ಭೂಕಬಳಿಕೆ ಆರೋಪ: ಚಿಕ್ಕಮಗಳೂರು ಜಿ.ಪಂ ಸದಸ್ಯನ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು, ಡಿಸೆಂಬರ್ 5: ಭೂ ಕಬಳಿಕೆ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸದಸ್ಯ ಶೃಂಗೇರಿ ಶಿವಣ್ಣ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಮ್ಮ ಜಾಗದ ಪಕ್ಕದಲ್ಲಿರುವ ಸರ್ವೇ ನಂಬರ್ 215 ರಲ್ಲಿ ಸುಮಾರು 2 ಗುಂಟೆ ಜಾಗವನ್ನು ಅನಧಿಕೃತವಾಗಿ ಕಬಳಿಕೆ ಮಾಡಿಕೊಂಡಿದ್ದಾರೆ ಎಂದು ತಹಸೀಲ್ದಾರ್ ದೂರು ನೀಡಿದ್ದಾರೆ.
ಶೃಂಗೇರಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಶಿವಶಂಕರ್(ಶೃಂಗೇರಿ ಶಿವಣ್ಣ) ಪಟ್ಟಣದ ತಮ್ಮ ಜಾಗದ ಪಕ್ಕದಲ್ಲಿರುವ ಸರ್ವೇ ನಂಬರ್ 215ರ ಸರ್ಕಾರಿ ಭೂಮಿಯಲ್ಲಿ 2 ಗುಂಟೆಯನ್ನು ಅನಧಿಕೃತವಾಗಿ ಕಬಳಿಸಿ ಜೆಸಿಬಿಯಿಂದ ಸಮತಟ್ಟು ಮಾಡಿದ್ದಾರೆ.

ಅನಧಿಕೃತವಾಗಿ ಭೂ ಕಬಳಿಕೆ ಮಾಡಿರುವ ಜಾಗವು ತಗ್ಗು ಪ್ರದೇಶವಾಗಿದ್ದು, ಇದರಿಂದ ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯ, ನ್ಯಾಯಾಧೀಶರ ವಸತಿ ಗೃಹ, ತಾಲ್ಲೂಕು ಕಚೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾಲೇಜು ವಿದ್ಯಾರ್ಥಿ ನಿಲಯಗಳು ಭೂ ಕುಸಿತವಾಗುವ ಸಂಭವ ಹೆಚ್ಚಿದೆ ಎಂದು ಹೇಳಲಾಗಿದೆ.
ಭೂ ಕಬಳಿಕೆಯಿಂದ ಸಾರ್ವಜನಿಕ ಕಟ್ಟಡಗಳಿಗೆ ಗಂಭೀರ ರೂಪದ ಹಾನಿಯಾಗುವ ಸ್ಥಿತಿ ಇರುತ್ತದೆ. ಆದ್ದರಿಂದ ಅನಧಿಕೃತವಾಗಿ ಭೂ ಕಬಳಿಕೆ ಮಾಡಿರುವ ಶಿವಶಂಕರ್ ಬಿನ್ ಬಂಗಾರುಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ದೂರಿನಲ್ಲಿ ತಿಳಿಸಿದ್ದಾರೆ.

Recommended Video
2018 ರಲ್ಲಿ ಅನಧಿಕೃತವಾಗಿ ತಮ್ಮ ಜಮೀನಿನ ಪಕ್ಕದಲ್ಲಿದ್ದ 2 ಗುಂಟೆ ಸರ್ಕಾರಿ ಜಾಗದಲ್ಲಿ ಮಣ್ಣು ತೆಗೆಯಲಾಗಿತ್ತು. ಈ ಸಂಬಂಧ 2018 ರಲ್ಲಿ ದೂರು ದಾಖಲಾಗಿತ್ತು. ಉಪ ವಿಭಾಗಾಧಿಕಾರಿ ನ್ಯಾಯಾಲಯ ಹಾಗೂ ಹೈಕೋರ್ಟ್ ನಲ್ಲಿ ಪ್ರಕರಣದ ತನಿಖೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪತ್ರದ ಮೂಲಕ ತಿಳಿಸಿದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ದೂರು ದಾಖಲು ಮಾಡಲಾಗಿದೆ ಎಂದು ಶೃಂಗೇರಿ ತಹಸೀಲ್ದಾರ್ ಅಂಬುಜಾಕ್ಷಿ ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications