ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರಿಗೆ ಸಿ.ಟಿ ರವಿ ಚಾಲೆಂಜ್
ಚಿಕ್ಕಮಗಳೂರು, ಮೇ 17: ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡುವುದು ಅರ್ಥಹೀನ. 2003 ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ್ನು ಪರಿಷ್ಕರಣೆ ಮಾಡಿ, ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು ಎಂದರು.
ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಅದನ್ನು ವಿರೋಧ ಮಾಡುವವರಿಗೆ ನಾನು ಸಾರ್ವಜನಿಕ ಚರ್ಚೆಗೆ ಆಹ್ವಾನ ಮಾಡ್ತೀನಿ ಎಂದಿದ್ದಾರೆ. ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ? ಎಂದು ವಿರೋಧಿಸುವವರಿಗೆ ಪ್ರಶ್ನಿಸಿದ್ದಾರೆ.

ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚಾಗುತ್ತದೆ ವಿನಃ ನಷ್ಟವಾಗಲ್ಲ. ಯಾರು ಹೆಚ್ಚು ಬೆಲೆ ಕೊಡ್ತಾರೆ, ಎಲ್ಲಿ ಹೆಚ್ಚು ಲಾಭ ಸಿಗುತ್ತೆ ರೈತರು ಅಲ್ಲಿ ಹೋಗಿ ಮಾರಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತೆ ಎಂದಿದ್ದಾರೆ.
ಇಲ್ಲಿಯವರೆಗೂ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದಿದ್ದರೆ ಹೋಗಿ ಬೀದಿಗೆ ಸುರಿಯಬೇಕು, ಇಲ್ಲ ಕೇಳಿದಷ್ಟು ದರಕ್ಕೆ ಕೊಡುವ ವ್ಯವಸ್ಥೆ ಇತ್ತು. ಆದರೆ ಈಗ ಹಲವು ಮಾರ್ಗ, ಮಾರುಕಟ್ಟೆಗಳು ಹುಟ್ಟಿಕೊಂಡಾಗ ಮಾರುವ ಅವಕಾಶ ಹೆಚ್ಚಿರುತ್ತೆ, ಎಲ್ಲಿ ಲಾಭ ಸಿಗುತ್ತೊ ಅಲ್ಲಿಗೆ ರೈತರು ಮಾರುತ್ತಾರೆ. ಇದನ್ನು ವಿರೋಧ ಮಾಡುವುದು ಅರ್ಥಹೀನ ಎಂದು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications