ಮೂಡಿಗೆರೆ: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಗೆ ಧರ್ಮದೇಟು
ಮೂಡಿಗೆರೆ ತಾಲೂಕಿನ ಮುದ್ರೆಮುನೆ ಎಸ್ಟೇಟ್ ಬಳಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಗೆ ಭಜರಂಗದಳ ಕಾರ್ಯಕರ್ತರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ್ದಾರೆ. ಮುಂದೆನಾಯ್ತು ಎನ್ನುವ ಮಾಹಿತಿ ಇಲ್ಲಿದೆ ನೋಡಿ.
ಚಿಕ್ಕಮಗಳೂರು, ಜನವರಿ, 30: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಭಜರಂಗದಳ ಕಾರ್ಯಕರ್ತರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮುನೆ ಎಸ್ಟೇಟ್ ಬಳಿ ನಡೆದಿದೆ.
ಮೂಡಿಗೆರೆ ತಾಲೂಕಿನ ಕಾಫಿ ತೋಟಗಳಿಗೆ ಕೂಲಿಯನ್ನರಸಿ ಬಂದಿರುವ ಅಸ್ಸಾಂ ಮೂಲದ ವ್ಯಕ್ತಿ ಸಿಮೆಂಟ್ ಚೀಲದಲ್ಲಿ ಗೋಮಾಂಸವನ್ನು ತುಂಬಿಕೊಂಡು ಬೈಕಿನಲ್ಲಿ ಮಾರಾಟಕ್ಕೆ ಕೊಂಡೊಯುತ್ತಿದ್ದ. ವಿಷಯ ತಿಳಿದ ಭಜರಂಗದಳ ಕಾರ್ಯಕರ್ತರು ಅಸ್ಸಾಂ ಮೂಲದ ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾರೆ. ಆಗ ಚೀಲವನ್ನು ನೋಡಿದಾಗ ಗೋಮಾಂಸ ಇರುವುದು ಗೊತ್ತಾಗಿದೆ. ಕೂಡಲೇ ಆತನನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಗೋಣಿಬೀಡು ಪಿಎಸ್ಐ ಆತನನ್ನು ವಶಕ್ಕೆ ಪಡೆದಿದ್ದಾರೆ.
ಭಜರಂಗದಳ ಕಾರ್ಯಕರ್ತರ ಆರೋಪವೇನು?
ಇನ್ನು ಇತ್ತೀಚೆಗಷ್ಟೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಡಬಗೆರೆ ಬಳಿಯೂ ಅಸ್ಸಾಂ ಮೂಲದ ಕಾರ್ಮಿಕರು ಚೀಲದಲ್ಲಿ ಗೋಮಾಂಸ ತುಂಬಿಕೊಂಡು ಮಾರಾಟಕ್ಕೆ ಯತ್ನಿಸುವಾಗ ಸಿಕ್ಕಿಬಿದ್ದಿದ್ದರು. ಜಿಲ್ಲೆಯಲ್ಲಿ ಹಿಂದೆ ಈ ರೀತಿಯ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ, ಭಜರಂಗದಳ ಕಾರ್ಯಕರ್ತರು ಇವರು ಅಸ್ಸಾಂನವರು ಅಲ್ಲ. ಅಕ್ರಮ ಬಾಂಗ್ಲಾ ವಸಲಿಗರು ಎಂದು ಆರೋಪಿಸುತ್ತಿದ್ದಾರೆ.

ಕಲುಷಿತಗೊಂಡ ಹೇಮಾವತಿ ನದಿ ನೀರು
ಹೇಮಾವತಿ ಉಗಮ ಸ್ಥಾನದಲ್ಲೇ ನದಿ ನೀರು ಸಂಪೂರ್ಣ ಕಲುಷಿತಗೊಳ್ಳುತ್ತಿದ್ದು, ಇದರಿಂದ ಜನಸಾಮಾನ್ಯರು, ಜಲಚರಗಳು, ಬೆಳೆಗಳ ಮೇಲೂ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪವಿರುವ ಹೇಮಾವತಿ ನದಿ ನೀರು ಕಾಫಿ ಬೆಳೆಗಾರರಿಂದ ಕಲುಷಿತಗೊಳ್ಳುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ
ಮೂಡಿಗೆರೆ-ಸಕಲೇಶಪುರ ಭಾಗದ ಕಾಫಿ ಬೆಳೆಗಾರರು ಕಾಫಿಯನ್ನು ಪಲ್ಪರಿಂಗ್ ಮಾಡುತ್ತಾರೆ, ನಂತರ ಪಲ್ಪರಿಂಗ್ನ ಕಲುಷಿತ ನೀರನ್ನು ಹೇಮಾವತಿ ನದಿಗೆ ಬಿಡುತ್ತಿದ್ದಾರೆ. ಮಳೆಗಾಲದಲ್ಲಿ ಮಣ್ಣು ಮಿಶ್ರಿತ ಕೆಂಪು ನೀರು ಹೋದರೆ, ಬೇಸಿಗೆಯಲ್ಲಿ ನೀರಿಗೆ ಬಣ್ಣವಿಲ್ಲದಿದ್ದರೂ ಶುಭ್ರವಾಗಿ ಹರಿಯುತ್ತಾಳೆ. ಆದರೆ, ಕಾಫಿತೋಟದ ಮಾಲೀಕರು ಕಾಫಿ ಪಲ್ಪರಿಂಗ್ ನೀರನ್ನು ನೇರವಾಗಿ ಹೇಮಾವತಿ ನದಿಗೆ ಬಿಡುತ್ತಿದ್ದಾರೆ. ಇದರಿಂದ ಸ್ವಚ್ಛವಾಗಿ ಹರಿಯುವ ಹೇಮಾವತಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಅಧಿಕಾರಿಗಳು ಇತ್ತ ಗಮನಹರಿಸಿ ಕಾಫಿ ಪಲ್ಪರ್ ಮಾಡಿದ ನೀರನ್ನು ಇಂಗು ಗುಂಡಿ ಮೂಲಕ ಇಂಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications