ಸ್ಥಗಿತಗೊಳ್ಳುವ ಭೀತಿಯಲ್ಲಿ ಕೊಪ್ಪದ ಸಹಕಾರ ಸಾರಿಗೆ: ಸಿಎಂ ಆದೇಶಕ್ಕೂ ಬೆಲೆಯಿಲ್ಲ
ಚಿಕ್ಕಮಗಳೂರು, ಫೆಬ್ರವರಿ 16: ಕಾರ್ಮಿಕರೇ ಕಟ್ಟಿ ಕಾರ್ಮಿಕರೇ ಮಾಲೀಕರಾಗಿ 30 ವರ್ಷ ಮಲೆನಾಡಿನ ಹಳ್ಳಿಗರ ಮನೆ-ಮನ ಮುಟ್ಟಿದ ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆಯು ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವ ಹಂತಕ್ಕೆ ತಲುಪಿದೆ.
ಒಂದು ಕಾಲದಲ್ಲಿ ಅನಭಿಶಕ್ತ ದೊರೆಯಂತೆ ಮೆರೆದ ಸಹಕಾರ ಸಂಸ್ಥೆಯಲ್ಲೀಗ ಅಸಹಕಾರ. ಸಂಬಳ ಕೊಡೋಕು ಆಗದೇ ಮುಚ್ಚುವ ಹೊಸ್ತಿಲಲ್ಲಿದೆ. ಕಾರ್ಮಿಕರ ಮನವಿಗೆ ಸರ್ಕಾರದ ಬಳಿಯೂ ಉತ್ತರವಿಲ್ಲ. ಏಕೆಂದರೆ..
ಖುದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಹಕಾರ ಸಾರಿಗೆ ಸಂಸ್ಥೆಗೆ ಅನುದಾನ ನೀಡಲು ಒಪ್ಪಿಗೆ ಕೊಟ್ಟರೂ ಹಣಕಾಸು ಇಲಾಖೆ ಅಧಿಕಾರಿಗಳಿಂದ ತಿರಸ್ಕಾರವಾಗಿದೆ.

ಸಿಎಂ ಯಡಿಯೂರಪ್ಪ ಸಹಿ ಹಾಕಿದ ಫೈಲ್ ಹಣಕಾಸು ಇಲಾಖೆಯಲ್ಲಿ ತಿರಸ್ಕಾರವಾಗಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆ ಕಾರ್ಮಿಕರು ಈಗ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುದಾನ ನೀಡೋಕೆ ಕಳೆದ ವರ್ಷವೇ ಹಣಕಾಸು ಇಲಾಖೆಗೆ ಸೂಚಿಸಿದ್ದರು. ಆದರೆ ಹಣಕಾಸು ಇಲಾಖೆಯಿಂದ ಸಹಕಾರ ಸಾರಿಗೆಗೆ ಅನುದಾನ ನೀಡೋಕೆ ಸಾಧ್ಯವಿಲ್ಲ ಅನ್ನೋ ಉತ್ತರ ಬಂದಿದೆ.

ಒಂದು ವೇಳೆ ಅನುದಾನ ಸಿಗದೇ ಹೋದರೆ 29 ವರ್ಷದ ಟಿಸಿಎಸ್ ಕೊಪ್ಪ ಬಸ್ ಗಳು ರೋಡ್ ಗಿಳಿಯೋದೆ ಕಷ್ಟದ ಸ್ಥಿತಿ ಎಂಬಂತಾಗಿದೆ.
ಚಿಕ್ಕಮಗಳೂರು-ಉಡುಪಿ-ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಚರಿಸುವ ಟಿಸಿಎಸ್ ಕೊಪ್ಪ ಬಸ್ ಗಳು ಸ್ಥಗಿತಗೊಳ್ಳುವ ಹಂತಕ್ಕೆ ಬಂದಿವೆ.
ಸಹಕಾರ ಸಂಸ್ಥೆ ಈಗ ಸರ್ಕಾರದ ನೀತಿ-ನಿರ್ಧಾರಗಳು, ಡೀಸೆಲ್ ಬೆಲೆ, ವಿಮೆ-ಟ್ಯಾಕ್ಸ್ ಮಧ್ಯೆ ಸಂಬಳ ನೀಡೋಕು ಆಗ್ದೆ ಬಾಗಿಲು ಹಾಕುವ ಹೊಸ್ತಿಲಲ್ಲಿದೆ. ಸಹಕಾರ ಕೋರಿ ಸರ್ಕಾರದ ಕದ ಬಡಿದ್ರು ಉಪಯೋಗವಿಲ್ಲ.

1990 ರಲ್ಲಿ ಶಂಕರ್ ಟ್ರಾನ್ಸ್ ಪೋರ್ಟ್ ಮುಚ್ಚಿದ ಬಳಿಕ ಅಲ್ಲಿದ್ದ ಕಾರ್ಮಿಕರು ತಮಗೆ ಬಂದ ಪರಿಹಾರದ ಹಣದಿಂದಲೇ ಕಟ್ಟಿಕೊಂಡ ಸಂಸ್ಥೆ. ಅಂದಿನಿಂದ ಈ ಬಸ್ ಮಲೆನಾಡ ಮನೆ-ಮನಗಳ ಮಧ್ಯೆ ಬಾಂಧವ್ಯ ಬೆಸೆದಿತ್ತು.
ತಿಂಗಳಿಗೆ ಡೀಸೆಲ್ ನಿಂದ 24 ಲಕ್ಷ ನಷ್ಟವಾದರೆ, ವರ್ಷಕ್ಕೆ ಒಂದೂವರೆ ಕೋಟಿ ಟ್ಯಾಕ್ಸ್, ಜೊತೆಗೆ, ರಿಯಾಯಿತಿ ಪಾಸ್ ನ ಹೊರೆ. ಹಾಗಾಗಿ ಡೀಸೆಲ್ ಸಬ್ಸಿಡಿ, ಟ್ಯಾಕ್ಸ್ ಕಡಿತ ಹಾಗೂ ಪಾಸ್ ಗಳ ಉಳಿಕೆ ಹಣವನ್ನು ನೀಡುವಂತೆ ಸರ್ಕಾರದ ಸಹಾಯ ಹಸ್ತವನ್ನು ಎದುರು ನೋಡುತ್ತಿತ್ತು, ಆದರೆ ಈಗ ಹಣಕಾಸು ಇಲಾಖೆ ನಡುನೀರಲ್ಲಿ ಕೈಬಿಟ್ಟಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications