ದಾಂಪತ್ಯ ಕಲಹ: ಪ್ರತಿಕ್ರಿಯೆ ನೀಡಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ
ಚಿಕ್ಕಮಗಳೂರು, ಜನವರಿ 20: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರ ಅತ್ತೆ ಪ್ರೇಮಕುಮಾರಿ ಮೈಸೂರಿನಲ್ಲಿ ಶನಿವಾರ (ಜ.19ರಂದು) ಸುದ್ದಿಗೋಷ್ಠಿ ನಡೆಸಿ ಶಾಸಕ ಕುಮಾರಸ್ವಾಮಿ ತನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ. ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದರೂ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುತ್ತಿಲ್ಲ ಎಂದು ಆರೋಪಿಸಿದ್ದರು.
ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಾಗೂ ಸ್ಪೀಕರ್ ಗೆ ದೂರು ನೀಡುವುದಾಗಿ ತಿಳಿಸಿದ ಪ್ರೇಮಕುಮಾರಿ, ತನ್ನ ಹೆಂಡತಿಯನ್ನೇ ಸರಿಯಾಗಿ ನೋಡಿಕೊಳ್ಳದ ಶಾಸಕ ಹೇಗೆ ಆಡಳಿತ ಮಾಡುತ್ತಾರೆ. ಹೆಣ್ಣಿಗೆ ಗೌರವ ತೋರದ ಬಿಜೆಪಿ ನಾಯಕರು ರಾಜ್ಯಭಾರ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದರು.
ಈ ವಿಚಾರವಾಗಿ ಇಂದು ಪ್ರತಿಕ್ರಯಿಸಿರುವ ಶಾಸಕ ಎಂ.ಪಿ ಕುಮಾರಸ್ವಾಮಿ ನಾನು ಆ ವಿಚಾರವನ್ನು ಕೋರ್ಟ್ ನಲ್ಲೇ ತೀರ್ಮಾನಿಸಿಕೊಳ್ಳುತ್ತೇನೆ. ಈ ವಿಚಾರವನ್ನು ತೆಗೆದುಕೊಂಡು ಸ್ಪೀಕರ್ ರಮೇಶ್ ಕುಮಾರ್ ಬಳಿ ಹೋಗಲು ತೀರ್ಮಾನಿಸಿದ್ದಾರೆ.

ಆದರೆ ಸ್ಪೀಕರ್ ಹಿರಿಯರು. ಪರಿಸ್ಥಿತಿ ಅರ್ಥ ಮಾಡಿಕೊಳ್ಳುತ್ತಾರೆ. ನಾನೂ ಎಂ.ಎಲ್.ಎ ಆದ ಮೇಲೆ ಮಗನಿದ್ದಂತೆ ಎನ್ನುತ್ತಿದ್ದರು. ಅದೇ ಸೋತಾಗ ನಾನು ಅತ್ತೆ ಪ್ರೇಮಕುಮಾರಿ ಅವರಿಗೆ ಮಗನಲ್ಲವಾ? ನೆನಪಾಗಿಲ್ವ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ನಾನು ಹೆಚ್ಚೇನೂ ಮಾತನಾಡಲಾರೆ ಎಂದು ತಿಳಿಸಿದ್ದಾರೆ.
2009ರಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ ಹಾಗೂ ಸವಿತಾ ಅವರು ವಿವಾಹವಾಗಿದ್ದರು. 2015ರಲ್ಲಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಬಳಿಕ ಅಂದಿನಿಂದ ಹೆಂಡತಿ ತಾಯಿ ಮನೆಯಲ್ಲೇ ವಾಸವಾಗಿದ್ದರು. ಈ ವಿಚಾರವಾಗಿ ಸವಿತಾ ಅವರು ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಮೂರು ತಿಂಗಳ ಹಿಂದೆ, ಹೆಂಡತಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಕೋರ್ಟ್ ಆದೇಶ ನೀಡಿತ್ತು. ಕೋರ್ಟ್ ಆದೇಶ ನೀಡಿ 3 ತಿಂಗಳಾದರೂ ಕುಮಾರಸ್ವಾಮಿ ಅವರು ಹೆಂಡತಿಯನ್ನ ಮನೆಗೆ ಕೆರದುಕೊಂಡು ಹೋಗಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications