು ದಿನದ ಹಿಂದೆ ಬಸ್ ಹತ್ತುವಾಗ ರಕ್ಷಿತಾ ಬಿದ್ದಿದ್ದು, ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಬಳಿಕ ವೈದ್ಯರ ಸಲಹೆಯ ಮೇರೆಗೆ ಕುಟುಂಬದವರು ರಕ್ಷಿತಾಳ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದರು. ಈ ಮೂಲಕ 9 ಜನರ ಜೀವನಕ್ಕೆ ಬೆಳಕಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಚಿಕ್ಕಮಗಳೂರು ನಗರದಲ್ಲಿ ರಕ್ಷಿತಾ ಪ್ರಥಮ ಪಿಯುಸಿ ಓದುತ್ತಿದ್ದಳು. ಬಸ್ಸಿನಿಂದ ಬಿದ್ದ ಬಳಿಕ ಆಕೆಯ ಮೆದುಳು ನಿಷ್ಕ್ರಿಯಗೊಂಡಿತ್ತು. ಹಾಗಾಗಿ ಕುಟುಂಬಸ್ಥರು ಆಕೆಯ ಎಲ್ಲಾ ಅಂಗಾಂಗಗಳನ್ನು ದಾನ ಮಾಡಿದ್ದರು. ಹೀಗೆ ರಕ್ಷಿತಾ ಒಂಬತ್ತು ಜನರ ಜೀವನಕ್ಕ ಬೆಳಕಾಗಿದ್ದಾರೆ.

ರಕ್ಷಿತಾ ಕುಟುಂಬಕ್ಕೆ 8 ಲಕ್ಷ ಪರಿಹಾರ
ಚಿಕ್ಕಮಗಳೂರು ಜಿಲ್ಲೆ ಸೋಮನಹಳ್ಳಿ ತಾಂಡದ ಪಿಯು ವಿದ್ಯಾರ್ಥಿನಿ ರಕ್ಷಿತಾ ಸಾವನ್ನಪಿದ್ದು, ಆಕೆಯ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಲು ಒಪ್ಪಿದ್ದರು. ಹೀಗೆ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬಕ್ಕೆ 8 ಲಕ್ಷ ಪರಿಹಾರವನ್ನು ನೀಡಲಾಗಿದೆ. ಮೆದುಳು ನಿಷ್ಕ್ರಿಯಗೊಂಡ ಬಳಿಕ ರಕ್ಷಿತಾಳ 9 ಅಂಗಾಂಗಗಳನ್ನು ದಾನ ಮಾಡಿದ್ದ ಕುಟುಂಬಸ್ಥರಿಗೆ ಪರಿಹಾರವನ್ನು ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಕ್ಷಿತಾ ಬಸ್ ಹತ್ತುವಾಗ ಬಿದ್ದಿದ್ದಳು. ಪರಿಣಾಮ ಮೆದುಳು ನಿಷ್ಕ್ರಿಯಗೊಂಡು ಆಕೆ ಸಾವನ್ನಪ್ಪಿದ್ದಳು. ನಂತರ ವೈದ್ಯರ ಸಲಹೆಯ ಮೇರೆಗೆ ಆಕೆಯ ಪೋಷಕರು ಮಗಳ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆಯನ್ನು ಸೂಚಿಸಿದ್ದರು.

ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದ ರಕ್ಷಿತಾಳ ಕುಟುಂಬಕ್ಕೆ 8 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ತಾಂಡ ಅಭಿವೃದ್ಧಿ ನಿಗಮದಿಂದ 1 ಲಕ್ಷ ಪರಿಹಾರ ನೀಡಲಾಗಿತ್ತು. ಇನ್ನು ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ಪರಿಹಾರವನ್ನು ಮಂಜೂರು ಮಾಡಲಾಗಿತ್ತು. ಸಾವನ್ನಪಿದ ರಕ್ಷಿತಾಳನ್ನು ನೆನೆದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರೆಲ್ಲ ಕಣ್ಣೀರಿಟ್ಟಿದ್ದರು. ರಕ್ಷಿತಾಗೆ ಸಾವಿರಾರು ವಿದ್ಯಾರ್ಥಿನಿಯರು ಕಣ್ಣೀರಿನ ವಿದಾಯ ಹೇಳಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications