Chikkamagaluru: ಬಡವರ ಕಾಫಿ ತೋಟ ಮಾತ್ರ ತೆರವು: ಚಿಕ್ಕಮಗಳೂರಿನಲ್ಲಿ ಕಣ್ಣೀರಿಟ್ಟ ಕುಟುಂಬ
ಚಿಕ್ಕಮಗಳೂರು ಸೆಪ್ಟೆಂಬರ್ 15: ಪ್ರಭಾವಿಗಳ ಒತ್ತುವರಿಯನ್ನು ಕಡೆಗಣಿಸಿ ಬಡವರ ತೋಟವನ್ನು ತೆರವು ಮಾಡಿದ ಆರೋಪ ಚಿಕ್ಕಮಗಳೂರಿನಲ್ಲಿ ಕೇಳಿ ಬಂದಿದೆ. ಚಿಕ್ಕಮಗಳೂರಿನ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಭಾವಿಗಳ ಒತ್ತುವರಿಯನ್ನು ಕಣ್ಣೆತ್ತಿಯೂ ನೋಡದೆ, ಬಡವರ ತೋಟವನ್ನು ಮಾತ್ರ ಮಾಹಿತಿ ನೀಡದೆಯೇ ಏಕಾಏಕಿ ತೆರವು ಮಾಡಿದ್ದಾರೆಂದು ಕುಟುಂಬವೊಂದು ಕಣ್ಣೀರು ಇಟ್ಟಿದೆ.
ಚಿಕ್ಕಮಗಳೂರಿನಲ್ಲಿ ಅರಣ್ಯ ಇಲಾಖೆಯ ದಬ್ಬಾಳಿಕೆಗೆ ಕಳಸ ತಾಲೂಕಿನ ಮಾವಿನಕೆರೆ, ಕೊಂಡದ ಮನೆ ಗ್ರಾಮದ ಕುಟುಂಬವೊಂದು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದೆ. ಗ್ರಾಮದ ರವೀಂದ್ರ ಎಂಬುವರಿಗೆ ಸೇರಿದ ಕಾಫಿ ತೋಟವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ತೋಟದಲ್ಲಿ ನಾಲ್ಕು ವರ್ಷದಿಂದ ಕಾಫಿ ಗಿಡ, ಮೆಣಸು ಬೆಳೆಯಲಾಗಿತ್ತು. ಅರಣ್ಯ ಸಿಬ್ಬಂದಿಗಳು ಏಕಾಏಕಿ ಎರಡು ಎಕರೆಗೂ ಹೆಚ್ಚು ಕಾಫಿ ತೋಟವನ್ನು ಕಡೆದು ಹಾಕಿದ್ದಾರೆ. ಯಾವುದೇ ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಚರಣೆ ನಡೆದಿದೆ ಎಂದು ರವೀಂದ್ರ ಆರೋಪ ಮಾಡಿದ್ದಾರೆ. ಸೂಕ್ತ ದಾಖಲೆಗಳಿದ್ದರೂ ಅರಣ್ಯ ಇಲಾಖೆ ಗದ ಪ್ರಹಾರ ಮಾಡಿದೆ.
ತೋಟ ಕಳೆದುಕೊಂಡ ಮಹಿಳೆ ಕಣ್ಣೀರು ಹಾಕಿದ್ದಾರೆ. ರಾಜಕಾರಣಿಗಳು, ಪ್ರಭಾವಿಗಳಿಗೆ ನೋಟಿಸ್ ನೀಡಿದರು ಆಗದ ತೆರುವು ಕಾರ್ಯ, ಸಣ್ಣ ಪ್ರಮಾಣದ ರೈತರ ಮೇಲೆ ಯಾಕೆ? ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಯಾಕೆ ಎಂದು ಮಹಿಳೆ ಅರಣ್ಯ ಇಲಾಖೆ ದಬ್ಬಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಭಾವಿಗಳ ಒತ್ತುವರಿಯನ್ನು ಕಣ್ಣೆತ್ತಿಯೂ ನೋಡದ ಅಧಿಕಾರಿಗಳು, ಬಡವರಿಗೆ ಮಾಹಿತಿ ನೀಡದೆಯೇ ಏಕಾಏಕಿ ತೆರವು ಮಾಡಿ ದಬ್ಬಾಳಿಕೆ ಮಾಡಿದ್ದಾರೆ. ರೈತರ ತೀರ್ವ ಹೋರಾಟದ ನಡುವೆಯೂ ಬೆಳೆ ನಾಶ ಮಾಡಲಾಗಿದೆ. ತೋಟದಲ್ಲಿದ್ದ ನಾಲ್ಕು ವರ್ಷದ ಕಾಫಿ ಗಿಡ, ಮೆಣಸು ನಾಶವಾಗಿದೆ. ತೋಟ ಕಳೆದುಕೊಂಡ ಕುಟುಂಬ ಬದುಕಿಗೆ ದಾರಿ ಕಾಣದೆ ಕಂಗಾಲಾಗಿದೆ.

ಹಾಸನ: ಕಾಡಾನೆ ಹಾವಳಿ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಬೆಳ್ಳಂಬೆಳಿಗ್ಗೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮಕ್ಕೆ ಒಂಟಿಸಲಗ ಎಂಟ್ರಿಕೊಟ್ಟಿದ್ದು ಗ್ರಾಮಸ್ಥರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಮಾತ್ರವಲ್ಲದೆ ಒಂಟಿಸಲಗ ಕಂಡು ಕಟ್ಟಿದ್ದ ಜಾನುವಾರುಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ ಸಮೀಪವೇ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಆತಂಕದಲ್ಲೇ ಜನ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ ದೌಡಾಯಿಸಿ ಎಚ್ಚರಿಕೆಯಿಂದ ಗ್ರಾಮಸ್ಥರು ಓಡಾಡುವಂತೆ ಸೂಚನೆ ನಿಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications