ಸಹೋದರನ ಮಗನ ಕೊಲೆ ಸುದ್ದಿ ಕೇಳಿ ಹೃದಯಾಘಾತ: ದೊಡ್ಡಪ್ಪ ಸಾವು
ಚಿಕ್ಕಮಗಳೂರು, ನವೆಂಬರ್ 21 : ಸಹೋದರನ ಮಗನ ಕೊಲೆಯಾದ ಸುದ್ದಿ ಕೇಳಿ ದೊಡ್ಡಪ್ಪ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಭಾನುವಾರ ಹಣಕಾಸಿನ ವಿಚಾರಕ್ಕೆ ಓಂಕಾರ್ ಎಂಬ 30 ವರ್ಷದ ಯುವಕನನ್ನು ಐವರು ಸ್ನೇಹಿತರು ಕೊಲೆ ಮಾಡಿದ್ದಾರೆ. ಆರೋಪಿಗಳು ಹಾಗೂ ಕೊಲೆಯಾಗಿದ್ದ ಓಂಕಾರ್ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದರು. ವ್ಯವಹಾರದ ವಿಚಾರವಾಗಿ ಮಾತುಕತೆಗೆ ಭಾನುವಾರ ರಾತ್ರಿ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಾತಿಗೆ ಮಾತಿಗೆ ಬೆಳೆದು ಓಂಕಾರ್ರನ್ನು ಸ್ನೇಹಿತರೆಲ್ಲರೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಓಂಕಾರ್ ಕೊಲೆಯಾದ ವಿಷಯ ತಿಳಿದ ಆಘಾತದಲ್ಲೇ ಸೋಮವಾರ ಅವರ ದೊಡ್ಡಪ್ಪ ಪ್ರಕಾಶ್ (55) ಹೃದಯಾಘಾತದಿಂದ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಮನೆಮಗನನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಮತ್ತೊಂದು ಸಾವು ತೀವ್ರ ಆಘಾತವನ್ನುಂಟು ಮಾಡಿದೆ.

ಅತ್ತೆ ಸಾವಿನ ಸುದ್ದಿ ಕೇಳಿ ಅಳಿಯನಿಗೆ ಹೃದಯಾಘಾತ
ಸಾಗರ: ಅತ್ತೆಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಅಳಿಯ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ನಡೆದಿದೆ. 58 ವರ್ಷದ ಲಕ್ಷ್ಮಮ್ಮ, ಅವರ ಸೋದರಳಿಯ ಗುಲ್ಫತ್ ಸಿಂಗ್ ನಿಧನರಾಗಿರುವವರು.
ಗುಲ್ಫತ್ ಸಿಂಗ್ ತಮ್ಮ ಸೋದರತ್ತೆ ಲಕ್ಷ್ಮಮ್ಮರನ್ನು ಬೆಂಗಳೂರಿಗೆ ಬಸ್ ಹತ್ತಿಸಿ ಕಳುಹಿಸಿದ್ದರು. ಆದರೆ ಬಸ್ ಆನಂದಪುರ ಸಮೀಪ ಹೋಗುತ್ತಿರುವಾಗ ಲಕ್ಷ್ಮಮ್ಮರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಈ ವಿಷಯವನ್ನು ಬಸ್ ನಿರ್ವಾಹಕ ಗುಲ್ಫತ್ ಸಿಂಗ್ರಿಗೆ ತಿಳಿಸಿದ್ದಾರೆ.
ಈ ಸುದ್ದಿ ಕೇಳಿ ಆಘಾತಕ್ಕೊಳಗಾದ ಗುಲ್ಫತ್ ಮನೆಗೆ ಬರುವುದರೊಳಗೆ ಹೃದಯಾಘಾತವಾಗಿ ದಾರಿಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications