ಕಾಶೀಹಾರ ಚುನಾವಣೆ ತನಕ ನಿಮ್ಮ ಕೊರಳಲ್ಲೇ ಇರಲಿ: ಸಿದ್ದರಾಮಯ್ಯಗೆ ಶ್ರೀಗಳ 'ಶ್ರೀರಕ್ಷೆ'
ಚಿಕ್ಕಮಗಳೂರು, ಆಗಸ್ಟ್ 19: ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿರುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಾಳೆಹೊನ್ನೂರಿನಲ್ಲಿರುವ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾ ಸಂಸ್ಥಾನ ಪೀಠಕ್ಕೆ ಭೇಟಿ ನೀಡಿದ್ದಾರೆ.
ಇದೇ ಮೊದಲ ಬಾರಿಗೆ ಮಠಕ್ಕೆ ಆಗಮಿಸಿದ ವಿರೋಧ ಪಕ್ಷದ ನಾಯಕನನ್ನು ಮಠದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಬರುತ್ತೇನೆ..ಬರುತ್ತೇನೆ ಎಂದು ಈಗ ಬಂದಿದ್ದೀರಿ ಎಂದು ಶ್ರೀ ಪ್ರಸನ್ನ ರೇಣುಕಾವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನಗುತ್ತಲೇ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದಾರೆ.
ಹಾರಶಾಲು ಹಾಕಿ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ ರಂಭಾಪುರಿ ಶ್ರೀಗಳು, "ವಿಶ್ವನಾಥನ ಸನ್ನಿಧಿ ಕಾಶಿಯಿಂದ ತಂದ ಹಾರವಿದು, ಮುಂದಿನ ಚುನಾವಣೆಯ ವರೆಗೆ ನಿಮ್ಮ ಕೊರಳಲ್ಲೇ ಇದ್ದರೆ ಒಳ್ಳೆಯದು" ಎಂದು ಕಾಶಿಹಾರವನ್ನು ಸಿದ್ದರಾಮಯ್ಯನವರ ಕೊರಳಿಗೆ ಹಾಕಿದ್ದಾರೆ.

ಮುಖ್ಯಮಂತ್ರಿಯಾಗಿ ಎಂದು ಆಶೀರ್ವದಿಸಿ ಗುರುಗಳೇ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಆಗ್ರಹಿಸಿದಾಗ, ನಗುತ್ತಲೇ ಶ್ರೀಗಳು ಸ್ಮರಣಿಕೆಯೊಂದನ್ನು ನೀಡಿದ್ದಾರೆ. ಇಲ್ಲಿಗೆ ಬಂದದ್ದು ನನ್ನ ಪುಣ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಪಡೆದ ಸಿದ್ದರಾಮಯ್ಯ, ಮಠಕ್ಕೆ ಬರುವ ಮುನ್ನ ಶೃಂಗೇರಿ ಶಾರದಾಂಬೆಯ ಸನ್ನಿದಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದರು.

ರಂಭಾಪುರಿ ಶ್ರೀಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ನು ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ" ಎನ್ನುವ ಮಾತನ್ನು ಶ್ರೀಗಳ ಜೊತೆಗಿನ ಮಾತುಕತೆಯ ವೇಳೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications