ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಮನೆಗೇ ನುಗ್ಗಿದ ಲಾರಿ; ಆಟವಾಡುತ್ತಿದ್ದ ಬಾಲಕ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಆಗಸ್ಟ್ 13: ತರಕಾರಿ ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಮನೆಯೊಂದಕ್ಕೆ ನುಗ್ಗಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ.

Recommended Video

DJ ಹಳ್ಳಿಯಲ್ಲಿ ಇದೀಗ ಶುರುವಾಯ್ತು ಹೊಸ ಆತಂಕ | Oneindia Kannada

ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಮಗಳೂರಿನಿಂದ ಕುಂದಾಪುರ ಮಾರ್ಗವಾಗಿ ತರಕಾರಿ ಲಾರಿ ಹೋಗುತ್ತಿತ್ತು. ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮನೆಗೆ ಲಾರಿ ನುಗ್ಗಿದೆ. ಅಲ್ಲೇ ಮನೆ ಮುಂದೆ ಆಟವಾಡಿಕೊಂಡಿದ್ದ ಬಾಲಕನ ಮೇಲೆ ಲಾರಿ ಎರಗಿ ಬಂದಿದ್ದು, ಸುರೇಶ್ (10) ಎಂಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಚಿತ್ರದುರ್ಗದಲ್ಲಿ ಕಾರು- ಬೈಕ್ ಅಪಘಾತ; ಬೈಕ್ ಸವಾರ ಸಾವುಚಿತ್ರದುರ್ಗದಲ್ಲಿ ಕಾರು- ಬೈಕ್ ಅಪಘಾತ; ಬೈಕ್ ಸವಾರ ಸಾವು

Chikkamagaluru: Lorry Rushed To Home In Jenugadde Village

ಮಂಜುನಾಥಗೌಡ ಎಂಬುವರ ಲೈನ್ ಮನೆಯಲ್ಲಿ ಈ ಕಾರ್ಮಿಕ ಕುಟುಂಬ ವಾಸವಾಗಿತ್ತು. ಲಾರಿ ನುಗ್ಗಿದ ರಭಸಕ್ಕೆ ಮನೆಯ ಅರ್ಧ ಭಾಗ ಸಂಪೂರ್ಣ ಜಖಂ ಆಗಿದೆ. ಪುಟ್ಟ ಬಾಲಕನ ಪ್ರಾಣವೂ ಹೋಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
Lorry rushed to home by loosing driver control and kills 10 year old boy in jenugadde village of chikkamaglauru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X