ಚಿಕ್ಕಮಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದವೆಂದು ವಿದ್ಯಾರ್ಥಿನಿ ಆತ್ಮಹತ್ಯೆ
ಚಿಕ್ಕಮಗಳೂರು, ಆಗಸ್ಟ್ 11: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಅಂಕ ಬರದ ಕಾರಣ ಚಿಕ್ಕಮಗಳೂರು ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ವಿದ್ಯಾ(16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿಕ್ಕಮಗಳೂರು ತಾಲ್ಲೂಕಿನ ಕಮ್ಮರಡಿಯ ವಿಶ್ವತೀರ್ಥ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾಳಿಗೆ, ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.67 ಅಂಕ ಬಂದಿದ್ದವು. ಈ ಅಂಕಗಳು ತೃಪ್ತಿತರದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸೋಮವಾರದ ಪರೀಕ್ಷೆಯ ಫಲಿತಾಂಶ ನೋಡಿದ ನಂತರ ಬೇಸರಗೊಂಡ ವಿದ್ಯಾರ್ಥಿನಿ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ತಂದೆ ಮಂಜುನಾಥ್ ಹರಿಹರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ಸಂಬಂಧ ದೂರು ದಾಖಲಿಸಿಕೊಳ್ಳಲಾಗಿದೆ.
Comments
student suicide sslc exam result police kannada news chikkamagaluru ವಿದ್ಯಾರ್ಥಿನಿ ಆತ್ಮಹತ್ಯೆ ಪೊಲೀಸ್ ಕನ್ನಡ ಸುದ್ದಿ ಚಿಕ್ಕಮಗಳೂರು
English summary
Student Vidya (16) from Kodur village in Chikkamagalur taluk has committed suicide by hanging herself because she did not score as high as expected in the SSLC exam.