ಬಾಬಾಬುಡನ್ ಗಿರಿಯಲ್ಲಿ ಮೂರು ದಿನಗಳ ದತ್ತ ಜಯಂತಿಗೆ ಶಾಂತಿಯುತ ತೆರೆ

ಚಿಕ್ಕಮಗಳೂರು, ಡಿಸೆಂಬರ್ 12: ಹಿಂದೂ ಮುಸಲ್ಮಾನರ ಧಾರ್ಮಿಕ, ಭಾವೈಕ್ಯತಾ ಕೇಂದ್ರವಾಗಿರುವ ಬಾಬಾಬುಡನ್ ‍ಗಿರಿಯ ಇನಾಂ ದತ್ತಾತ್ರೆಯ ಪೀಠದಲ್ಲಿ ಮೂರು ದಿನಗಳ ಕಾಲ ನಡೆದ ದತ್ತಜಯಂತಿಗೆ ಸಂಭ್ರಮದ ತೆರೆಬಿದ್ದಿದೆ.

ಮುಂಜಾನೆಯಿಂದಲೇ ಕೊರೆವ ಚಳಿಯನ್ನೂ ಲೆಕ್ಕಿಸದೇ ಸಹಸ್ರಾರು ದತ್ತ ಭಕ್ತರು ಬಾಬಾ ಬುಡನ್ ‍ಗಿರಿಗೆ ಆಗಮಿಸಿ ದತ್ತ ಗುಹೆಯಲ್ಲಿ ಪಾದುಕೆ ದರ್ಶನ ಪಡೆದುಕೊಂಡರು. ಈ ಸಂದರ್ಭ ದತ್ತ ಗುಹೆಯಲ್ಲಿ ನಿತ್ಯ ಪೂಜೆಯಾಗಬೇಕು, ಹಿಂದೂ ಅರ್ಚಕರ ನೇಮಕ ಮಾಡಬೇಕು ಎಂಬ ಬಲವಾದ ಕೂಗು ಕೇಳಿಬಂತು.

ಸದಾ ವಿವಾದದಿಂದಲೇ ಕೂಡಿರುವ ಕಾಫಿನಾಡು ಚಿಕ್ಕಮಗಳೂರಿನ ಬಾಬಾಬುಡನ್ ‍ಗಿರಿಯ ಇನಾಂ ದತ್ತಾತ್ರೆಯ ಪೀಠದಲ್ಲಿ ನಡೆದ ದತ್ತಜಯಂತಿ ಹಾಗೂ ದತ್ತಮಾಲಾ ಅಭಿಯಾನವು ಬಿಗಿ ಪೋಲಿಸ್ ಭದ್ರತೆಯೊಂದಿಗೆ ಶಾಂತಿಯುತವಾಗಿ ತೆರೆಬಿದ್ದಿದೆ. ಕಳೆದ ಹನ್ನೊಂದು ದಿನಗಳಿಂದ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಜಂಟಿಯಾಗಿ ಹಮ್ಮಿಕೊಳ್ಳಲಾಗಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನದಿಂದಾಗಿ ಚಿಕ್ಕಮಗಳೂರು ಸಂಪೂರ್ಣವಾಗಿ ಕೇಸರಿಮಯವಾಗಿತ್ತು. ದತ್ತ ಭಕ್ತರಿಗೆ ಜಿಲ್ಲಾಡಳಿತ ದತ್ತಗುಹೆಯೊಳಗೆ ಪಾದುಕೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿತ್ತು. ಇದರಿಂದಾಗಿ ಮುಂಜಾನೆಯಿಂದಲೇ ಹೊನ್ನಮ್ಮನ ಹಳ್ಳದಲ್ಲಿ ಮಿಂದೆದ್ದ ಸಹಸ್ರಾರು ದತ್ತಭಕ್ತರು ದತ್ತಪೀಠಕ್ಕೆ ಆಗಮಿಸಿ ಪಾದುಕೆ ದರ್ಶನ ಪಡೆದರು.

Peaceful Ending Of Three Days Datta Jayanti At Bababudan Giri

ನಂತರ ದತ್ತಪೀಠದ ಹೊರ ಭಾಗದಲ್ಲಿ ಹಾಕಲಾಗಿದ್ದ ಪೆಂಡಾಲ್ ‍ನಲ್ಲಿ ನಡೆದ ಹೋಮ, ಹವನಗಳಲ್ಲಿ ಪಾಲ್ಗೊಂಡರು. ದತ್ತಪೀಠಕ್ಕೆ ಸಂಬಂಧಿಸಿದಂತೆ ವಿವಾದ ಇದೀಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದ್ದು ಕೂಡಲೇ‌ ದತ್ತಪೀಠವನ್ನು ಹಿಂದೂ ಪೀಠವನ್ನಾಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವ ಸಿ.ಟಿ‌. ರವಿ‌ ತಿಳಿಸಿದರು.

Peaceful Ending Of Three Days Datta Jayanti At Bababudan Giri

ಇನ್ನು ದತ್ತಮಾಲಾ ಧಾರಣೆ ಮಾಡಿದ್ದ ಸಚಿವ ಸಿ.ಟಿ‌.ರವಿ ಇರುಮುಡಿ ಹೊತ್ತು‌ ಪಾದಯಾತ್ರೆಯ ಮೂಲಕ ದತ್ತಪೀಠಕ್ಕೆ ಆಗಮಿಸಿ ದತ್ತಾತ್ರೇಯ ಪಾದುಕೆ ದರ್ಶನ‌ ಪಡೆದರು.‌ ಸಚಿವ‌ ಸಿ.ಟಿ‌.ರವಿಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ‌ ಸಾಥ್ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+