ಒಂದೇ ಗಂಟೆಯಲ್ಲಿ 1 ಎಕರೆ ಕಾಫಿತೋಟ ನೆಲಸಮ: ಕಳಸದಲ್ಲಿ ಅರಣ್ಯಾಧಿಕಾರಿಗಳ ದೌರ್ಜನ್ಯ
ಚಿಕ್ಕಮಗಳೂರು, ಸೆಪ್ಟೆಂಬರ್ 25 :40 ವರ್ಷಗಳ ಹಿಂದೆ ಸರ್ಕಾರವೇ ತಾತ್ಕಾಲಿಕ ಸಾಗುವಳಿ ಚೀಟಿ ನೀಡಿದ್ದ ಒಂದು ಎಕರೆ ಜಾಗದಲ್ಲಿ ಕಾಫಿ-ಮೆಣಸು ಬೆಳೆದುಕೊಂಡು ಜೀವನ ಸಾಗಿಸುತ್ತಿದ್ದ ಸಣ್ಣ ಹಾಗೂ ಬಡ ಕುಟುಂಬಗಳ ಮೇಲೆ ಅರಣ್ಯಾಧಿಕಾರಿಗಳು ದೌರ್ಜನ್ಯ-ದಬ್ಬಾಳಿಕೆ ಮೆರೆದಿರುವ ಆರೋಪ ಕೇಳಿಬಂದಿದೆ.
ಮಳೆ, ಕಾಡಾನೆ ಹಾವಳಿಯ ನಡುವೆ ಕಷ್ಟಪಟ್ಟು ಬೆಳೆದಿದ್ದ ಒಂದು ಎಕೆರೆ ಕಾಫಿಯನ್ನು ಅರಣ್ಯ ಅಧಿಕಾರಿಗಳು ಏಕಾಏಕಿ ಕಡಿದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸುಕುನ್ ಕೊಳಲು ಎಂಬ ಗ್ರಾಮದಲ್ಲಿ ನಡೆದಿದೆ.

ಸುಕುನ್ ಕೊಳಲು ಗ್ರಾಮದ ಸೋಮಯ್ಯ ಎಂಬುವರಿಗೆ ಸೇರಿದ ಬೆಳೆದು ನಿಂತಿದ್ದ ಒಂದು ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಸಿಬ್ಬಂದಿ ಒಂದೇ ಗಂಟೆಯಲ್ಲಿ ಕಡಿದು ನೆಲಸಮ ಮಾಡಿದ್ದಾರೆ. ತೋಟದಲ್ಲಿ ಯಾರು ಇಲ್ಲದಿದ್ದಾಗ ನುಗ್ಗಿದ ಅರಣ್ಯಾಧಿಕಾರಿಗಳು
ಕಾಫಿ, ಮೆಣಸು, ಬಾಳೆ ಸೇರಿದಂತೆ ಇನ್ನಿತರ ಬೆಳೆಗಳನ್ನು ಮನುಷ್ಯತ್ವವನ್ನು ಮರೆತು ಕಡಿದು ಹಾಕಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ.
ಯಾವುದೇ ನೋಟಿಸ್ ನೀಡದೇ, ಮಾಹಿತಿಯನ್ನು ಕೊಡದೆ ಮಕ್ಕಳಂತೆ ಸಾಕಿದ್ದ ಬೆಳೆಯನ್ನು ಕಡಿದು ನಾಶಪಡಿಸಿದ್ದಕ್ಕೆ ಬೆಳೆ ಕಡಿಯುವ ಬದಲು ನಮ್ಮನ್ನೇ ಕಡಿಯಬಹುದಿತ್ತು ಎಂದು ತೋಟದ ಮಾಲೀಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

1997ರಲ್ಲಿ ಸ್ಥಳೀಯ ತಹಶೀಲ್ದಾರರು ಸಾಗುವಳಿ ಮಾಡುವಂತೆ ನೀಡಿದ ಜಮೀನು ಇದು. ಆದರೆ, ಒಂದು ಕ್ಷಣ ಯೋಚನೆ ಮಾಡದೆ ಇಡೀ ತೋಟವನ್ನು ಕಡಿದು ಸರ್ವನಾಶ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬಡ ಕುಟುಂಬದ ಕಣ್ಣೀರಿಗೆ ಕಾರಣರಾಗಿದ್ದಾರೆ.
ವರ್ಷಾನುಗಟ್ಟಲೆ ಮಕ್ಕಳಂತೆ ಸಾಕಿ ಸಲಹಿ, ಫಲ ಬಿಡುತ್ತಿದ್ದ ಸಂದರ್ಭದಲ್ಲಿ ಕೊರಳು ಹಿಸುಕಿ ನಾಶ ಮಾಡಿದ್ದಾರೆ ಎಂದು ತೋಟದ ಮಾಲೀಕ ಕಾರ್ಮಿಕ ಮಹಿಳೆ ತೋಟದ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ.

ಇಡೀ ರಾಜ್ಯದಲ್ಲಿ ಅಕ್ರಮ ಒತ್ತುವರೆಗೆ ಮೊದಲ ಸ್ಥಾನ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಭಾವಿಗಳದ್ದೇ ಮೇಲುಗೈ. ಆದರೆ, ಜೀವನೋಪಾಯಕ್ಕಾಗಿ ಸರ್ಕಾರದಿಂದಲೇ ನೀಡಿದ ಭೂಮಿಯಲ್ಲಿ ತೋಟ ಮಾಡಿದ್ದ ಬಡ ಕುಟುಂಬದ ಒಂದು ಎಕರೆ ಮೇಲೆ ಅರಣ್ಯ ಇಲಾಖೆ ಮಾಡಿರುವ ದೌರ್ಜನ್ಯ ರೈತರನ್ನು ಕಂಗೆಡಿಸಿದೆ. ಇಲ್ಲಿನ ಏಳೆಂಟು ಕುಟುಂಬಗಳು ಸರ್ಕಾರವೇ ಕೊಟ್ಟ ಜಮೀನಿನಲ್ಲಿ ಸಾಗುವಳಿ ಮಾಡಿದ್ದಾರೆ. ಒಂದಿಂಚು ಭೂಮಿಯನ್ನೂ ಒತ್ತುವರಿ ಮಾಡಿಲ್ಲ. ಆದರೆ ಅಧಿಕಾರಿಗಳು ಹೇಳದೆ-ಕೇಳದೆ ಏಕಾಏಕಿ ಬಂದು ಇಡಿ ತೋಟವನ್ನು ಕಡಿದು ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications