ಚಿಕ್ಕಮಗಳೂರಿನಲ್ಲಿ ದುರಂತ: ಕೆರೆಯಲ್ಲಿ ಮುಳುಗಿ ತಾಯಿ-ಮಗಳು ಸಾವು
ಚಿಕ್ಕಮಗಳೂರು, ಡಿಸೆಂಬರ್ 21: ಕೆರೆಯಲ್ಲಿ ಮುಳುಗಿ ತಾಯಿ ಮಗಳು ಸಾವನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪದ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ವಡ್ಡರಹಳ್ಳಿ ಗ್ರಾಮದ ಶೋಭ(40), ಮಗಳು ವರ್ಷಾ(8) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮೃತ ಶೋಭ ತನ್ನ ಇಬ್ಬರು ಮಕ್ಕಳಾದ ವರ್ಷ ಹಾಗೂ ಚೇತನ್ ಅವರೊಂದಿಗೆ ದನ ಮೇಯಿಸಲು ಹೋಗಿದ್ದು, ಈ ವೇಳೆ ಕೆರೆ ದಾಟುವಾಗ ಅವಘಡ ಸಂಭವಿಸಿದೆ. ಮೊದಲು ಮಗಳು ವರ್ಷ ಕೆರೆ ನೀರಿನಲ್ಲಿ ಸಿಲುಕಿಕೊಂಡಿದ್ದಾಳೆ. ಈ ವೇಳೆ ತಾಯಿ ಶೋಭ ಮಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ದುರಾದೃಷ್ಟವಶಾತ್ ತಾಯಿ ಮಗಳು ಇಬ್ಬರೂ ಕರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ವೇಳೆ ಜೊಗೆಗಿದ್ದ ಮಗ ಚೇತನ್ ಅಪಾಯದಿಂದ ಪಾರಾಗಿದ್ದಾನೆ. ಕೆರೆಯಲ್ಲಿ ನೀರು ಹೆಚ್ಚಿದ್ದ ಭಾಗದಲ್ಲೇ ಮಗಳು ಸಿಲುಕಿಕೊಂಡಿದ್ದು, ಮಗಳನ್ನು ರಕ್ಷಣೆ ಮಾಡಲು ಹೋಗಿ ತಾಯಿಯೂ ನೀರಿನಲ್ಲಿ ಸಿಲುಕಿಕೊಂಡಿದ್ದರಿಂದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಗೆ ವಿರೋಧ: ಪ್ರೇಮಿಗಳು ಸಾವಿಗೆ ಶರಣು
ತಮ್ಮ ಪ್ರೀತಿಗೆ ಹೆತ್ತವರು ವಿರೋಧ ವ್ಯಕ್ತಪಡಿಸಿರುವುದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಲ್ದೂರು ಹೋಬಳಿ ವ್ಯಾಪ್ತಿಯ ಕಲ್ಲುಗುಡ್ಡೆಯ ದೇವಗಿರಿ ಎಸ್ಟೇಟ್ನಲ್ಲಿ ಕೂಲಿ ಕಾರ್ಮಿಕನಾಗಿದ್ದ ದರ್ಶನ್(21) ಮತ್ತು ಸಕಲೇಶಪುರ ತಾಲೂಕಿನ ಹಾನುಬಾಳು ನಿವಾಸಿ ಪೂರ್ವಿಕಾ (19) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮಂಗಳೂರಿನ ಮೀನು ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಪೂರ್ವಿಕಾ ಹಾಗೂ ದೇವಗಿರಿ ಎಸ್ಟೇಟ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದರ್ಶನ್ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಎರಡು ಮನೆಗಳಲ್ಲಿ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.
ತಮ್ಮ ಪ್ರೇಮ ವಿವಾಹಕ್ಕೆ ಮನೆಯಲ್ಲಿ ಒಪ್ಪದ ಕಾರಣ ಮನನೊಂದ ದರ್ಶನ್ ಮತ್ತು ಪೂರ್ವಿಕ ಮಂಗಳವಾರ ಸಂಜೆ ಆಲ್ದೂರು ಹೋಬಳಿಯ ಗಲ್ಲನ್ ಪೇಟೆ ಸಮೀಪದಲ್ಲಿರುವ ಸತ್ತಿಹಳ್ಳಿಯ ಜಯಪ್ಪ ಎಂಬುವರ ಪಾಳುಬಿದ್ದ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮಿಗಳ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications