ತಿರುಪತಿ, ಕಾಶಿ ರೀತಿ ದತ್ತಪೀಠ ಧಾರ್ಮಿಕ ಸ್ಥಳವಾಗಬೇಕು: ಆರ್. ಅಶೋಕ್ ಒತ್ತಾಯ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ ಮನೆ ಮಾಡಿದ್ದು ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಆರ್.ಅಶೋಕ್ ದತ್ತಮಾಲೆ ಹಾಕಿದ್ದಾರೆ. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಲೆ ಧರಿಸಿದ್ದಾರೆ.
ಸೋಮವಾರ ಮಾಲಾಧಾರಿಯಾಗಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಸಾವಿರಾರು ಜನರ ಬೃಹತ್ ಶೋಭಾಯಾತ್ರೆಯಲ್ಲೂ ಭಾಗಿಯಾಗಲಿದ್ದಾರೆ. ದತ್ತಮಾಲೆ ಧರಿಸುವ ಸಂದರ್ಭದಲ್ಲಿ ಉಡುಪಿಯ ಪ್ರಮೋದ್ ಮಧ್ವರಾಜ್, ಬಜರಂಗದಳ, ವಿ.ಎಚ್.ಪಿ. ಬಿಜೆಪಿ ಮುಖಂಡರು ಜೊತೆಯಾಗಿದ್ದರು. ಸೋಮವಾರ ಸಾವಿರಾರು ಜನರ ಜೊತೆ ಆರ್.ಅಶೋಕ್ ದತ್ತ ಪೀಠಕ್ಕೆ ತೆರಳಲಿದ್ದಾರೆ.

ತಿರುಪತಿ, ಕಾಶಿ ರೀತಿ ಅಭಿವೃದ್ಧಿಯಾಗಬೇಕು
ದತ್ತಮಾಲಾಧಾರಣೆ ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಇದೇ ಮೊದಲ ಬಾರಿಗೆ ದತ್ತಮಾಲೆ ಸ್ವೀಕಾರ ಮಾಡಿದ್ದೇನೆ. ಈ ಹಿಂದೆ ಕಂದಾಯ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ ಎಂದು ಸಂತಸ ವ್ಯಕ್ತಪಡಿಸಿದರು.
ಒಬ್ಬ ಕಂದಾಯ ಸಚಿವನಾಗಿ ನನಗೆ ಕಂಡಿದ್ದು ದತ್ತಪೀಠ ಹಿಂದೂಪೀಠವಾಗಿದೆ, ಹಿಂದೂಗಳ ದತ್ತಪೀಠವನ್ನು ಅತಿ ಕ್ರಮಣ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅರ್ಚಕರ ನೇಮಕ ಮಾಡಿದ್ದೇವೆ, ಸೋಮವಾರ ನಡೆಯುವ ಹೋಮದಲ್ಲಿ ನಾನು ಭಾಗಿಯಾಗುತ್ತೇವೆ ಎಂದು ಹೇಳಿದರು.
ಬಿಜೆಪಿಯ ಕೆಲ ಶಾಸಕರು ದತ್ತಜಯಂತಿಯಲ್ಲಿ ಭಾಗಿಯಾಗುತ್ತಾರೆ ಎಂದ ಅಶೋಕ, ದತ್ತಪೀಠ ತಿರುಪತಿ, ಕಾಶಿ ರೀತಿ ಧಾರ್ಮಿಕ ಸ್ಥಳವಾಗಬೇಕು ಎಂದು ಒತ್ತಾಯಿಸಿದ್ದಾರೆ. ಅದೇ ರೀತಿ ಇಲ್ಲಿ ಕೂಡ ಅಭಿವೃದ್ಧಿಯಾಗಲಿ ಎಂದು ಹೇಳಿದರು.
ಹಿಂದೂಗಳ ಶ್ರದ್ಧಾ ಪವಿತ್ರ ದತ್ತಪೀಠ ಭಾವನೆಯನ್ನು ಮಟ್ಟ ಹಾಕುವ ಕೆಲಸವನ್ನು ಮಾಡುತ್ತಿದ್ದಾರೆ. ದತ್ತಪೀಠ ಬೇರೆ ದರ್ಗಾ ಬೇರೆ ಎನ್ನುವುದಕ್ಕೆ ದಾಖಲೆಗಳಿವೆ. ದತ್ತಪೀಠಕ್ಕಾಗಿ ನಿರಂತರವಾಗಿ ಸಾವಿರಾರು ಕಾರ್ಯಕರ್ತರು ಹೋರಾಟ ಮಾಡುತ್ತಿದ್ದಾರೆ. ದತ್ತಪೀಠ ಹಿಂದೂ ಪೀಠವಾಗಿಯೇ ಉಳಿಯಬೇಕು. ದತ್ತಪೀಠದ ಗೌರವ-ಘನತೆ ಎತ್ತಿ ಹಿಡಿಯುವ ಕೆಲಸವನ್ನ ಈ ರಾಜ್ಯ ಸರ್ಕಾರವು ಮಾಡಬೇಕು ಎಂದು ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದರು.
ಚಿಕ್ಕಮಗಳೂರಿನಲ್ಲಿ ಹೆಚ್ಚಾದ ಸಂಭ್ರಮ
ದತ್ತಜಯಂತಿ ಅಂಗವಾಗಿ ಭಾನುವಾರ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಸಂಕಿರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಂಕೀರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ.ರವಿ ಭಾಗಿಯಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸೋಮವಾರ ಕೂಡ ನಗರದಲ್ಲಿ ಸಾವಿರಾರು ಮಂದಿ ದತ್ತಪೀಠಕ್ಕೆ ಶೋಭಾಯಾತ್ರೆ ನಡೆಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications