ಚಿಕ್ಕಮಗಳೂರು; ಕಣ್ಮನ ಸೆಳೆಯುತ್ತಿರುವ ನೀಲಿ ಕುರುವಂಜಿ
ಚಿಕ್ಕಮಗಳೂರು, ಸೆಪ್ಟೆಂಬರ್ 16; ಹೂ ಚೆಲುವೆಲ್ಲಾ ನಂದೆಂದಿತು ಅನ್ನೋ ಮಾತು ಅಕ್ಷರಶಃ ಸತ್ಯ. ಜಗತ್ತಿನ ಸೌಂದರ್ಯವನ್ನೆಲ್ಲಾ ತನ್ನಲ್ಲೆ ಹುದುಗಿಸಿಕೊಂಡಿರೋ ಪ್ರಕೃತಿಯ ಸಿರಿತನದೆದುರ ಉಳಿದದ್ದೆಲ್ಲಾ ನಶ್ವರವೇ ಸರಿ.
ಕಾಫಿನಾಡಲ್ಲಿ ಅರಳಿ ನಿಂತಿರೋ ಅಪರೂಪದ ಹೂವೊಂದು ಇಲ್ಲಿನ ಪ್ರಕೃತಿ ಸೌಂದರ್ಯದ ಶ್ರೀಮಂತಿಕೆಯನ್ನು ಇಮ್ಮಡಿಗೊಳಿಸಿದೆ. 12 ವರ್ಷಗಳಿಗೊಮ್ಮೆ ಅರಳುವ ಈ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ.
ಕಣ್ಣು ಹಾಯಿಸಿದಲೆಲ್ಲಾ ಕಾಣೋ ಅಪರೂಪದ ನೀಲಿ ಕುರುವಂಜಿ ನೋಡುಗರ ಕಣ್ಮನ ಸೆಳೆಯೋದರ ಜೊತೆಗೆ ಪ್ರವಾಸಿಗರ ಕೈ ಬೀಸಿ ಕರೆಯುತ್ತಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಕಾಫಿನಾಡಿನ ಗಿರಿ-ಪರ್ವತ ಶ್ರೇಣಿಗಳ ಸಾಲು ನೀಲಿ ರೂಪ ಪಡೆದುಕೊಳ್ತಿವೆ. ಬೆಟ್ಟ-ಗುಡ್ಡಗಳೆಲ್ಲಾ ನೀಲಿಯಾಗಿ ಕಂಗೊಳಿಸೋ ಕಾಲ ಸನ್ನಿಹಿತವಾಗಿದೆ.

ರಸ್ತೆಯ ಇಕ್ಕೆಲಗಳಲ್ಲಿ ಅರಳಿ ನಿಂತಿರೋ ಈ ಕುರುವಂಜಿ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಪಶ್ಚಿಮಘಟ್ಟ ಅರಣ್ಯ ವ್ಯಾಪ್ತಿಯ ಸಾಲಿನಲ್ಲಿ ಮಾತ್ರ ಅರಳೋ ಈ ಹೂವು ಕಾಫಿನಾಡಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಅರಳಿ ನಿಂತಿದೆ. ಮುಳ್ಳಯ್ಯನಗಿರಿಗೆ ಹೋಗುವ ಮಾರ್ಗದ ಸೀತಾಳಯ್ಯನಗಿರಿ ಭಾಗದಲ್ಲಿ ಹುಲುಸಾಗಿ ಅರಳಿ ನಿಂತಿದೆ ಹೂ.
ಪ್ರವಾಸಿಗರು ಸೀತಾಳಯ್ಯನಗಿರಿಗೆ ಹೋಗುತ್ತಿದ್ದಂತೆ ಪ್ರವಾಸಿಗರನ್ನು ಸ್ವಾಗತಿಸೋದು ಈ ನೀಲಿ ಕುರುವಂಜಿ ಹೂ. ಪಶ್ವಿಮಘಟ್ಟ ಸಂರಕ್ಷಿತ ಪ್ರದೇಶವಾಗಿರೋದ್ರಿಂದ ಈ ಹೂವು ಇನ್ನೂ ಜೀವಂತವಾಗಿದ್ದು, ಪ್ರತಿ 12 ವರ್ಷಕೊಮ್ಮೆ ಕಾಫಿನಾಡನ್ನು ಭೂ ಲೋಕದ ಸ್ವರ್ಗವಾಗಿಸುತ್ತದೆ ಈ ನೀಲಿ ಹೂವು.
ಈ ಹೂವಿಗೆ ಧಾರ್ಮಿಕವಾಗಿಯೂ ಇತಿಹಾಸವಿದೆ. ಸುಬ್ರಹ್ಮಣ್ಯ ವೆಳ್ಳಿನ ಮದುವೆಯಾಗುವಾಗ ಈ ಹೂವಿನ ಮಾಲೆ ಹಾಕಿದ್ರಿಂದ ಈ ಗುರ್ಗಿಯನ್ನು ಪ್ರೇಮದ ಸಂಕೇತವಾಗಿ ಪ್ರೇಮದ ಹೂ ಅಂತಲು ಕರೆಯುತ್ತಾರೆ ಕೇರಳ, ತಮಿಳುನಾಡಿಗರು.

ಆದ್ದರಿಂದ ಈ ಹೂವು ಅರಳಿದ ಕೂಡಲೇ ಮೊದಲು ಸುಬ್ರಹ್ಮಣ್ಯನಿಗೆ ಅರ್ಪಿಸುತ್ತಾರೆ. ಮಳೆ, ಗಾಳಿ, ನೀರು, ಬೆಳಕು ಹಾಗೂ ಪ್ರಕೃತಿಯ ಸಮತೋಲನವಾಗಿದ್ದಾಗ ಮಾತ್ರ ಈ ಹೂ ಅರಳಲಿದೆ. ಗುರ್ಗಿ ಹೂವಿನಲ್ಲಿ ನಾನಾ ವಿಧಗಳಿದ್ದು, 5, 7, 12, 14 ವರ್ಷಗಳಿಗೆ ಅರಳೋ ಪ್ರಭೇದ ಹೂವುಗಳೂ ಇವೆ.
ಈ ಹೂವುಗಳು ಅರಳಿ ನಿಂತಾಗ ಇದರ ಕಾಂಡದಲ್ಲಿ ಔಷಧಿಯ ಗುಣಗಳು ಇರುವುದರಿಂದ ನಾನಾ ಖಾಯಿಲೆಗೂ ಬಳಸುತ್ತಾರೆ. ಸದ್ಯಕ್ಕೆ ಕಾಫಿನಾಡಿನ ಗಿರಿಶಿಖರಗಳಲ್ಲಿ ಅರಳಿ ನಿಂತಿರೋ, ಮತ್ತಷ್ಟು ಅರಳೋ ಸನಿಹದಲ್ಲಿದ್ದು ಬೆಟ್ಟಗುಡ್ಡಗಳ ಸೌಂದರ್ಯವನ್ನೆ ಬದಲಿಸಿ, ನೋಡುಗನ ಕಣ್ಮನದಲ್ಲಿ ಅಚ್ಚಳಿಯದೆ ಉಳಿದಿದೆ.
ಒಟ್ಟಾರೆ, ಪ್ರಕೃತಿಯ ಒಡಲಾಳದಲ್ಲಿ ಇನ್ನಷ್ಟು ಸೌಂದರ್ಯದ ರಾಶಿ ಮನೆ ಮಾಡಿದೆಯೋ ಬಲ್ಲವರು ಯಾರೂ ಇಲ್ಲ. ಕಾಫಿನಾಡಲ್ಲಿ ಒಂದೊಂದು ಕಾಲದಲ್ಲೂ ಒಂದೊಂದು ರೀತಿಯ ಸೌಂದರ್ಯ ಮನೆ ಮಾಡಿರುತ್ತೆ.
ಈವರೆಗೆ ಹಸಿರಿನಿಂದ ಕಂಗೊಳಿಸೋ ಬೆಟ್ಟಗುಡ್ಡಗಳನ್ನು ನೋಡಿದ್ದ ನಾವು-ನೀವು ಇನ್ಮುಂದೆ ನೀಲಿ ಬೆಟ್ಟಗಳನ್ನು ನೋಡಬೇಕು ಅಂದರೆ ಕಾಫಿನಾಡಿಗೆ ಬರಲೇಬೇಕು. ತಿಂಗಳ ಕಾಲ ಅರಳಿ ನಿಲ್ಲೋ ಈ ಹೂವಿನಿಂದ ಇಲ್ಲಿನ ಸೌಂದರ್ಯಕ್ಕೆ ಸರಿಸಾಟಿ ಮತ್ತೊಂದಿಲ್ಲ ಅನ್ನೋದಂತು ಸತ್ಯ.
ಕೊಡಗು ಜಿಲ್ಲೆಯಲ್ಲಿಯೂ ಇದೆ; ನೀಲಿ ಕುರುಂಜಿ ಹೂ ಚಿಕ್ಕಮಗಳೂರು ಮಾತ್ರವಲ್ಲ ಕೊಡಗು ಜಿಲ್ಲೆಯ ಬೆಟ್ಟದ ಮೇಲೆಯೂ ತನ್ನ ಚಿತ್ತಾರ ಮೂಡಿಸುತ್ತದೆ. ಮಡಿಕೇರಿ ಬಳಿಯಿರುವ ಮಾಂದಾಲಪಟ್ಟಿಗೆ ತೆರಳಿದವರಿಗೆ ಕೋಟೆ ಬೆಟ್ಟದ ಚೆಲುವು ಕಣ್ಣಿಗೆ ಕಟ್ಟಿರುತ್ತದೆ. ಮಾಂದಾಲಪಟ್ಟಿಯಿಂದ ನಿಂತು ನೋಡಿದರೆ ಬೆಟ್ಟಶ್ರೇಣಿಗಳು ಕಾಣಿಸುತ್ತವೆ. ಅದರಲ್ಲಿ ಎತ್ತರದ ಬೆಟ್ಟವೇ ಕೋಟೆ ಬೆಟ್ಟವಾಗಿದ್ದು, ಬೆಟ್ಟವನ್ನು ಕುರುಂಜಿಗಿಡಗಳು ಆವರಿಸಿದ್ದು ಅವು ಸುಮಾರು ಹನ್ನೆರಡು ವರ್ಷಗಳ ಬಳಿಕ ಆಗಸ್ಟ್ ತಿಂಗಳಿನಲ್ಲಿ ಈ ಬೆಟ್ಟದಲ್ಲಿ ಹೂ ಬಿಟ್ಟಿರುವುದು ಇಡೀ ಬೆಟ್ಟ ನೀಲಿಯಾಗಿ ಕಂಗೊಳಿಸುತ್ತಿತ್ತು.
ಕುರುಂಜಿ ಗಿಡಗಳು ಕೊಡಗಿನಾದ್ಯಂತ ಬೆಳೆಯುತ್ತವೆ. ಇದರಲ್ಲಿ ಪ್ರತ್ಯೇಕ ತಳಿಗಳಿವೆ. ಬೆಟ್ಟಗಳಲ್ಲಿ ಬೆಳೆಯುವ ಗಿಡಗಳು ದಷ್ಠಪುಷ್ಠವಾಗಿರುತ್ತವೆ. ತೋಟಗಳಲ್ಲಿಯೂ ಅದರಲ್ಲೂ ಮಳೆ ಹೆಚ್ಚು ಬೀಳುವ ಪ್ರದೇಶಗಳಲ್ಲಿನ ಕಾಫಿ ಏಲಕ್ಕಿ ತೋಟಗಳಲ್ಲಿಯೂ ಇವು ಹುಲುಸಾಗಿ ಬೆಳೆಯುತ್ತವೆ. ಏಲಕ್ಕಿ ತೋಟಕ್ಕೆ ಇವು ಸಹಕಾರಿಯಾಗಿದ್ದು, ಮಣ್ಣಿನ ಫಲವತ್ತತೆ ಹೆಚ್ಚಿಸುವಲ್ಲಿಯೂ ಪಾತ್ರ ವಹಿಸುತ್ತವೆ ಎನ್ನುತ್ತಾರೆ ರೈತರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications