ಮಲೆನಾಡು ಭಾಗದಲ್ಲಿ ಆನ್ಲೈನ್ ಕ್ಲಾಸ್ ಬೇಡ, ಶಾಲೆ ತೆರೆಯುವಂತೆ ಒತ್ತಾಯ
ಚಿಕ್ಕಮಗಳೂರು, ಜೂನ್ 24: "ಮಲೆನಾಡು ಭಾಗದಲ್ಲಿ ಆನ್ಲೈನ್ ಕ್ಲಾಸ್ ನಡೆಸುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದ್ದು, ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆನ್ಲೈನ್ ಕ್ಲಾಸ್ ರದ್ದುಮಾಡಿ ಶಾಲೆಗಳನ್ನು ತೆರೆಯಲಿ,'' ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ಕುಮಾರಸ್ವಾಮಿ, "ಮೊಬೈಲ್ ಇಲ್ಲದೆ ಕೂಲಿ ಕಾರ್ಮಿಕರ, ಬಡವರ್ಗದ ಶೇ.50ರಷ್ಟು ಮಕ್ಕಳು ಬೌದ್ಧಿಕವಾಗಿ ದಿವಾಳಿಯಾಗುತ್ತಿದ್ದಾರೆ. ಅವರಿಗೆ ಆಟ- ಪಾಠ ಇಲ್ಲವಾಗಿದೆ. ಬೇರೆ ದಾರಿ ಏನು ಎಂಬುದೇ ಪೋಷಕರಿಗೆ ತಿಳಿಯದೆ ಕಂಗಾಲಾಗಿದ್ದಾರೆ,'' ಎಂದು ಹೇಳಿದರು.

"ಸ್ಥಿತಿವಂತರು ಮಾತ್ರವೇ ಮಕ್ಕಳಿಗೆ ಮೊಬೈಲ್ ತೆಗೆದುಕೊಡಬಹುದು. ಆನ್ಲೈನ್ ತರಗತಿಗಳಿಗೆ ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಿಗದೆ ಮರದ ಮೇಲೆ ಹತ್ತಿ ಕುಳಿತುಕೊಳ್ಳುವುದು, ಗುಡ್ಡಕ್ಕೆ ಹೋಗುವುದು, ಮಳೆಯಲ್ಲಿ ಪೋಷಕರು ಛತ್ರಿ ಹಿಡಿಯುವುದು, ಮಗ ಓದೋದು ಹೀಗೆಲ್ಲಾ ಕಷ್ಟಪಟ್ಟು ನರಕಯಾತನೆ ಅನುಭವಿಸುತ್ತಿದ್ದಾರೆ. ಬಡವರ್ಗದವರಿಗೆ ಶಿಕ್ಷಣ ಎಲ್ಲಿ ದೂರವಾಗುತ್ತದೋ ಎಂಬ ಆತಂಕ ಎದುರಾಗಿದೆ,'' ಎಂದರು.
"ಕೊರೊನಾ ಸೋಂಕಿನಿಂದ ಮಲೆನಾಡಿಗೆ ಭಾರೀ ಆಪತ್ತೇನೂ ಬಂದಿಲ್ಲ. ಪೋಷಕರು ಆತಂಕದಿಂದ ಹೊರಬರಬೇಕು. ಸರ್ಕಾರ ಕೂಡಲೇ ಶಾಲೆಯನ್ನು ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರನ್ನು ಒತ್ತಾಯಿಸುವುದಾಗಿ,'' ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications