ಸಚಿವ ಅಶೋಕ್ ಪಿಎ ಲಂಚ ಕೇಳಿದ ಆರೋಪ; ಪೊಲೀಸರಿಗೆ ದೂರು ನೀಡುತ್ತೇನೆಂದ ಚೆಲುವರಾಜ್
ಚಿಕ್ಕಮಗಳೂರು, ಜನವರಿ 25: ಕಂದಾಯ ಸಚಿವ ಆರ್.ಅಶೋಕ್ ಪಿಎ ಲಂಚ ಕೇಳಿದ ಆರೋಪದ ವಿಚಾರವಾಗಿ, ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಚೆಲುವರಾಜ್, ""ಜ.20ನೇ ತಾರೀಖು ವಾಟ್ಸಾಪ್ ಮೂಲಕ ಸಚಿವರ ವೇಳಾಪಟ್ಟಿ ಬಂದಿತ್ತು. 24ನೇ ತಾರೀಖು ಸಚಿವರು ಬರುತ್ತಾರೆ, ನೀವು ಸಿಗಿ ಎಂದು ಕರೆ ಮಾಡಿದ್ದರು.''
""24ನೇ ತಾರೀಖು ಬೆಳಿಗ್ಗೆ 10.30ಕ್ಕೆ ಫೋನ್ ಮಾಡಿ ಸಂಜೆ ಸಿಗಲು ಹೇಳಿದರು. ನಾನು ಸಂಜೆ 6 ಗಂಟೆಗೆ ಶೃಂಗೇರಿಯ ಆದಿಚುಂಚನಗಿರಿ ಸಭಾ ಭವನಕ್ಕೆ ಹೋದೆ. ಅವರು 7.30ಕ್ಕೆ ಬಂದರು. ಅಲ್ಲೇ ಇದ್ದ ರೂಮಿಗೆ ಕರೆದುಕೊಂಡು ಹೋದರು.''

""ಅವರು ಯಾರೆಂದು ಗೊತ್ತಿರಲಿಲ್ಲ ನಾನು ಮೊದಲೇ ಪೊಲೀಸರಿಗೆ ಅವರನ್ನು ತೋರಿಸಲು ಕೇಳಿದ್ದೆ. ಪೊಲೀಸರು ಇವರೇ ಕಂದಾಯ ಸಚಿವರ ಪಿಎ ಎಂದು ಹೇಳಿದ್ದರು.''
""ಪಕ್ಕದ ರೂಮಿಗೆ ಹೋದ ಕೂಡಲೇ ಏನಿದೆ ಕೊಡಿ ಎಂದರು. ನಾನು ಕೊಡೋದಿಲ್ಲ, ತಗಳೋದು ಇಲ್ಲ ಎಂದು ನಾನು ನೇರವಾಗಿ ಹೇಳಿದೆ. ಆಮೇಲೆ ಆಯ್ತು ಹೋಗಿ ಎಂದರು. ಕೈಯಲ್ಲಿದ್ದ ಪೇಪರ್ ನೋಡಿ ಏನದು ಎಂದು ಕೇಳಿದರು.''
""ಕರ್ನಾಟಕ ಸೆಕ್ರಟರಿಗೆ ಕಂಪ್ಲೇಟ್ ಮಾಡಿದ್ದೇನೆ ಈ ಲೆಟರ್ ಸಚಿವರಿಗೆ ಕೊಡಿ ಎಂದೆ. ಅದನ್ನು ನೀವೇ ಕೊಟ್ಟುಕೊಳ್ಳಿ ಎಂದು ಹೇಳಿ ಹೋದರು. ನಿನ್ನೆ ರಾತ್ರಿ ವಾಟ್ಸಾಪ್ ಕಾಲ್ ಬಂದಿತ್ತು, ನಾನು ನೋಡಿರಲಿಲ್ಲ. ಸೋಮವಾರ ಬೆಳಗ್ಗೆ ಮತ್ತೆ ಕಾಲ್ ಮಾಡಿದ್ದೆ. ಅವರು ಫೈಲ್ ಕೊಡಲಿಲ್ಲ ಎಂದರು. ಯಾವ ಫೈಲ್ ಇಲ್ಲ. ನೀವು ಲಂಚ ಕೇಳಿದರೂ ನಾನು ಕೊಡಲಿಲ್ಲ ಎಂದೆ.''
ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇನೆ, ಡ್ರಾಫ್ಟ್ ರೆಡಿ ಮಾಡುತ್ತಿದ್ದೇನೆ. ಕಂದಾಯ ಸಚಿವರ ಹೆಸರಿನಲ್ಲಿ ಹಣ ಕೀಳುವ ಕೆಲಸವಾಗುತ್ತಿದೆ ಎಂದು ಶೃಂಗೇರಿ ಉಪ ನೋಂದಣಾಧಿಕಾರಿ ಚೆಲುವರಾಜ್ ತಿಳಿಸಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications