ಚಾರ್ಮಾಡಿ ಘಾಟ್ ವಾಹನ ಸವಾರರ ಗಮನಕ್ಕೆ
ಚಿಕ್ಕಮಗಳೂರು, ಫೆಬ್ರವರಿ 12: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರ ಗಮನಕ್ಕೆ. ಗ್ರಾಮ ಪಂಚಾಯಿತಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ, ಕ್ರಿಮಿನಲ್ ಪ್ರಕರಣ ಸಹ ದಾಖಲಾಗಲಿದೆ.
ಹೌದು, ಚಾರ್ಮಾಡಿ ಗ್ರಾಮ ಪಂಚಾಯಿತಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಸವನ್ನು ಹಾಕುವ ವಾಹನ ಸವಾರರಿಗೆ ದಂಡ ಹಾಕಲು ತೀರ್ಮಾನಿಸಿದೆ. ಫೆಬ್ರವರಿ 15ರಿಂದ ಈ ನಿಯಮ ಜಾರಿಗೆ ಬರಲಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ಪಿಡಿಒ ಪ್ರಕಾಶ್ ಶೆಟ್ಟಿ ಈ ಕುರಿತು ಮಾಹಿತಿ ನೀಡಿದ್ದಾರೆ. "ರಸ್ತೆ ಬದಿ ಕಸ ಸುರಿಯುವವರಿಗೆ ದಂಡ ಹಾಕುವುದು ಮಾತ್ರವಲ್ಲ, ಕ್ರಿಮಿನಲ್ ಕೇಸು ಸಹ ದಾಖಲಿಸುತ್ತೇವೆ" ಎಂದು ಹೇಳಿದ್ದಾರೆ.

ಉಜಿರೆಯಿಂದ ಆಗಮಿಸಿದ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆಯುತ್ತಿದ್ದರು. ಆಗ ಗ್ರಾಮ ಪಂಚಾಯಿತಿ ಸದಸ್ಯರು ಅವರನ್ನು ಹಿಡಿದು 500 ರೂ. ದಂಡವನ್ನು ಹಾಕಿದ್ದಾರೆ.
ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಜನರು ಸೇರಿ ಎಲ್ಲೆಂದರಲ್ಲಿ ಕಸ ಹಾಕದಂತೆ ಅರಿವು ಮೂಡಿಸುತ್ತಿದ್ದಾರೆ. ಇದನ್ನು ಮೀರಿಯೂ ಪ್ರವಾಸಿಗರು ಕಸ ಹಾಕಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಹೇಳಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಸ ಸುರಿಯಬೇಡಿ ಎಂದು ಮೈಕ್ನಲ್ಲಿ ಹೇಳುವ ಮೂಲಕ ಗ್ರಾಮ ಪಂಚಾಯಿತಿ ಈಗಾಗಲೇ ಮಾಹಿತಿ ನೀಡುತ್ತಿದೆ. ನಿಗದಿಪಡಿಸಿದ ಸ್ಥಳದಲ್ಲಿ ಸಿಸಿಟಿವಿಯನ್ನು ಸಹ ಅಳವಡಿಕೆ ಮಾಡಲು ತೀರ್ಮಾನಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications