ಮೂಡಿಗೆರೆ: ರಣ ಬಿಸಿಲಿಗೆ ಬೆಂದ ಕಾಫಿಗಿಡಗಳು, ಮಳೆಗಾಗಿ ದೇವರ ಮೊರೆ ಹೋದ ಜನ
ಚಿಕ್ಕಮಗಳೂರು, ಏಪ್ರಿಲ್, 02: ಈಗಾಗಲೇ 2023ರಲ್ಲಿ ಮಳೆಯಿಲ್ಲದೆ ರಾಜ್ಯದಲ್ಲಿನ ಅನ್ನದಾತ, ಜನರು ಕಂಗಾಲಾಗಿದ್ದಾರೆ. ಇನ್ನು 2024ರ ಏಪ್ರಿಲ್ ಕಳೆದರೂ ಯಾವುದೇ ಮಳೆಯ ಮುನ್ಸೂಚನೆ ಇಲ್ಲದೆ, ಬಿಸಿಲಿನ ವಾತಾವರಣ ಮುಂದುವರೆದಿದೆ. ಇದರಿಂದ ರಾಜ್ಯದ ಜನರು ಕಂಗೆಟ್ಟು ಹೋಗಿದ್ದಾರೆ. ಇದ್ದ ಬೋರ್ವೆಲ್ಗಳು ಕೂಡ ನಿಂತುಹೋಗುವ ಹಂತವನ್ನು ತಲುಪಿದ್ದು, ಹಲವೆಡೆ ಜನರು ಮಳೆಗಾಗಿ ದೇವರವ ಮೊರೆ ಹೋಗುತ್ತಿರುವ ಘಟನೆಗಳನ್ನು ನಡೆಯುತ್ತಿದೆ. ಇಂತಹದ್ದೇ ಘಟನೆ ಇದೀಗ ಕಾಫಿನಾಡು ಚಿಕ್ಕಮಗಳೂರಿಗೂ ಬಂದೊದಗಿದೆ.
ಹಿಂದೆಲ್ಲ ಮಲೆನಾಡು ಮಳೆನಾಡು ಆಗಿರುತ್ತಿತ್ತು. ಆದರೆ ಇದೀಗ ಬಿಸಿಲಿನ ನಾಡಾಗಿದ್ದು, ಕಾಫಿನಾಡಿನ ಜನರು ಬೆಳೆ ಕಳೆದುಕೊಳ್ಳವ ಆತಂಕಲ್ಲಿದ್ದಾರೆ. ಇನ್ನು ಮಲೆನಾಡಿನಲ್ಲಿ ಹತ್ತಾರು ಗ್ರಾಮಸ್ಥರು ಸೇರಿ ಮಳೆಗಾಗಿ ಮೂಡಿಗೆರೆ ತಾಲೂಕಿನ ಕೊಲ್ಲಿ ಬೈಲ್, ಹೆಸಗಲ್ ಗ್ರಾಮದ ಬಸವೇಶ್ವರ ದೇವರ ಮೊರೆ ಹೋಗಿದ್ದು, ಈ ವೇಳೆ ಜನಪ್ರತಿನಿಧಿಗಳು ಹಾಗೂ ಸ್ವಾಮೀಜಿಗಳು ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.

ಮೂಡಿಗೆರೆ ತಾಲೂಕಿನ ಹೆಸಗಲ್ ಗ್ರಾಮದ ಕಣಿವೆ ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರೆ ಮಳೆ ಆಗುವ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಬಸವೇಶ್ವರ ವಿಗ್ರಹ ಕಾಡಿನಲ್ಲಿದ್ದು, ಬರಗಾಲ ಬಂತೆಂದರೆ ಸಾಕು ಮಲೆನಾಡಿಗರು ಈ ಜಾಗಕ್ಕೆ ಬಂದು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ.
ಈಗಾಗಲೇ ಜಿಲ್ಲೆಯ ಬಹುತೇಕ ಭಾಗಗಲ್ಲಿ ಮಳೆ ಇಲ್ಲದೆ ನದಿ, ತೊರೆಗಳು ಬತ್ತಿ ಹೋಗುವ ಹಂತವನ್ನು ತಲುಪಿವೆ. ಮತ್ತೊಂದೆಡೆ ಕಾಫಿ ತೋಟಗಳು ಕೂಡ ಸೂರ್ಯನ ಶಾಖಕ್ಕೆ ಒಣಗುತ್ತಿದ್ದು, ಇದರಿಂದ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಕಳೆದ 15 ವರ್ಷಗಳ ಬಳಿಕ ತೀವ್ರ ಮಳೆಯ ಕೊರತೆ ಎದುರಾಗಿದ್ದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications