ಬಯಲಾಯ್ತು ಕಳಸ ಅರಣ್ಯಾಧಿಕಾರಿಯ ಬಣ್ಣ, ಅರಣ್ಯ ರಕ್ಷಕನ ಮೇಲೆಯೇ ಹಲ್ಲೆ!
ಚಿಕ್ಕಮಗಳೂರು, ಫೆಬ್ರವರಿ 15: ಸಮವಸ್ತ್ರದಲ್ಲಿದ್ದ ಅರಣ್ಯ ರಕ್ಷಕನಿಗೆ ಕಚೇರಿಯಲ್ಲಿಯೇ ಅರಣ್ಯಾಧಿಕಾರಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ನಕಲಿ ದಾಖಲೆಗಳಗೆ ಸಹಿ ಮಾಡಲು ನಿರಾಕರಿಸಿದ್ದಕ್ಕೆ ಉಪ ವಲಯ ಅರಣ್ಯಾಧಿಕಾರಿ ಎಂ ವೀರಭದ್ರಪ್ಪ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕಚೇರಿಯಲ್ಲಿಯೇ ಶರ್ಟ್ ಕಾಲರ್ ಹಿಡಿದು ಹಲ್ಲೆ ನಡೆಸಿರುವ ವೀಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದ್ದು, ಅರಣ್ಯಾಧಿಕಾರಿಯ ಬಣ್ಣ ಈ ಮೂಲಕ ಬಯಲಾಗಿದೆ.
ಇನ್ನು ಹಲ್ಲೆಗೊಳಗಾದ ಕೀರ್ತನ್ ಕಳಸ ಪ್ರಾಥಮಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಲ್ಲೆಗೊಳಗಾದ ಕೀರ್ತನ್ ಕಳಸ ವಲಯದ ಬಾಳೆಹೊಳೆ ಶಾಖೆಯ ತೋಟದೂರು ಬೀಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ನಿನ್ನೆ ಗುರುವಾರ (ಫೆ14) ಸರ್ಕಾರಿ ಜಮೀನು ಅಕ್ರಮ ಸಕ್ರಮ ಕುರಿತಂತೆ 94 (ಸಿ) ಪ್ರಕರಣದಡಿಯಲ್ಲಿ ಇಲಾಖೆ ಅಭಿಪ್ರಾಯ ಕುರಿತು ಪಂಚನಾಮೆ, ನಕಾಶೆಗಳನ್ನು ವೀರಭದ್ರಪ್ಪ ತಾವೇ ತಯಾರಿಸಿ ಅವುಗಳನ್ನು ತೋರಿಸದೇ ದಾಖಲೆಗಳನ್ನು ಮುಚ್ಚಿಟ್ಟು ಅರಣ್ಯ ರಕ್ಷಕರಿಗೆ ಸಹಿ ಹಾಕಲು ಒತ್ತಾಯ ಮಾಡಿದ್ದು, ಸಹಿ ಮಾಡಲು ನಿರಾಕರಿಸಿದಾಗ ಅರಣ್ಯ ರಕ್ಷಕರ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications