ಚಾರ್ಮಾಡಿ ಘಾಟ್ ನಲ್ಲಿ ಬಿರುಕು ಬಿಟ್ಟ ರಸ್ತೆ; ಸಂಚಾರ ಬಂದ್

ಚಿಕ್ಕಮಗಳೂರು, ಆಗಸ್ಟ್‌ 07: ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಇಂದು ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಬೃಹತ್ ಗಾತ್ರದ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ.

Recommended Video

      IPL 2020: Players who owe their career to RCB | Oneindia Kannada

      ಮೊನ್ನೆಯಷ್ಟೇ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು, ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಬೃಹತ್ ಗಾತ್ರದ ಬಂಡೆಗಳು, ಮಣ್ಣು ರಸ್ತೆ ಮೇಲೆ ಬಿದ್ದಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ರಸ್ತೆಯೂ ಎರಡು ಭಾಗ ಆಗುವ ಸಾಧ್ಯತೆ ಕಂಡುಬಂದಿದೆ. ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ್ದರಿಂದ ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ನಿಲ್ಲಿಸಲಾಗಿದೆ, ಹೀಗಾಗಿ ಕೊಟ್ಟಿಗೆ ಹಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

      Rain in Chikkamagaluru: Landslide And Road Cracked At Charmadi Ghat

      ಮತ್ತೆ ಸಂಚಾರ ಬಂದ್ ಆಗಿದ್ದು, ಭಾರಿ ಮಳೆಯ ಮಧ್ಯೆಯೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸದಂತೆ ಪೊಲೀಸರು ಸೂಚನೆ ಹೊರಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+