ಮಾಜಿ ಸಚಿವೆ ಮೋಟಮ್ಮ ವಿರುದ್ಧ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು: ಹೆಚ್ಚಿದ ಭಹಿರಂಗ ಸಭೆ
ಚಿಕ್ಕಮಗಳೂರು, ಜನವರಿ 14: ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಮೂಡಿಗೆರೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ಧ ತಿರುಗಿ ಬಿದ್ದಿರುವ ಕಾಂಗ್ರೆಸ್ ಕಾರ್ಯಕರ್ತರು ಮೋಟಮ್ಮ ಮಗಳಿಗೆ ಟಿಕೆಟ್ ಕೊಡಲೇಬೇಡಿ, ಕೊಟ್ಟರೆ ಸೋಲು ಕಟ್ಟಿಟ್ಟಬುತ್ತಿ ಎಂದು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.
ವಿಧಾನಸಭಾ ಚುನಾವಣಾ ಕಣ ಕ್ರಮೇಣ ರಂಗೇರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಸಮಾಧಾನದ ಹೊಗೆಯೂ ಸ್ಫೋಟಗೊಳ್ಳುತ್ತಿದೆ. ಕಾರ್ಯಕರ್ತರೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದು ಅವರಿಗೆ ಟಿಕೆಟ್ ಕೊಡಲೇ ಬೇಡಿ, ಕೊಟ್ಟರೆ ಸೋಲು ಖಚಿತ ಎಂದು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.
ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಮೂಡಿಗೆರೆ ತಾಲೂಕಿನಲ್ಲಿ ನಡೆದ ಐದಾರು ಹೋಬಳಿಗಳ ಕಾರ್ಯಕರ್ತರ ಸಭೆಯಲ್ಲಿ ಒಂದೇ ಧ್ವನಿ ಮೋಟಮ್ಮ ಪುತ್ರಿ ನಯನ ಮೋಟಮ್ಮಳಿಗೆ ಟಿಕೆಟ್ ಬೇಡ ಎನ್ನುವುದು. ಗುರುವಾರ ಗೋಣಿಬೀಡು ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲೂ ಮೋಟಮ್ಮ ವಿರುದ್ಧ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಅವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲುತ್ತದೆ ಎಂದು ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಮೂಡಿಗೆರೆಯಲ್ಲಿ ಕಾಂಗ್ರೆಟ್ ಟಿಕೆಟ್ ಆಕಾಂಕ್ಷಿಗಳ ಭರ್ಜರಿ ಲಾಬಿ ನಡೆಯುತ್ತಿದೆ. ನಾಗರತ್ನ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ನಿವೃತ್ತಿಯಾಗಿರುವ ಶ್ರೀರಂಗಯ್ಯ ಕೂಡ ಮೀಸಲು ಕ್ಷೇತ್ರದ ಕಾಂಗ್ರೆಸ್ಗೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಜೊತೆಗೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಕೂಡ. ಆದರೆ, ಮೋಟಮ್ಮ ವಿರುದ್ಧ ತಿರುಗಿ ಬಿದ್ದಿರೋ ಕಾಂಗ್ರೆಸ್ ಕಾರ್ಯಕರ್ತರು ಅವರ ಮಗಳಿಗೆ ಟಿಕೆಟ್ ನೀಡಬೇಡಿ ಎಂದು ಪಕ್ಷದ ಮುಖಂಡರಿಗೆ ಮನವಿ ಮಾಡಿದ್ದು, ಪಕ್ಷದ ವರಿಷ್ಠರನ್ನೂ ಭೇಟಿ ಮಾಡೋದಕ್ಕೆ ತೀರ್ಮಾನಿಸಿದ್ದಾರೆ. ಹೋಬಳಿಯ ಕಾಂಗ್ರೆಸ್ ಸಭೆಯಲ್ಲಿ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸುತ್ತಿರುವ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭಾಗಿಯಾಗದ್ದರು.

ಎಲ್ಲರೂ ಕೂಡ ಮೋಟಮ್ಮ ಮಗಳಿಗೆ ಟಿಕೆಟ್ ನೀಡೋದಕ್ಕೆ ವಿರುದ್ಧವಾಗಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮ ಕುಟುಂಬ ರಾಜಕಾರಣ ಕೊನೆಯಾಗಬೇಕು, ಹೊಸ ಮುಖಕ್ಕೆ ಟಿಕೆಟ್ ನೀಡಿ ಎಂದು ಆಗ್ರಹಿಸಿದ್ದಾರೆ. ಮೋಟಮ್ಮ ವಿಧಾನ ಪರಿಷತ್ ಚುನಾವಣೆಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಕೆಲಸ ಮಾಡಿದ್ದರು. ಇಡೀ ಕ್ಷೇತ್ರ ಮೋಟಮ್ಮ ಕುಟುಂಬದ ವಿರುದ್ಧವಿದೆ. ಹಾಗಾಗಿ, ಅವರಿಗೆ ಟಿಕೆಟ್ ನೀಡಿದರೆ ಸೋಲು ಖಚಿತ. ಅವರಿಗೆ ಟಿಕೆಟ್ ಬೇಡವೇ ಬೇಡ ಎಂದು ಆಗ್ರಸಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications