ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್; ಸಂಜೆ 7ರ ನಂತರ ವಾಹನ ಸಂಚಾರಕ್ಕೆ ನಿರ್ಬಂಧ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 9: ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಸಂಜೆ 7ರಿಂದ ಬೆಳಿಗ್ಗೆ 7 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ಹೊರಡಿಸಿದ್ದಾರೆ.

Recommended Video

Facebook , Instagram , tinder ಸೇರಿದಂತೆ ಬಾರತೀಯ ಸೇನೆಯು 89 ಆ್ಯಪ್‌ಗಳನ್ನು ನಿಷೇಧಿಸಿದೆ.| Oneindia Kannada

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಳೆಯಿಂದ ಅಪಾಯ ಎದುರಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಚಾರ್ಮಾಡಿ ಘಾಟ್ ಮಧ್ಯೆ ವಾಹನ ನಿಲ್ಲಿಸಿದರೆ ಕೇಸ್ಚಾರ್ಮಾಡಿ ಘಾಟ್ ಮಧ್ಯೆ ವಾಹನ ನಿಲ್ಲಿಸಿದರೆ ಕೇಸ್

Restriction On Vehicles After 7pm In Charmadi Ghat

ಪ್ರತಿ ಮಳೆಗಾಲದಲ್ಲೂ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗುತ್ತದೆ. ಮರ, ಕಂಬಗಳು ಜೋರು ಮಳೆಯಿಂದಾಗಿ ನೆಲಕ್ಕುರುಳುವ ಸಂಗತಿಗಳೂ ಜರುಗುತ್ತವೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ಇಂದಿನಿಂದ ಸಂಜೆ ಏಳು ಗಂಟೆ ನಂತರ ಯಾವುದೇ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿರುವುದಾಗಿ ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶದಲ್ಲಿ ತಿಳಿಸಿದ್ದಾರೆ.

English summary
Chikkamagaluru DC Gautam Bagadi has issued an order to the restriction on vehicle at Charmadi Ghat from 7pm to 7am,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X