ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರಿಗೆ ಸಿ.ಟಿ ರವಿ ಚಾಲೆಂಜ್
ಚಿಕ್ಕಮಗಳೂರು, ಮೇ 17: ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡುವುದು ಅರ್ಥಹೀನ. 2003 ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ್ನು ಪರಿಷ್ಕರಣೆ ಮಾಡಿ, ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು ಎಂದರು.
ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಅದನ್ನು ವಿರೋಧ ಮಾಡುವವರಿಗೆ ನಾನು ಸಾರ್ವಜನಿಕ ಚರ್ಚೆಗೆ ಆಹ್ವಾನ ಮಾಡ್ತೀನಿ ಎಂದಿದ್ದಾರೆ. ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ? ಎಂದು ವಿರೋಧಿಸುವವರಿಗೆ ಪ್ರಶ್ನಿಸಿದ್ದಾರೆ.

ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚಾಗುತ್ತದೆ ವಿನಃ ನಷ್ಟವಾಗಲ್ಲ. ಯಾರು ಹೆಚ್ಚು ಬೆಲೆ ಕೊಡ್ತಾರೆ, ಎಲ್ಲಿ ಹೆಚ್ಚು ಲಾಭ ಸಿಗುತ್ತೆ ರೈತರು ಅಲ್ಲಿ ಹೋಗಿ ಮಾರಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತೆ ಎಂದಿದ್ದಾರೆ.
ಇಲ್ಲಿಯವರೆಗೂ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿದ್ದರೆ ಹೋಗಿ ಬೀದಿಗೆ ಸುರಿಯಬೇಕು, ಇಲ್ಲ ಕೇಳಿದಷ್ಟು ದರಕ್ಕೆ ಕೊಡುವ ವ್ಯವಸ್ಥೆ ಇತ್ತು. ಆದರೆ ಈಗ ಹಲವು ಮಾರ್ಗ, ಮಾರುಕಟ್ಟೆಗಳು ಹುಟ್ಟಿಕೊಂಡಾಗ ಮಾರುವ ಅವಕಾಶ ಹೆಚ್ಚಿರುತ್ತೆ, ಎಲ್ಲಿ ಲಾಭ ಸಿಗುತ್ತೊ ಅಲ್ಲಿಗೆ ರೈತರು ಮಾರುತ್ತಾರೆ. ಇದನ್ನು ವಿರೋಧ ಮಾಡುವುದು ಅರ್ಥಹೀನ ಎಂದು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications