ಈಚಲು ಮರದಲ್ಲಿ ಮೂಡಿದ ಗಣಪ, ಜನರಿಂದ ಪೂಜೆ, ಪುನಸ್ಕಾರ ಆರಂಭ!
ಚಿಕ್ಕಮಗಳೂರು , ಜೂನ್ 25: : ಈಚಲು ಮರದಲ್ಲಿ ಗಣಪ ಉದ್ಭವವಾಗಿರೋದನ್ನ ಕಂಡು ಚಿಕ್ಕಮಗಳೂರಿನ ಜನ ಮೂಕವಿಸ್ಮಿತರಾಗಿದ್ದಾರೆ. ನಗರದ ಪಟಾಕಿ ಗ್ರೌಂಡ್ನ ಪಕ್ಕದಲ್ಲಿರುವ ಒಂದು ಹೊಲದ ಈಚಲುಮರದಲ್ಲಿ ಗಣಪನನೇ ಹೋಲುವ ಸೊಂಡಿಲು, ಕಣ್ಣು, ಕೈಗಳು, ದೇಹ ಎಲ್ಲವನ್ನೂ ಹೊಂದಿರುವ ಆಕೃತಿ ಮೂಡಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ, ಜನರು ತಂಡೋಪತಂಡವಾಗಿ ಈಚಲುಮರ ಗಣಪನ ದರ್ಶನಕ್ಕೆ ಮುಗಿಬಿದ್ದು ಪೂಜೆ ಸಲ್ಲಿಸಲು ಪ್ರಾರಂಭಿಸಿದ್ದಾರೆ.
ಚಿಕ್ಕಮಗಳೂರು ನಗರದ ಹೊಲವೊಂದರಲ್ಲಿ ಈಚಲು ಮರವನ್ನ ಮಾಲೀಕ ಮಾಮೂಲಿ ಮರವಷ್ಟೆ ಎಂದು ಭಾವಿಸಿದ್ದರು. ಆದರೆ, ಈಚಲು ಈ ಮರದಲ್ಲಿ ಉದ್ಭವವಾಗಿರು ಆಕೃತಿಯಂತೆ ಕಾಣುತ್ತಿದ್ದಂತೆ ಈ ವಿಷ್ಮಯವನ್ನು ನೋಡಲು, ಪೂಜೆಸಲ್ಲಿಸಲು ಸಾಕಷ್ಟು ಜನ ಬರುತ್ತಿದ್ದಾರೆ. ಈ ಮರದಲ್ಲಿ ಮೂಡಿರುವ ಆಕೃತಿ ಗಣಪನನೇ ಹೋಲುವ ಸೊಂಡಿಲು, ಕಣ್ಣು, ಕೈಗಳು, ದೇಹವನ್ನು ಹೊಂದಿದೆ. ಇದೀಗ ದಾರಿಯಲ್ಲಿ ಹೋಗುವವರೆಲ್ಲೂ ಈ ಈಚಲು ಮರದ ಗಣಪನನ್ನ ನೋಡಿ ಪ್ರಾರ್ಥಿಸಲು ಶುರು ಮಾಡಿದ್ದಾರೆ.
ನಗರದಲ್ಲಿ ನಾಲ್ಕೈದು ಗಣಪತಿ ದೇವಸ್ಥಾನಗಳಿದ್ದರೂ ಕೂಡ ಎಲ್ಲವೂ ಪಶ್ಚಿಮ ದಿಕ್ಕಿಗೆ ಮುಖ ಮಾಡಿವೆ. ಆದರೆ, ಈ ಈಚಲು ಮರದಲ್ಲಿ ಉದ್ಭವಿಸಿರುವ ಗಣಪತಿ ಪೂರ್ವ ದಿಕ್ಕಿಗೆ ಮುಖ ಮಾಡಿ ಹುಟ್ಟಿರೋದು ಸ್ಥಳೀಯರು ಹಾಗೂ ಆಸ್ತಿಕರ ತೀವ್ರ ತರವಾದ ಭಕ್ತಿಗೆ ಕಾರಣವಾಗಿದೆ. ಕಂಪ್ಲೀಟ್ ಗಣೇಶನನ್ನೇ ಹೋಲುವ ಮೂರ್ತಿಯನ್ನ ನೋಡಿ ಜನ ನಾ ಮುಂದು-ತಾ ಮುಂದು ಅಂತ ಗಣಪನಿಗೆ ಪೂಜೆ ಸಲ್ಲಿಸಿ ಬೇಡಿಕೊಳ್ಳಲು ಆರಂಭಿಸಿದ್ದಾರೆ. ಬೇಡಿಕೆ ಈಡೇರುತ್ತಿದ್ದಂತೆ ಈಚಲು ಮರದ ಗಣಪನಿಗೆ ಉಘೇ...ಉಘೇ.... ಎನ್ನುವ ಜನರ ಸಂಖ್ಯೆ ಹೆಚ್ಚಾಗುತ್ತಿದೆ.

ಕೆಲ ವರ್ಷಗಳ ಹಿಂದೆ ಗಣಪ ಹಾಲು ಕುಡಿಯುತ್ತಿದ್ದಾನೆ. ಕಣ್ಣನ್ನ ಮುಚ್ಚಿ-ಬಿಡುತ್ತಿದ್ದಾನೆ ಅಂತೆಲ್ಲಾ ಭಕ್ತರು ಮಾತನಾಡಿಕೊಳ್ಳುತ್ತಿದ್ದರು. ಇದೀಗ ಈಚಲು ಮರದಲ್ಲಿ ಗಣಪನನ್ನೇ ಹೋಲುವ ಆಕೃತಿ ಪತ್ತೆಯಾಗಿದ್ದು, ಸ್ಥಳೀಯರು ದಿನನಿತ್ಯ ಪೂಜೆ-ಪುನಸ್ಕಾರ ಮಾಡಿ ನಮಿಸುತ್ತಿದ್ದಾರೆ. ಆದರೆ, ಜನ ಮರಳೋ, ಜಾತ್ರೆ ಮರಳೋ ಎಂಬಂತೆ ರಾತ್ರೋರಾತ್ರಿ ಜನ ಈ ಈಚಲು ಮರದ ಗಣಪನಿಗೆ ಭಕ್ತ ಸಮೂಹ ಹುಟ್ಟಿಕೊಂಡಿರುವುದು ಸತ್ಯ.
ಈಚಲು ಮರದಲ್ಲಿ ಪಾರ್ವತಿ ಸುತ ಮೂಡಿರುವ ಸುದ್ದಿ ಒಬ್ಬರ ಬಾಯಿಂದ ಒಬ್ಬರಿಗೆ ಹರಡಿ ಇದೀಗ ದಿನಕ್ಕೆ ನೂರಾರು ಜನ ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಹಲವು ಭಕ್ತರು ನಿತ್ಯ ಯಾವುದಾದರೂ ಒಳ್ಳೆ ಕೆಲಸಕ್ಕೆ ಹೋಗುವ ಮುನ್ನ ಇಲ್ಲಿಗೆ ಬಂದು ಕೈಮುಗಿದು ಬೇಡಿಕೊಂಡು ಹೋಗುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications