ಹಸಿವಿನಿಂದ ಕಂಗಾಲಾದ ಮಂಗಗಳು; ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮನಕಲಕುವ ದೃಶ್ಯ
ಚಿಕ್ಕಮಗಳೂರು, ಆಗಸ್ಟ್ 24: ಈ ಬಾರಿ ಸುರಿದ ಮಳೆ, ಪ್ರವಾಹ ಚಿಕ್ಕಮಗಳೂರನ್ನು ತತ್ತರಿಸುವಂತೆ ಮಾಡಿದೆ. ಧೋ ಎಂದು ಸುರಿಯುವ ಮಳೆ, ಗುಡ್ಡ ಕುಸಿತ, ಭೂ ಕುಸಿತ ಜನರ ನಿದ್ದೆಗೆಡಿಸಿದ್ದವು. ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾದರು ಹಲವರು. ಕೆಲ ರಸ್ತೆಗಳು ಸಂಪರ್ಕವನ್ನೇ ಕಳೆದುಕೊಂಡವು.
ಚಾರ್ಮಾಡಿ ಘಾಟ್ ರಸ್ತೆ ಸ್ಥಿತಿಯನ್ನಂತೂ ಹೇಳುವುದೇ ಬೇಡ. ಹತ್ತನ್ನೆರಡು ಕಡೆ ಗುಡ್ಡ ಕುಸಿದು ಕಳೆದ ಹತ್ತು ದಿನಗಳಿಂದಲೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಆದರೆ ಈ ರಸ್ತೆಯಲ್ಲೇ ತಮ್ಮ ಆಹಾರ, ಬದುಕು ಕಂಡುಕೊಂಡಿದ್ದ ಮಂಗಗಳ ಸ್ಥಿತಿ ಮಾತ್ರ ಕರುಣಾಜನಕವಾಗಿದೆ. ರಸ್ತೆಯಲ್ಲಿ ಜನ ಸಂಚಾರವಿಲ್ಲದಿರುವುದರಿಂದ ಆಹಾರವೂ ಸಿಗದೇ ಮಂಗಗಳು ನಿತ್ರಾಣಗೊಳ್ಳುತ್ತಿವೆ.
ರಸ್ತೆ ಬಂದ್ ಹಿನ್ನೆಲೆಯಲ್ಲಿ ಮಂಗಗಳಿಗೆ ಆಹಾರ ಕೊರತೆ ಉಂಟಾಗಿದೆ. ಪ್ರತಿದಿನ ತಮ್ಮ ಮರಿಗಳೊಂದಿಗೆ ರಸ್ತೆಯಲ್ಲಿ ಆಹಾರಕ್ಕಾಗಿ ಮಂಗಗಳು ಓಡಾಡುತ್ತಿದ್ದ ದೃಶ್ಯ ಇಲ್ಲಿ ಮಾಮೂಲಾಗಿತ್ತು. ಇಲ್ಲಿ ಓಡಾಡುವವರೂ ಏನಾದರೂ ತಿನಿಸುಗಳನ್ನು ಮಂಗಗಳಿಗೆ ನೀಡುತ್ತಿದ್ದರು. ಆದರೆ ಈಗ ಯಾರೂ ಈ ರಸ್ತೆಯಲ್ಲಿ ಜನರ ಓಡಾಟ ಇಲ್ಲವಾದ್ದರಿಂದ ಮಂಗಗಳಿಗೂ ಆಹಾರ ಸಿಗುತ್ತಿಲ್ಲ.

ಆಹಾರವಿಲ್ಲದೇ ಹಸಿವಿನಿಂದ ಕಂಗಾಲಾಗಿರುವ ಮಂಗಗಳು ರಸ್ತೆಯಲ್ಲಿ ತಿಂಡಿಗೆ ಕಾದು ಕುಳಿತಿರುವ ದೃಶ್ಯ ಮನಹಿಂಡುವಂತಿದೆ. ರಸ್ತೆ ಬದಿಯಲ್ಲಿ, ಮರಗಳ ಮೇಲೆ ಆಹಾರವಿಲ್ಲದೇ ಮಂಗಗಳು ನಿತ್ರಾಣಗೊಂಡು ಮಲಗಿವೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications