ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲಾ ಬ್ಯಾಂಕುಗಳ ಇಎಂಐಗೆ ವಿನಾಯಿತಿ ನೀಡಲಿ; ಡಿಕೆಶಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 19: ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದರು.

ಮಠದ ಆವರಣದಲ್ಲಿರುವ ರಂಭಾಪುರಿ ಕ್ಷೇತ್ರದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ರಂಭಾಪುರ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ರಂಭಾಪುರಿ ಶ್ರೀಗಳು ಮಠದ ಹಿರಿಯ ಶ್ರೀಗಳಾದ ಶ್ರೀಮದ್ ರಂಭಾಪುರಿ ವೀರ ಗಂಗಾಧರ ಜಗದ್ಗುರುಗಳ ಫೋಟೋ ನೀಡಿ ಸನ್ಮಾನಿಸಿದರು. "ಮಠದ ಹಿರಿಯ ಗುರುಗಳಾದ ವೀರ ಗಂಗಾಧರ ಜಗದ್ಗುರುಗಳು ನನಗೆ ಹೈಕಮಾಂಡ್ ಇದ್ದಂತೆ, ಅವರ ಫೋಟೊವನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಡಿ" ಎಂದು ಜಿಲ್ಲಾಧ್ಯಕ್ಷರಿಗೆ ಡಿಕೆಶಿ ಸೂಚಿಸಿದರು.

ಕೊರೊನಾ ಭೀತಿಯಿದ್ದರೂ ಡಿಕೆಶಿ ಮನೆ ಮುಂದೆ ಜನಸಾಗರ!ಕೊರೊನಾ ಭೀತಿಯಿದ್ದರೂ ಡಿಕೆಶಿ ಮನೆ ಮುಂದೆ ಜನಸಾಗರ!

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಡಿಕೆಶಿ, "ರಾಜ್ಯಾದ್ಯಂತ ಕೊರೊನಾದಿಂದ ಆರ್ಥಿಕ ನಷ್ಟ ಉಂಟಾಗಿದ್ದು, ಜನಸಾಮಾನ್ಯರಿಗೆ ಬದುಕುವುದು ದುಸ್ಥರವಾಗಿದೆ. ಸಾಮಾನ್ಯ ಜನರು ಆರ್ಥಿಕವಾಗಿ ಉಸಿರಾಡಲು ಆಗುತ್ತಿಲ್ಲ. ವ್ಯಾಪಾರಸ್ಥರು, ಸಣ್ಣ ಉದ್ಯಮಿಗಳು, ತೀವ್ರ ಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ಗಳಿಂದ ಅವರು ಕಿರುಕುಳ ಅನುಭವಿಸುವಂತಾಗಿದೆ. ಇದರಿಂದ ಎಲ್ಲಾ ಬ್ಯಾಂಕ್ ಗಳ ಇಎಂಐಗೆ ವಿನಾಯಿತಿ ನೀಡುವಂತೆ ಸೂಚಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

Let All Banks Give Exempt On EMI Said DK Shivakumar In Balehonnuru

ನಂತರ ರಂಭಾಪುರಿ ಪೀಠದಿಂದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಮಗಳ ಮದುವೆಗೆ ತೆರಳಿದ ಡಿ.ಕೆ ಶಿವಕುಮಾರ್ ನವಜೋಡಿಗೆ ಶುಭಾಶಯ ತಿಳಿಸಿದರು.

English summary
"People are facing financial crisis because of corona emergency. In this situation, let all banks give exempt on emi's" said DK Shivakumar in Balehonnuru, He visited rambhapuri mutt today in chikkamagaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X