ಕಲುಷಿತವೋ..ವಿಷವೋ? ಜೋಡಿಲಿಂಗದಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣ ಹೋಮ: ಗ್ರಾಮಸ್ಥರಲ್ಲಿ ಆತಂಕ
ಚಿಕ್ಕಮಗಳೂರು, ಜುಲೈ 03: ಕೆರೆ ನೀರು ಕಲುಷಿತಗೊಡು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿ ಕೆರೆಯಲ್ಲೇ ತೆಲಾಗುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆರೆಯಲ್ಲಿದ್ದ ಮೀನುಗಳು ಏಕಾಏಕಿ ಸಾವನ್ನಪ್ಪಿದ್ದನ್ನು ಕಂಡ ಜೋಡಿ ಲಿಂಗದಹಳ್ಳಿ ಗ್ರಾಮಸ್ಥರು ಹೌಹಾರಿದ್ದಾರೆ. ಕೆರೆ ನೀರು ಕಲುಷಿತಗೊಂಡಿದ್ದರಿಂದಲೇ ಮೀನುಗಳು ಸಾವನ್ನಪ್ಪಿವೆಯೋ ಅಥವಾ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿದ್ದರಿಂದ ಮೀನುಗಳು ಸಾವನಪ್ಪಿದ್ದಾವೋ ಎನ್ನುವುದು ಇನ್ನೂ ಸ್ಪಷ್ಟವಿಲ್ಲ. ಆದರೆ, ಕೆರೆಯ ದಡದಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿವೆ.

ಸಖರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮ ನೂರಾರು ರೈತರು ಕೂಡ ಇದೇ ಕೆರೆ ನೀರನ್ನು ಉಪಯೋಗಿಸುತ್ತಿದ್ದರು. ಸುಮಾರು 57 ಎಕರೆಯನ್ನು ಮೀನು ಸಾಕಾಣಿಕೆಗೆ ಗುತ್ತಿಗೆ ಪಡೆದು ಒಂದು ಲಕ್ಷಕ್ಕೂ ಅಧಿಕ ಮೀನುಗಳನ್ನು ಕೆರೆಗೆ ಬಿಡಲಾಗಿತ್ತು. ಜಾನುವಾರಗಳು ಹಾಗೂ ಹಳ್ಳಿಗರು ನಿತ್ಯ ಉಪಯೋಗಕ್ಕೂ ಕೂಡ ಇದೇ ನೀರನ್ನು ಅವಲಂಬಿಸಿದ್ದರು.
ಇದೀಗ ಕೆರೆಯಲ್ಲಿ ಮೀನುಗಳ ಮಾರಣ ಹೋಮದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕೆರೆಯಲ್ಲಿ ಮೀನುಗಳ ಸಾವಿನಿಂದ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಆತಂಕ ಕಾಡುತ್ತಿದೆ. ಜೊತೆಗೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೆರೆಗೆ ವಿಷ ಹಾಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಚಾರ್ಮುಡಿ ಘಾಟ್ ರಸ್ತೆಯಲ್ಲಿ ಕೆಟ್ಟು ನಿಂತ ಲಾರಿ, ರಾತ್ರಿಯಿಂದ ಮುಂಜಾನೆಯವರಿಗೂ ಪರದಾಡಿದ ವಾಹನ ಸವಾರರು
ಚಿಕ್ಕಮಗಳೂರು: ಚಾರ್ಮುಡಿ ಘಾಟ್ ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ಪ್ರಯಾಣಿಕರು ಪರದಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ರಾತ್ರಿಯಿಂದ ಮುಂಜಾನೆಯವರಿಗೂ ವಾಹನ ಸವಾರರು ಪರದಾಡಿದ್ದಾರೆ.

ಚಾರ್ಮುಡಿ ಘಾಟ್ನ 6ನೇ ತಿರುವಿನಲ್ಲಿ ಲಾರಿ ಕೆಟ್ಟು ನಿಂತಿದೆ. ಇದರಿಂದ ರಾತ್ರಿ 11 ಗಂಟೆಯಿಂದ ಮುಂಜಾನೆ ನಾಲ್ಕು ಗಂಟೆಯವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ನ ದಟ್ಟ ಕಾಡಿನ ಮಧ್ಯೆ ನೂರಾರು ವಾಹನಗಳು ರಾತ್ರಿಯಿಡೀ ನಿಂತಲ್ಲೇ ನಿಂತಿರಬೇಕಾದ ಪರಿಸ್ಥಿತಿ ಅನುಭವಿಸಿವೆ. ಇದರಿಂದ ನೂರಾರು ವಾಹನ ಸವಾರರು ಚಾರ್ಮುಡಿ ಘಾಟ್ನಲ್ಲಿ ರಾತ್ರಿಪೂರ್ತಿ ಪರದಾಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications