ಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿ
Recommended Video

ಚಿಕ್ಕಮಗಳೂರು, ಸೆಪ್ಟೆಂಬರ್.20: ಸಿ.ಎಂ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ದಂಗೆಗೆ ಕರೆ ಕೊಡುವ ಹೇಳಿಕೆ ಸಂವಿಧಾನ ಬಾಹಿರ ಹಾಗೂ ಖಂಡನೀಯ. ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಶಾಸಕ ಸಿಟಿ ರವಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕುಮಾರಸ್ವಾಮಿ ನೈತಿಕ ದಾರಿಯಲ್ಲಿ ಮುಖ್ಯಮಂತ್ರಿ ಆಗಿಲ್ಲ. ಅಧಿಕಾರಕ್ಕಾಗಿ ಯಾವುದೇ ಕಾಂಪ್ರಮೈಸ್ ಮಾಡಿಕೊಳ್ಳುವವರು ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ.
ಆಪರೇಷನ್, ಬಂಡಾಯ ನೀವು ಮಾಡದಿರುವ ಕೆಲಸ ಅಲ್ಲ. ನೀವು ಮಾಡಿದ್ರೆ ಪ್ರಜಾಪ್ರಭುತ್ವ ಮಾರ್ಗ. ಬೇರೆಯವರು ಮಾಡಿದ್ರೆ ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಸಿ.ಎಂ ದ್ವಂದ್ವ ನಿಲುವನ್ನು ತೋರಿಸುತ್ತದೆ.

ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಚಟುವಟಿಕೆ ಬಿಜೆಪಿ ನಡೆಸಿಲ್ಲ. ಆಂತರಿಕ ಕುಸಿತದಿಂದ ಸರ್ಕಾರ ಬಿದ್ರೆ ಉಳಿಸುವ ಜವಾಬ್ದಾರಿ ನಮ್ಮದಲ್ಲ ಎಂದು ಸಿಟಿ ರವಿ ಕಿಡಿಕಾರಿದರು.
ಕಾಂಗ್ರೆಸ್ನ ಕಾರ್ಯಕರ್ತರು ಹಠಾತ್ತನೆ ಇಂದು (ಸೆ.20)ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಮುಂದೆ ಪ್ರತಿಭಟನೆ ಮಾಡಿದರು. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರ ನಿವಾಸಲ್ಲಿದ್ದ ಬಿಜೆಪಿಯ ಶಾಸಕರಾದ ರೇಣುಕಾಚಾರ್ಯ, ವಿಶ್ವನಾಥ, ರವಿಕುಮಾರ್ ಹಾಗೂ ಇನ್ನು ಕೆಲವರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದರು.
ಆಗ ಬಿಜೆಪಿ ಶಾಸಕ ವಿಶ್ವನಾಥ ಅವರು ಸುದ್ದಿಗಾರರ ಜೊತೆ ಮಾತನಾಡಿ, 'ಕುಮಾರಸ್ವಾಮಿ ಅವರು ಮಧ್ಯಾಹ್ನ ನಾನೇ ಧಂಗೆ ಏಳಲು ಕರೆ ನೀಡುತ್ತೇನೆ' ಎಂದು ಹೇಳಿಕೆ ಕೊಟ್ಟಿರುವ ಬೆನ್ನಲ್ಲೆ ಹೀಗೆ ನಡೆದಿದೆ. ಇದು ಸರ್ಕಾರವೇ ಗೂಂಡಾಗಿರಿ ಮಾಡಲು ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications