ಚಿಕ್ಕಮಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 9ಕೆ.ಜಿಗೂ ಅಧಿಕ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಮಗಳೂರು, ಮಾರ್ಚ್ 23: ಕಾಫಿನಾಡು ಚಿಕ್ಕಮಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು ದಾಖಲೆ ಇಲ್ಲದ 2 ಕೋಟಿ 30 ಲಕ್ಷ ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ದಾಖಲೆ ಇಲ್ಲದೆ ಪಿಕಪ್ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ. ಮೌಲ್ಯದ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್ನಲ್ಲಿ ನಾಲ್ಕು ಬಾಕ್ಸ್ ಚಿನ್ನವನ್ನು ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕತ್ಗಳು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಕಾರ್ಯಾಚರಣೆ ಬಗ್ಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾಹಿತಿ ನೀಡಿದ್ದಾರೆ. ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಚಿನ್ನಾಭರಣಗಳಿಗೆ ಸೂಕ್ತ ದಾಖಲೆ ಸಿಗದ ಕಾರಣ ವಾಹನದಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಆರ್ಎಲ್ ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಸೀರೆಗಳು ಸೀಜ್
ಇನ್ನು ಚಿಕ್ಕಮಗಳೂರಿನ ವಿಆರ್ಎಲ್ ಲಾಜಿಸ್ಟಿಕ್ಸ್ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಬೆಲೆಬಾಳುವ ಸಾವಿರಾರು ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚಂದನ್ ಕುಮಾರ್ ಜೈನ್ ಹೆಸರಿನಲ್ಲಿ ನಕಲಿ ವಿಳಾಸ, ಮೊಬೈಲ್ ನಂಬರ್ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳನ್ನು ತರಿಸಿಕೊಳ್ಳಲಾಗಿತ್ತು.
ಚಿಕ್ಕಮಗಳೂರಿನ ಜಯನಗರದಲ್ಲಿರುವ ವಿಆರ್ಎಲ್ ಲಾಜಿಸ್ಟಿಕ್ಸ್ ಗೋದಾಮಿಗೆ ಸೂರತ್ ಸೀರೆ ಫ್ಯಾಕ್ಟರಿಯಿಂದ ತರಿಸಿಕೊಳ್ಳಲಾಗಿದ್ದು, ಸೀರೆ ಫ್ಯಾಕ್ಟರಿ ಸಿಬ್ಬಂದಿ ಹಾಗೂ ಚಂದನ್ ಕುಮಾರ್ ಜೈನ್ ಪೊಲೀಸರ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಬಗ್ಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮುಳಗುಂದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ 24 ಲಕ್ಷ ರೂಪಾಯಿ ಪತ್ತೆ
ಇನ್ನು ಚುನಾವಣೆ ಸಮೀಪಿಸುತ್ತಿದ್ದಂತೆ ಅಕ್ರಮ ಹಣ, ಚಿನ್ನ, ಸೀರೆ ಹಾಗೂ ಇತರ ವಸ್ತುಗಳ ಸಾಗಾಟ ಜೋರಾಗಿದ್ದು, ಈ ನಿಟ್ಟಿನಲ್ಲಿ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಸಕ್ರಿಯರಾಗಿದ್ದಾರೆ. ಗದಗ ಪೊಲೀಸರ ಭರ್ಜರಿ ಕಾರ್ಯಚರಣೆ. ಇತ್ತು ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆಯ ಮುಳಗುಂದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದ 24 ಲಕ್ಷ ರೂಪಾಯಿ ಪತ್ತೆಯಾಗಿತ್ತು.
ದಾವಣಗೆರೆಯಿಂದ ಗದಗ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಕಾರನಲ್ಲಿ 20 ಲಕ್ಷ 50 ಸಾವಿರ ರೂಪಾಯಿ ಹಾಗೂ ಬದಾಮಿ ತಾಲೂಕಿನ ಜಾಲಿಹಾಳದಿಂದ ಲಕ್ಷ್ಮೇಶ್ವರ ಕಡೆಗೆ ಹೊರಟ್ಟಿದ್ದ 4 ಲಕ್ಷ ರೂಪಾಯಿ ನಗದನ್ನು ಗದಗ ಪೊಲೀಸರು ವಶಕ್ಕೆ ಪಡೆದಿದ್ದರು. ಗದಗ ಎಸ್ಪಿ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಾಹನ ಖರೀದಿ, ಆಸ್ತಿ ಖರೀದಿಗೆ ಹಣ ತಗೆದುಕೊಂಡು ಹೊರಟ್ಟಿದ್ದೇವೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಆದರೆ ಸೂಕ್ತ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications