ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ; ಚಾರ್ಮಾಡಿಯಲ್ಲಿ ಮಣ್ಣು ಕುಸಿತ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್‌ 03: ಮಲೆನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು ಸುತ್ತಮುತ್ತ‌ ಭಾರೀ ಮಳೆಯಾಗಿದೆ.

ನಿರಂತರ ಜೋರು ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಘಾಟ್ ನ ಕೆಲವೆಡೆ ರಸ್ತೆಯಲ್ಲೇ ಕಲ್ಲು ಮಣ್ಣು ಬಿದ್ದಿವೆ. ಕಳೆದ ವರ್ಷವೂ ಆಗಸ್ಟ್‌ ತಿಂಗಳಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು, ಜನರು ಮನೆ, ಪ್ರಾಣ, ಜಮೀನು ಕಳೆದುಕೊಂಡಿದ್ದರು.

 Landslide In Charmadi Ghat By Heavy Rain In Chikkamagaluru District

 ಕೊಡಗಿನಲ್ಲಿ ಅಬ್ಬರಿಸುತ್ತಿದೆ ಆಶ್ಲೇಷ ಮಳೆ: ಎದುರಾಗಿದೆ ಪ್ರವಾಹದ ಭೀತಿ ಕೊಡಗಿನಲ್ಲಿ ಅಬ್ಬರಿಸುತ್ತಿದೆ ಆಶ್ಲೇಷ ಮಳೆ: ಎದುರಾಗಿದೆ ಪ್ರವಾಹದ ಭೀತಿ

ಮತ್ತೆ ಇಂದು ಚಾರ್ಮಾಡಿ ಘಾಟ್ ನಲ್ಲಿ ಮಣ್ಣು ಕುಸಿತವಾಗಿರುವುದರಿಂದ ಇಲ್ಲಿ ಓಡಾಡುವ ವಾಹನ ಸವಾರರಲ್ಲಿ ಆತಂಕ ಮೂಡಿದೆ. ಜಿಲ್ಲೆಯಾದ್ಯಂತ ಬಿಟ್ಟೂ ಬಿಡದೇ ಮಳೆಯಾಗುತ್ತಿರುವುದರಿಂದ ಸ್ಥಳೀಯರಲ್ಲಿ ಭಯವೂ ಆವರಿಸಿದೆ.

English summary
Heavy rain reported around Chikkamagaluru district today. Due to continuous rainfall, the land slide happened at Charmadi Ghat
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X