ಚಿಕ್ಕಮಗಳೂರು: ಜನರಲ್ಲಿ ಆತಂಕವನ್ನುಂಟು ಮಾಡಿದ್ದ ಚಿರತೆ ಸೆರೆ
ಚಿಕ್ಕಮಗಳೂರು, ಮೇ 28: ಕಳೆದ ಅನೇಕ ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಿಟ್ಲಾಪುರ ಗ್ರಾಮದಲ್ಲಿ ಆತಂಕ ಮನೆಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ತರೀಕೆರೆ ತಾಲೂಕಿನ ವಿಟ್ಲಾಪುರ, ಅಮೃತಪುರ, ನೆರಲಿಕೆರೆ ಗ್ರಾಮಗಳ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಗ್ರಾಮಗಳಲ್ಲಿ ಜನರು ರಾತ್ರಿ ಹೊತ್ತು ಇರಲಿ, ಬೆಳಗಿನ ಹೊತ್ತು ಓಡಾಡಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ತೋಟ, ಹೊಲಗಳಿಗೆ ಕೆಲಸಕ್ಕೆ ಹೋಗುವವರಿಗೆ ಕಾಣಿಸಿಕೊಂಡಿದ್ದ ಚಿರತೆ, ಜನರಲ್ಲಿ ಭೀತಿ ಉಂಟುಮಾಡಿತ್ತು. ಅಲ್ಲದೇ ನಾಯಿಯ ರುಚಿಗೆ ಬಿದ್ದಿದ್ದ ಚಿರತೆ 50 ಕ್ಕೂ ಹೆಚ್ಚು ನಾಯಿಗಳನ್ನು ತಿಂದು ಮುಕ್ಕಿತ್ತು. ಇದೇ ರುಚಿಗೆ ಪದೇ ಪದೇ ನಾಯಿಗಳನ್ನು ಬೇಟೆಯಾಡಲು ಗ್ರಾಮದೊಳಗೆ ಬರುತ್ತಿರುವುದು ಸ್ಥಳೀಯರಿಗೆ ತಲೆನೋವಾಗಿ ಪರಿಣಮಿಸಿತ್ತು.

ಈ ಹಿನ್ನೆಲೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಯು ಚಿರತೆಯನ್ನು ಸೆರೆ ಹಿಡಿಯಲು ಬೋನಿನೊಳಗೆ ನಾಯಿಗಳನ್ನು ಬಿಟ್ಟು ಚಿರತೆಗೆ ಹೊಂಚಿ ಹಾಕಿ ಕುಳಿತಿತ್ತು.

ಪರಿಣಾಮ ಇಂದು ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರಲ್ಲಿ ಮನೆಮಾಡಿದ್ದ ಚಿರತೆಯ ಆತಂಕ ದೂರವಾಗಿದೆ. ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಲ್ಲದೇ ಚಿರತೆಯನ್ನು ನೋಡಲು ಮುಗಿಬಿದ್ದಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications