ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಹೇಳಿಕೆ ಕೊಟ್ಟ ಸಿ ಟಿ ರವಿ | Oneindia Kannada

ಚಿಕ್ಕಮಗಳೂರು, ಸೆಪ್ಟೆಂಬರ್.20: ಸಿ.ಎಂ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ದಂಗೆಗೆ ಕರೆ ಕೊಡುವ ಹೇಳಿಕೆ ಸಂವಿಧಾನ ಬಾಹಿರ ಹಾಗೂ ಖಂಡನೀಯ. ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಶಾಸಕ ಸಿಟಿ ರವಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕುಮಾರಸ್ವಾಮಿ ನೈತಿಕ ದಾರಿಯಲ್ಲಿ ಮುಖ್ಯಮಂತ್ರಿ ಆಗಿಲ್ಲ. ಅಧಿಕಾರಕ್ಕಾಗಿ ಯಾವುದೇ ಕಾಂಪ್ರಮೈಸ್ ಮಾಡಿಕೊಳ್ಳುವವರು ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ.

ಬಿಎಸ್‌ವೈ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಶಾಸಕರೊಂದಿಗೆ ಜಟಾಪಟಿಬಿಎಸ್‌ವೈ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಶಾಸಕರೊಂದಿಗೆ ಜಟಾಪಟಿ

ಆಪರೇಷನ್, ಬಂಡಾಯ ನೀವು ಮಾಡದಿರುವ ಕೆಲಸ ಅಲ್ಲ. ನೀವು ಮಾಡಿದ್ರೆ ಪ್ರಜಾಪ್ರಭುತ್ವ ಮಾರ್ಗ. ಬೇರೆಯವರು ಮಾಡಿದ್ರೆ ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಸಿ.ಎಂ ದ್ವಂದ್ವ ನಿಲುವನ್ನು ತೋರಿಸುತ್ತದೆ.

MLA CT Ravi Says CM Kumaraswamy is desperate

ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಚಟುವಟಿಕೆ ಬಿಜೆಪಿ ನಡೆಸಿಲ್ಲ. ಆಂತರಿಕ ಕುಸಿತದಿಂದ ಸರ್ಕಾರ ಬಿದ್ರೆ ಉಳಿಸುವ ಜವಾಬ್ದಾರಿ ನಮ್ಮದಲ್ಲ ಎಂದು ಸಿಟಿ ರವಿ ಕಿಡಿಕಾರಿದರು.

ಬಿಜೆಪಿ ಸರ್ಕಾರ ರಚನೆ ಮಾಡುವ ಹೊಣೆ ಯಡಿಯೂರಪ್ಪ ಹೆಗಲಿಗೆಬಿಜೆಪಿ ಸರ್ಕಾರ ರಚನೆ ಮಾಡುವ ಹೊಣೆ ಯಡಿಯೂರಪ್ಪ ಹೆಗಲಿಗೆ

ಕಾಂಗ್ರೆಸ್‌ನ ಕಾರ್ಯಕರ್ತರು ಹಠಾತ್ತನೆ ಇಂದು (ಸೆ.20)ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದ ಮುಂದೆ ಪ್ರತಿಭಟನೆ ಮಾಡಿದರು. ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರ ನಿವಾಸಲ್ಲಿದ್ದ ಬಿಜೆಪಿಯ ಶಾಸಕರಾದ ರೇಣುಕಾಚಾರ್ಯ, ವಿಶ್ವನಾಥ, ರವಿಕುಮಾರ್ ಹಾಗೂ ಇನ್ನು ಕೆಲವರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದರು.

 ಯಡಿಯೂರಪ್ಪನವರೇ ಅಧಿಕಾರ ನನ್ನ ಬಳಿ ಇದೆ: ಕುಮಾರಸ್ವಾಮಿ ನೇರ ಎಚ್ಚರಿಕೆ ಯಡಿಯೂರಪ್ಪನವರೇ ಅಧಿಕಾರ ನನ್ನ ಬಳಿ ಇದೆ: ಕುಮಾರಸ್ವಾಮಿ ನೇರ ಎಚ್ಚರಿಕೆ

ಆಗ ಬಿಜೆಪಿ ಶಾಸಕ ವಿಶ್ವನಾಥ ಅವರು ಸುದ್ದಿಗಾರರ ಜೊತೆ ಮಾತನಾಡಿ, 'ಕುಮಾರಸ್ವಾಮಿ ಅವರು ಮಧ್ಯಾಹ್ನ ನಾನೇ ಧಂಗೆ ಏಳಲು ಕರೆ ನೀಡುತ್ತೇನೆ' ಎಂದು ಹೇಳಿಕೆ ಕೊಟ್ಟಿರುವ ಬೆನ್ನಲ್ಲೆ ಹೀಗೆ ನಡೆದಿದೆ. ಇದು ಸರ್ಕಾರವೇ ಗೂಂಡಾಗಿರಿ ಮಾಡಲು ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದರು.

English summary
MLA CT Ravi Said that CM Kumaraswamy is desperate. Call for a coup is unconstitutional and condemnable. Immediately they should apologize. Kumaraswamy is not the chief minister on the moral path.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X