Get Updates
Get notified of breaking news, exclusive insights, and must-see stories!

ಕೊಟ್ಟಿಗೆಹಾರ: ಸದಾ ಪ್ರವಾಸಿಗರಿಂದ ಗಿಜಿಗುಡುವ ಈ ಸ್ಥಳದಲ್ಲಿ ತೇಜಸ್ವಿ ಕೃತಿಗಳ ಓದಿನ ಸದ್ದು

ಕೊಟ್ಟಿಗೆಹಾರ, ಜನವರಿ, 29: ಸದಾ ಪ್ರವಾಸಿಗರಿಂದ ಗಿಜಿಗುಡುವ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಪರಿಸರ ಸಂರಕ್ಷಣೆಯ ಕುರಿತ ತೇಜಸ್ವಿ ಅವರ ಕೃತಿಗಳ ಓದಿನ ಸದ್ದು ಎಲ್ಲೆಡೆ ಮನೆ ಮಾಡಿದ್ದು, ಒಂದು ಕ್ಷಣ ತಮ್ಮನ್ನು ತಾವು ಮರೆತು ತೇಜಸ್ವಿ ಕೃತಿಗಳ ಓದಿನ ಸದ್ದನ್ನು ಕೇಳುತ್ತಿರುವವರ ಈ ದೃಶ್ಯಗಳು ಗಮನ ಸೆಳೆದಿವೆ.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಆಯೋಜಿಸಿದ್ದ ಕಾಡಿನಲ್ಲಿ ಓದು ನಡಿಗೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಚಾರಣಿಗರು ಪಾಲ್ಗೊಂಡಿದ್ದರು. ಅಲ್ಲದೆ ಇಲ್ಲಿ ನೆರೆದಿದ್ದವರು ಸುತ್ತ ಕಣ್ಣು ಆಯಿಸಿದಷ್ಟು ದೂರವೂ ಹಬ್ಬಿರುವ ಹಸಿರು ಅರಣ್ಯದ ನಡುವೆ ಒಂದೆಡೆ ಸೇರಿ ತೇಜಸ್ವಿ ಕೃತಿಗಳ ಕೆಲ ಸಾಲುಗಳನ್ನು ಓದಿದರು.

Kottigehara: Walk and books reading in forest program organized by tejaswi prathistana

ಕೀಟತಜ್ಞರಾದ ಮೂಡಿಗೆರೆಯ ಅವಿನಾಶ್ ಮಾತನಾಡಿ, ಪರಿಸರದ ಬಗ್ಗೆ ಬೆರಗು ಮತ್ತು ಪರಿಸರದ ಉಳಿವಿನ ಮಹತ್ವವನ್ನು ತೇಜಸ್ವಿ ಅವರು ತಮ್ಮ ಬಹುತೇಕ ಕೃತಿಗಳಲ್ಲಿ ಪ್ರತಿಪಾದಿಸಿದ್ದಾರೆ. ತೇಜಸ್ವಿ ಕೃತಿಗಳಿಂದಾಗಿ ಹೊಸದೊಂದು ಓದುಗ ವರ್ಗ ಸೃಷ್ಠಿಯಾಗಿ ಓದಿನ ರುಚಿ ಎಲ್ಲರಲ್ಲೂ ಮೂಡುತ್ತಿದೆ. ಪರಿಸರ, ಜೀವಸಂಕುಲ, ಬಾಹ್ಯಾಕಾಶ, ಮುಂತಾದ ವಿಷಯಗಳ ಬಗ್ಗೆ ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದರು.

ಮಂಡ್ಯದ ಅಂಶು ಅವರು ಪರಿಸರದ ಕಥೆ, ಚಿಕ್ಕಮಗಳೂರಿನ ಕಾರ್ತಿಕ್ ಎಂ.ಕೆ.ಹುಲಿಯೂರಿನ ಸರಹದ್ದು, ದೀಪಗೌಡ ಅವರು ಪಾಕಕ್ರಾಂತಿ, ತುಮಕೂರಿನ ಪಲ್ಲವಿ ರಂಗನಾಥ್ ಮಾಯಾಲೋಕ, ಚಿತ್ರದುರ್ಗದ ದಿನೇಶ್ ಕೆ.ಎಸ್ ಅವರು ಮಿಸ್ಸಿಂಗ್ ಲಿಂಕ್, ಬೆಂಗಳೂರಿನ ಪ್ರೇಮ ಅವರು ಹೆಜ್ಜೆ ಮೂಡದ ಹಾದಿ, ಬೆಂಗಳೂರಿನ ಸುನಿತಾ ಮತ್ತು ವಿನೋದ್ ಅವರು ವಿಸ್ಮಯ ವಿಶ್ವ, ಶಿರಾದ ಶ್ರೀನಾಥ್ ಅವರು ಪಾಕಕ್ರಾಂತಿ ಬಗ್ಗೆ ಚರ್ಚೆ ಮಾಡಿದರು.

ಇನ್ನು ಮೂಡಿಗೆರೆಯ ಅವಿನಾಶ್ ಅವರು ಪಾಕಕ್ರಾಂತಿ, ನಂದೀಶ್ ಬಂಕೇನಹಳ್ಳಿ ಅವರು ಕರ್ವಾಲೊ, ಕೃತಿಯನ್ನು ಓದಿದರು. ಚಿಕ್ಕಮಗಳೂರಿನ ಸತ್ಯನಾರಾಯಣ, ಓಂಕಾರಪ್ಪ, ಹಾಸನದ ಬಾಲು ತೇಜಸ್ವಿ ಅವರ ಬದುಕು ಬರಹದ ಕುರಿತು ಚರ್ಚೆ ನಡೆಸಿದರು.

ಪರಿಸರದ ಸಂರಕ್ಷಣೆ, ತೇಜಸ್ವಿ ಅವರ ಬದುಕು, ಬರಹಗಳ ಬಗ್ಗೆ ವಿಚಾರ ವಿನಿಮಯ ನಡೆಯಿತು. ಕಾಡಿನಲ್ಲಿ ಓದು ಕಾರ್ಯಕ್ರಮಕ್ಕೂ ಮುನ್ನ ರಾಣಿಝರಿಯಿಂದ ಬಲ್ಲಾಳರಾಯನ ದುರ್ಗಕ್ಕೆ ಚಾರಣ ನಡೆಸಲಾಯಿತು. ಕೀಟತಜ್ಞರಾದ ಅವಿನಾಶ್ ಅವರು ಕೀಟಗಳ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ಅನ್ನು ಎಲ್ಲಿಯೂ ಬಳಕೆ ಮಾಡದೇ ಪ್ಲಾಸ್ಟಿಕ್‌ ಮುಕ್ತ ಚಾರಣ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ಕೀಟ ತಜ್ಞರಾದ ಅವಿನಾಶ್, ತೇಜಸ್ವಿ ಅವರ ಒಡನಾಡಿ ಹಾಗೂ ಕಲಾವಿದರಾದ ಬಾಪುದಿನೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಸಂಗೀತಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಿಲಾಷ್, ಚಂದನ್ ಸಿಬ್ಬಂದಿ ಭವಿತ್ ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40ಕ್ಕೂ ಹೆಚ್ಚು ಚಾರಣಿಗರು ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+