ಮಧ್ಯರಾತ್ರಿ ಚಾರ್ಮಾಡಿ ಘಾಟ್ ಬಳಿ ಕೆಟ್ಟುನಿಂತ KSRTC ಬಸ್, ನೆರವಾಗಿದ್ದು ಆ ಒಂದೇ ಒಂದು ಟ್ವೀಟ್
ಬೆಂಗಳೂರು, ಸೆ.05: ಸಾಮರ್ಥ್ಯಕ್ಕೂ ಮೀರಿ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಧರ್ಮಸ್ಥಳದಿಂದ ಗದಗದ ಮುಂಡರಗಿಗೆ ತೆರಳುತ್ತಿದ್ದ ಬಸ್ಸೊಂದು ಭಾನುವಾರ (ಸೆಪ್ಟೆಂಬರ್ 03) ರಾತ್ರಿ 9 ಗಂಟೆ ಸುಮಾರಿಗೆ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಇದರಿಂದ ಪ್ರಯಾಣಿಕರು ಕೆಎಸ್ಆರ್ಟಿಸಿ ಸಹಾಯವಾಣಿಗೆ ಕರೆ ಮಾಡಿ ಎಷ್ಟೇ ಸಂಪರ್ಕಿಸಲು ಪ್ರಯತ್ನಿಸಿದರೂ ಎರಡು ಗಂಟೆಗಳ ಕಾಲ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಕೊನೆಗೆ ಪ್ರಯಾಣಿಕರಲ್ಲೊಬ್ಬರಾದ ರಘು ಎಂಬುವರು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೇಳಿದ್ದಾರೆ. ಮುಂದೇನಾಯ್ತು ಎಂದು ತಿಳಿಯಿರಿ
ರಘು ಸಾರಿಗೆ ಸಂಸ್ಥೆಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೇಳಿದ ಬಳಿಕ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಯಿತು. ಆದರೆ ಸಾಮರ್ಥ್ಯಕ್ಕೂ ಮೀರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಬಸ್ನಲ್ಲಿ ಹತ್ತಿಸಿಕೊಳ್ಳುವ ಬಗ್ಗೆ ರಘು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಾರ್ಮಾಡಿ ಘಾಟ್ ಬಳಿ ಬಸ್ ಕೆಟ್ಟುಹೋದ ಕಾರಣ 70ಕ್ಕೂ ಹೆಚ್ಚು ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದರು. ಧರ್ಮಸ್ಥಳದಿಂದ ಹೊರಟ ಬಸ್ ಚಾರ್ಮಾಡಿ ಘಾಟ್ ಬಳಿ ಕೆಟ್ಟು ನಿಂತಿದ್ದು, ಈ ಸಮಯದಲ್ಲಿ ಈ ಮಾರ್ಗದಲ್ಲಿ ಬೇರೆ ಯಾವುದೇ ಬಸ್ಸುಗಳಿಲ್ಲ. ದಯವಿಟ್ಟು ಸಹಾಯ ಮಾಡಿ, ಮಳೆ ಬಂದರೆ ಏನು ಗತಿ? ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಬಸ್ ಕೆಟ್ಟು ಹೋದ ಪರಿಣಾಮ ರಸ್ತೆ ಬದಿ ಪ್ರಯಾಣಿಕರು ವಿಶ್ರಾಂತಿ ಪಡೆಯುತ್ತಿದ್ದ ಫೋಟೋವನ್ನು ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ ಅಂತಾ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
@KSRTC_Journeys Need Immediate attentions, 70+ passangers left stranded due to bus breakdown near Charmadi ghat. Bus started from Dharmasthala and broke down near the ghat section. Now, no other buses in this route at this time. Please help, what if it rains! pic.twitter.com/N9DiyPFQqb
— Raghu (@Raghu08743924) September 3, 2023
ರಘು ಅವರ ಟ್ವೀಟ್ಗೆ ಕೆಎಸ್ಆರ್ಟಿಸಿ ಪ್ರತಿಕ್ರಿಯಿಸಿದ್ದು, "ದಯವಿಟ್ಟು ಬಸ್ ಸಂಖ್ಯೆ ಅಥವಾ ಪಿಎನ್ಆರ್ ಪ್ರಯಾಣದ ವಿವರಗಳನ್ನು ಒದಗಿಸಿ" ಎಂದು ಕೇಳಿತು. ತಕ್ಷಣವೇ ರಘು ಮಾಹಿತಿ ನೀಡಿದ್ದಾರೆ. ಅಲ್ಲದೆ ಬೆಂಗಳೂರಿನ KSRTC ಅಧಿಕಾರಿಗಳಿಗೆ ಕರೆ ಮಾಡಿ ಈ ಬಗ್ಗೆ ಕೇಳಿದಾಗ, ಪುತ್ತೂರಿನಲ್ಲಿರುವ KSRTC ವಿಭಾಗೀಯ ನಿಯಂತ್ರಕರೊಂದಿಗೆ ಮಾತನಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಚಾರ್ಮಾಡಿ ಘಾಟ್ಗೆ ಕೆಎಸ್ಆರ್ಟಿಸಿ ಬಸ್ ಹೋಗುತ್ತದೆ. ಪ್ರಯಾಣಿಕರನ್ನು ಕರೆದುಕೊಂಡು ಬರಲಾಗುತ್ತೆ ಎಂದು ತಿಳಿಸಿದರು.
ಪುತ್ತೂರು ಡಿಸಿ ಜೈಕರ್ ಶೆಟ್ಟಿ ಮಾತನಾಡಿ, ಚಾರ್ಮಾಡಿ ಘಾಟ್ನಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಅವರು ಹೋಗಬೇಕಿದ್ದ ಜಾಗಕ್ಕೆ ಕಳುಹಿಲಾಗಿದೆ. ಚಾಲಕ ಸ್ವತಃ ಧರ್ಮಸ್ಥಳಕ್ಕೆ ಪ್ರಯಾಣಿಸಿ ಪರ್ಯಾಯ ಬಸ್ ಅನ್ನು ತೆಗೆದುಕೊಂಡು ಪ್ರಯಾಣವನ್ನು ಮುಂದುವರೆಸಿದರು ಎಂದು ತಿಳಿಸಿದರು.
ನಂತರ ತಡ ರಾತ್ರಿ 12.55ಕ್ಕೆ ರಘು ಅವರು ಟ್ವೀಟ್ ಮಾಡಿ, ಅಂತಿಮವಾಗಿ ಸಾರಿಗೆ ಇಲಾಖೆಯಿಂದ ಸಹಾಯ ಸಿಕ್ಕಿದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ 54 ಆಸನಗಳ ಸಾಮರ್ಥ್ಯವಿರುವ ಬಸ್ನಲ್ಲಿ 78 ಜನರನ್ನು ಹತ್ತಿಸಿಕೊಳ್ಳಲಾಗಿದೆ. ಯಾರಾದರೂ ಈ ಬಗ್ಗೆ ಗಮನಹರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications