ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಣಿವೆಹಳ್ಳಿ ಬಳಿ ಹಳಿ ಮೇಲೆ ಕುಸಿದ ಗುಡ್ಡ: ರೈಲು ಸಂಚಾರ ಬಂದ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

Flood: ಚಿಕ್ಕಮಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು, ಆಗಸ್ಟ್ 9: ಮಲೆನಾಡು ಚಿಕ್ಕಮಗಳೂರು ಭಾಗಗಳಲ್ಲಿ ಧಾರಾಕಾರ ಮಳೆ ನಿಂತಿಲ್ಲ. ಅಲ್ಲಲ್ಲಿ ಭೂಕುಸಿತ ಗುಡ್ಡ ಕುಸಿತವಾಗುವುದೂ ನಿಂತಿಲ್ಲ.

ಈ ನಡುವೆಯೇ ಬೆಳಿಗ್ಗಿನ ಜಾವ ಚಿಕ್ಕಮಗಳೂರಿನ ಕಣಿವೆಹಳ್ಳಿ ಸಮೀಪ ರೈಲು ಹಳಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದಿರುವುದರಿಂದ ಈ ಮಾರ್ಗದ ರೈಲು ಸಂಚಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಕಣಿವೆಹಳ್ಳಿ ಬಳಿ ಗುಡ್ಡ ಕುಸಿದು, ಭಾರಿ ಪ್ರಮಾಣದ ಕಲ್ಲುಗಳು ಹಳಿ ಮೇಲೆ ಬಿದ್ದಿವೆ.

 ಮಳೆಯ ಆರ್ಭಟಕ್ಕೆ ಸಿಲುಕಿದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಸುತ್ತು ಮಳೆಯ ಆರ್ಭಟಕ್ಕೆ ಸಿಲುಕಿದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ಸುತ್ತು

ಹಳಿ ಮೇಲೆ ಗುಡ್ಡ ಕುಸಿತದಿಂದ ಚಿಕ್ಕಮಗಳೂರಿನಿಂದ ಶಿವಮೊಗ್ಗ ರೈಲು ಹಾಗೂ ಚಿಕ್ಕಮಗಳೂರಿನಿಂದ- ಯಶವಂತಪುರ ರೈಲು ಸಂಚಾರ ಸ್ಥಗಿತವಾಗಿದೆ. ಬೆಳಿಗ್ಗೆಯಿಂದಲೇ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ಪರದಾಟ ಉಂಟಾಗಿದೆ. ರೈಲನ್ನೇ ಅವಲಂಬಿಸಿದ್ದ ಪ್ರಯಾಣಿಕರು ಬೇರೆ ಮಾರ್ಗವಿಲ್ಲದೇ ತೊಂದರೆ ಅನುಭವಿಸಬೇಕಾಗಿದೆ.

Landslide Near Kanivehalli Rail Track

ಹಳಿಗಳ ಮೇಲೆ ದೊಡ್ಡ ಕಲ್ಲುಗಳು ಉರುಳಿರುವುದರಿಂದ ತೆರವು ಕಾರ್ಯಾಚರಣೆಯೂ ಸಮಯ ತೆಗೆದುಕೊಳ್ಳಲಿದೆ. ಜೊತೆಗೆ ಮಳೆಯೂ ಬಿಡದಿರುವುದು ತೆರವಿಗೆ ಅಡ್ಡಿಯಾಗುತ್ತಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆಯೂ ಆರಂಭಗೊಂಡಿದೆ.

English summary
Landslide happened near kanivehalli railway track in Chikkmagaluru. Railway traffic on this route has been halted due to the collapse.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X