SSLC Result: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಚಿಕ್ಕಮಗಳೂರಿನ ತನ್ಮಯಿ
ಚಿಕ್ಕಮಗಳೂರು, ಆಗಸ್ಟ್ ೧೦: ಕೊರೊನಾ ವೈರಸ್ ಆತಂಕದ ನಡುವೆಯೇ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಚಿಕ್ಕಮಗಳೂರು ತಾಲ್ಲೂಕು ಇಂದಾವರ ಗ್ರಾಮದ ಐ.ಪಿ ತನ್ಮಯಿ ಎಂಬ ವಿದ್ಯಾರ್ಥಿನಿಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದವರಲ್ಲಿ ಒಬ್ಬರಾಗಿದ್ದಾರೆ.
Recommended Video
ಸಂತ ಜೋಸೆಫರ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯಾಗಿರುವ ಐ.ಪಿ ತನ್ಮಯಿ, 625ಕ್ಕೆ 625 ಅಂಕ ಪಡೆದಿದ್ದಾಳೆ. ತಂದೆ ಪ್ರಸನ್ನ ಉಪ ತಹಶೀಲ್ದಾರ್, ತಾಯಿ ಸಂದ್ಯಾ ಶಿಕ್ಷಕಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಂಡ್ಯದಲ್ಲಿ 625ಕ್ಕೆ 625 ಪಡೆದ ಕೋಲಾರ ಮೂಲದ ಪ್ರತಿಭೆ
ಮಂಡ್ಯದ ವಸತಿ ಶಾಲೆಯಲ್ಲಿ ಓದಿರುವ ವಿದ್ಯಾರ್ಥಿ ಧೀರಜ್ ರೆಡ್ಡಿ, ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿದ್ದಾರೆ. ಮೂಲತಃ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದವನಾಗಿದ್ದಾನೆ.

1 ರಿಂದ 8 ನೇ ತರಗತಿವರೆಗೂ ಗ್ರಾಮೀಣ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದು, 9 ಹಾಗೂ 10 ನೇ ತರಗತಿಯನ್ನು ಮಂಡ್ಯದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದನು. ಮೊದಲಿನಿಂದಲೂ ಧೀರಜ್ ರೆಡ್ಡಿ ತರಗತಿಯಲ್ಲಿ ಟಾಪರ್ ಆಗಿದ್ದನು. ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಬಂದಿದಕ್ಕೆ ಮನೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
ಐಎಎಸ್ ಕನಸು ಕಂಡಿರುವ ಧೀರಜ್ ರೆಡ್ಡಿ, ನನ್ನ ಸಾಧನೆಗೆ ಪೋಷಕರ ಮಾರ್ಗದರ್ಶನ ಕಾರಣ. ಪೋಷಕರು ಇಬ್ಬರೂ ಶಿಕ್ಷಕರಾಗಿದ್ದಕ್ಕೆ ಅಗತ್ಯ ಮಾರ್ಗದರ್ಶನ ಸಿಕ್ಕಿತು. ಮಂಡ್ಯದ ಸತ್ಯ ಸಾಯಿ ಸರಸ್ವತಿ ಶಾಲೆಯಲ್ಲಿ ಉತ್ತಮ ಕಲಿಕಾ ವ್ಯವಸ್ಥೆ ಇದ್ದ ಕಾರಣ ಉತ್ತಮ ಫಲಿತಾಂಶ ಬರಲು ಕಾರಣವಾಯಿತು ಎಂದು ಪ್ರತಿಕ್ರಿಯಿಸಿದನು.

ಸಾಧನೆ ಮಾಡಬೇಕೆಂಬ ಹಂಬಲ ಇದ್ದರೆ ಎಲ್ಲವೂ ಸಾಧ್ಯ, ಮುಂದೆ ನಾನು ಸೈನ್ಸ್ ವಿಭಾಗದಲ್ಲಿ ಓದಲು ಬಯಸಿದ್ದೇನೆ ಎಂದು ಟಾಪರ್ ವಿದ್ಯಾರ್ಥಿ ಧೀರಜ್ ರೆಡ್ಡಿ ತಿಳಿಸಿದನು.
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications