ಮಹಿಳೆಯರ ಜೊತೆ ಅಸಭ್ಯ ವರ್ತನೆ: ತರೀಕೆರೆಯಲ್ಲಿ ಚಿನ್ನದಂಗಡಿ ಮಾಲೀಕನಿಗೆ ಮೆಟ್ಟಿನ ಏಟು
ಚಿಕ್ಕಮಗಳೂರು, ಅಕ್ಟೋಬರ್, 17: ಚಿನ್ನದ ಅಂಗಡಿಗೆ ಬರುವ ಮಹಿಳೆ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿಯ ಜೊತೆ ಅಸಭ್ಯ ವರ್ತನೆ ತೋರಿದ ಚಿನ್ನದಂಗಡಿ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಎಂ.ಜಿ.ರಸ್ತೆಯಲ್ಲಿ ನಡೆದಿದೆ.
ಅಂಗಡಿ ಬರುವವರ ಜೊತೆ ಅಸಭ್ಯ ವರ್ತನೆ ತೋರಿದ ಚಿನ್ನದ ವ್ಯಾಪಾರಿಗೆ ಧರ್ಮದೇಟು ಬಿದ್ದಿದೆ. ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿಕರು ಅಂಗಡಿ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎಂ.ಜಿ.ರಸ್ತೆಯಲ್ಲಿರುವ ಚಿನ್ನಗಂಗಡಿ ಮಾಲೀಕ ಅಮೀರ್ ಎಂಬ ಚಿನ್ನದ ವ್ಯಾಪಾರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಗೂಸಾ ನೀಡಿದ್ದಾರೆ.

ಅಮೀರ್ಗೆ ಬಾಲಕಿಯ ತಾಯಿ ಚಪ್ಪಲಿ ಏಟು ನೀಡಿದ್ದಾರೆ. ಈ ಘಟನೆಯು ನಾಲ್ಕು ದಿನದ ಹಿಂದೆ ನಡೆಡಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಇನ್ನು ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಚಿನ್ನದ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಕಂಡಕ್ಟರ್ಗೆ ಹಿಗ್ಗಮುಗ್ಗಾ ಥಳಿತ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಒಂದಲ್ಲ ಒಂದು ತೊಂದರೆ ಅನುಭವಿಸುವಂತಾಗಿದೆ. ಇತ್ತೀಚೆಗಷ್ಟೇ ಮಹಿಳೆಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕೆಎಸ್ಆರ್ಟಿಸಿ ಕಂಡಕ್ಟರ್ಗೆ ಹಿಗ್ಗಮುಗ್ಗಾ ಥಳಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿತ್ತು.
ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪ ಕೇಳಿಬಂದ ಹಿನ್ನೆಲೆ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನೆಹರೂ ವೃತ್ತದಲ್ಲಿ ನಡೆದಿದೆ. ಇನ್ನು ಹಲ್ಲೆಗೊಳಗಾದ ಬಸ್ ನಿರ್ವಾಹಕ ಚಂದ್ರೇಗೌಡ ಎಂದು ತಿಳಿದುಬಂದಿತ್ತು.
ಬಸ್ ಕಂಡಕ್ಟರ್ ಮತ್ತು ಡ್ರೈವರ್ ರಾಯದುರ್ಗ-ಬೆಂಗಳೂರು ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಚಳ್ಳಕೆರೆಯಿಂದ ಇದೇ ಬಸ್ನಲ್ಲಿ ಪ್ರಯಾಣಿಸಿದ್ದ ಓರ್ವ ಮಹಿಳೆ ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಪ್ರಯಾಣಿಸಿದ್ದರಂತೆ. ಬಳಿಕ ದಾಬಸಪೇಟೆ ಬಳಿ ಬಂದಾಗ ಬಸ್ ನಿಲ್ಲಿಸಲು ಮಹಿಳೆ ಹೇಳಿದರೂ, ನಿರ್ವಾಹಕ ಚಂದ್ರೇಗೌಡ ಬಸ್ ನಿಲ್ಲಿಸದೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದಾನೆ. ಬಳಿಕ ಈ ಬಗ್ಗೆ ಪ್ರಶ್ನೆ ಮಾಡಿದ ಮಹಿಳೆ ಜೊತೆಗೆ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದ.
ಭಯಗೊಂಡ ಮಹಿಳೆ ಕುಟುಂಬದ ಸಂಬಂಧಿಕರಿಗೆ ಘಟನೆ ಬಗ್ಗೆ ತಿಳಿಸಿದ್ದು, ಇಂದು ಮಹಿಳೆಯ ಸಂಬಂಧಿಕರು ಚಳ್ಳಕೆರೆ ಬಸ್ ನಿಲ್ದಾಣದ ಬಳಿ ಬಸ್ ನಿರ್ವಾಹಕನಿಗೆ ಕಾದು ಕುಳಿತಿದ್ದರು. ನಿಲ್ದಾಣಕ್ಕೆ ಬಸ್ ಬಂದ ತಕ್ಷಣವೇ ನಿರ್ವಾಹಕನನ್ನು ಹಿಡಿದು ಮನಸೋಇಚ್ಛೆ ಥಳಿಸಿ ಹಲ್ಲೆ ಮಾಡಿದ್ದರು. ಇನ್ನು ಹಲ್ಲೆಗೊಳಗಾದ ನಿರ್ವಾಹಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications