11 ವರ್ಷದ ನಂತರ ತುಂಬಿದ ಕಳಸಾಪುರ ದೊಡ್ಡ ಕೆರೆ
ಚಿಕ್ಕಮಗಳೂರು, ಅಕ್ಟೋಬರ್ 12: ಬರೋಬ್ಬರಿ 11 ವರ್ಷಗಳ ಬಳಿಕ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ದೊಡ್ಡ ಕೆರೆ ಭರ್ತಿಯಾಗಿ ಕೋಡಿ ಬೀಳುವ ಮೂಲಕ ಈ ಭಾಗದ ರೈತರಲ್ಲಿ ಸಂತೋಷ ತಂದಿದೆ.
ಹನ್ನೊಂದು ವರ್ಷಗಳಿಂದ ತೀರ್ವ ಬರಗಾಲಕ್ಕೆ ತುತ್ತಾಗಿ ಬಳಲಿ ಬೆಂಡಾಗಿದ್ದ ಗಾಳಿಕೆರೆ, ಹಿರೆಹಳ್ಳಿ, ಕಳಸಾಪುರ ಗ್ರಾಮಗಳಲ್ಲಿ ಕೆರೆ ತುಂಬಿದ್ದಕ್ಕೆ ಪ್ರತಿ ಮನೆಗಳಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕರಗಡ ಯೋಜನೆಯಲ್ಲಿ ಪೈಪ್ ಗಳ ಮೂಲಕ ಕಳೆದ 2 ತಿಂಗಳಿನಿಂದಲೂ ನೀರು ಹಾಯಿಸಲಾಗುತ್ತಿತ್ತು. ಆದರೂ ಕೆರೆ ತುಂಬದೆ ಜನರಲ್ಲಿ ನಿರಾಸೆ ಮೂಡಿಸಿತ್ತು.

ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಸುರಿದ ಭಾರೀ ಮಳೆಗೆ ಕಳಸಾಪುರ ಕೆರೆ ತುಂಬಿ ಕೋಡಿ ಒಡೆದಿದೆ. ಒಂದು ದಶಕದಿಂದ ಕೆರೆಯಲ್ಲಿ ನೀರಿಲ್ಲದೆ ಸುತ್ತಲಿನ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ರೈತರ ತೋಟಗಳು ಸಂಪೂರ್ಣ ಒಣಗಿ ಹೋಗಿದ್ದವು. ಆದರೆ ಈ ವರ್ಷದ ಉತ್ತಮ ಮಳೆಗೆ ಕೆರೆ ಭರ್ತಿಯಾಗಿದೆ. ಇನ್ನೂ ಎರಡು ಕೆರೆಗಳು ತುಂಬುವ ನಿರೀಕ್ಷೆಯಿದ್ದು, ಜನರಲ್ಲಿ ಆಶಾಭಾವನೆ ಮೂಡಿಸಿದೆ.
More From
-
Monsoon Rain: ಮಾನ್ಸೂನ್ ಮಳೆ ಮೇಲೆ ಎಲ್ನಿನೋ ಪ್ರಭಾವ; ಬರಗಾಲ, ಯುದ್ಧದಿಂದ ಪರಿಣಾಮ ತೀವ್ರ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ












Click it and Unblock the Notifications