ಹಸಿವಿನಿಂದ ಕಂಗಾಲಾದ ಮಂಗಗಳು; ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮನಕಲಕುವ ದೃಶ್ಯ
ಚಿಕ್ಕಮಗಳೂರು, ಆಗಸ್ಟ್ 24: ಈ ಬಾರಿ ಸುರಿದ ಮಳೆ, ಪ್ರವಾಹ ಚಿಕ್ಕಮಗಳೂರನ್ನು ತತ್ತರಿಸುವಂತೆ ಮಾಡಿದೆ. ಧೋ ಎಂದು ಸುರಿಯುವ ಮಳೆ, ಗುಡ್ಡ ಕುಸಿತ, ಭೂ ಕುಸಿತ ಜನರ ನಿದ್ದೆಗೆಡಿಸಿದ್ದವು. ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾದರು ಹಲವರು. ಕೆಲ ರಸ್ತೆಗಳು ಸಂಪರ್ಕವನ್ನೇ ಕಳೆದುಕೊಂಡವು.
ಚಾರ್ಮಾಡಿ ಘಾಟ್ ರಸ್ತೆ ಸ್ಥಿತಿಯನ್ನಂತೂ ಹೇಳುವುದೇ ಬೇಡ. ಹತ್ತನ್ನೆರಡು ಕಡೆ ಗುಡ್ಡ ಕುಸಿದು ಕಳೆದ ಹತ್ತು ದಿನಗಳಿಂದಲೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಆದರೆ ಈ ರಸ್ತೆಯಲ್ಲೇ ತಮ್ಮ ಆಹಾರ, ಬದುಕು ಕಂಡುಕೊಂಡಿದ್ದ ಮಂಗಗಳ ಸ್ಥಿತಿ ಮಾತ್ರ ಕರುಣಾಜನಕವಾಗಿದೆ. ರಸ್ತೆಯಲ್ಲಿ ಜನ ಸಂಚಾರವಿಲ್ಲದಿರುವುದರಿಂದ ಆಹಾರವೂ ಸಿಗದೇ ಮಂಗಗಳು ನಿತ್ರಾಣಗೊಳ್ಳುತ್ತಿವೆ.
ರಸ್ತೆ ಬಂದ್ ಹಿನ್ನೆಲೆಯಲ್ಲಿ ಮಂಗಗಳಿಗೆ ಆಹಾರ ಕೊರತೆ ಉಂಟಾಗಿದೆ. ಪ್ರತಿದಿನ ತಮ್ಮ ಮರಿಗಳೊಂದಿಗೆ ರಸ್ತೆಯಲ್ಲಿ ಆಹಾರಕ್ಕಾಗಿ ಮಂಗಗಳು ಓಡಾಡುತ್ತಿದ್ದ ದೃಶ್ಯ ಇಲ್ಲಿ ಮಾಮೂಲಾಗಿತ್ತು. ಇಲ್ಲಿ ಓಡಾಡುವವರೂ ಏನಾದರೂ ತಿನಿಸುಗಳನ್ನು ಮಂಗಗಳಿಗೆ ನೀಡುತ್ತಿದ್ದರು. ಆದರೆ ಈಗ ಯಾರೂ ಈ ರಸ್ತೆಯಲ್ಲಿ ಜನರ ಓಡಾಟ ಇಲ್ಲವಾದ್ದರಿಂದ ಮಂಗಗಳಿಗೂ ಆಹಾರ ಸಿಗುತ್ತಿಲ್ಲ.

ಆಹಾರವಿಲ್ಲದೇ ಹಸಿವಿನಿಂದ ಕಂಗಾಲಾಗಿರುವ ಮಂಗಗಳು ರಸ್ತೆಯಲ್ಲಿ ತಿಂಡಿಗೆ ಕಾದು ಕುಳಿತಿರುವ ದೃಶ್ಯ ಮನಹಿಂಡುವಂತಿದೆ. ರಸ್ತೆ ಬದಿಯಲ್ಲಿ, ಮರಗಳ ಮೇಲೆ ಆಹಾರವಿಲ್ಲದೇ ಮಂಗಗಳು ನಿತ್ರಾಣಗೊಂಡು ಮಲಗಿವೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications