ಜನರಿಗೆ ಬೇಕಾಗಿರುವು ಹಣ ಅಲ್ಲ ಸ್ವಾಮಿ, ಅಕ್ಕಿ: ನೀವು ಸುಮ್ನೆ ಪುಂಗ್ಬೇಡಿ: ಸಿ.ಟಿ.ರವಿಗೆ ಕೆ.ಜೆ.ಜಾರ್ಜ್ ತಿರುಗೇಟು
ಚಿಕ್ಕಮಗಳೂರು, ಜೂನ್, 16: ಜನರ ಖಾತೆಗೆ ಹಣ ಹಾಕಿ ಅವರೇ ಹೆಚ್ಚುವರಿ 5 ಕೆ.ಜಿ. ಅಕ್ಕಿ ಕೊಂಡುಕೊಳ್ಳುತ್ತಾರೆ ಎಂದು ಹೇಳಿದ್ದ ಸಿ.ಟಿ.ರವಿಗೆ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಉಸ್ತುವಾರಿ ಕೆ.ಜೆ.ಜಾರ್ಜ್ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ನಾವು ಅಕ್ಕಿಯನ್ನು ಉಚಿತವಾಗಿ ಕೇಳುತ್ತಿಲ್ಲ. ದುಡ್ಡು ಕೊಡುತ್ತೇವೆ ಕೊಡಿ ಎಂದು ಕೇಳಿದ್ದೇವೆ. ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ಹಣವಲ್ಲ. ಎಫ್.ಸಿ.ಐ. ಅವರೇ ಸ್ಟಾಕ್ ಇದೆ, ಕೊಡುತ್ತೇವೆ ಎಂದು ಲೆಟರ್ ಕೊಟ್ಟಿದ್ದಾರೆ. ಈಗ ಅಕ್ಕಿ ವಾಪಸ್ ಹೋಗಿದೆ. ಕೊಳೆಯಲು ಬಿಟ್ಟಿದ್ದೀರಾ ಸಿ.ಟಿರವಿ ಅವರೇ ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಪಾಪ ಸಿ.ಟಿ.ರವಿ is a party man, ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಅವರಿಗೆ ಇದೆಲ್ಲ ಹೇಗೆ ಗೊತ್ತಾಗುತ್ತದೆ. ಅಕ್ಕಿ ಇರುವುದೇ ಬಡವರಿಗೆ ಕೊಡುವುದಕ್ಕೆ. ಹಣ ಕೊಡಿ ಅಂದರೆ ಹೇಗೆ?. ಜನರಿಗೆ ಬೇಕಾಗಿರುವುದು ಅಕ್ಕಿಯೇ ಹೊರತು ದುಡ್ಡಲ್ಲ ಎಂದು ತಿರುಗೇಟು ನೀಡಿದರು.

ಇದೇ ವೇಳೆ ಮತಾಂತರ ನಿಷೇಧ ಕಾಯ್ದೆ ಹಿಂಪಡೆದಿದ್ದಕ್ಕೆ ಬಿಜೆಪಿಯವರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಕೆಲಸವೇ ವಿರೋಧ ಮಾಡುವುದು. ಕಾಂಗ್ರೆಸ್ನ ಅಭಿವೃದ್ಧಿ ಹೆಜ್ಜೆಗೆ ವಿರೋಧವೇ ಅವರ ಕೆಲಸ. ಅವರು ಪ್ರತಿಪಕ್ಷ ಅಲ್ಲ, ವಿರೋಧ ಪಕ್ಷ ಎಂದು ಲೇವಡಿ ಮಾಡಿದರು.
ಮತಾಂತರ ನಿಷೇಧ ಕಾಯ್ದೆ ಮೊದಲೇ ಇತ್ತು. ಬಲವಂತ ಹಾಗೂ ಆಶ್ವಾಸನೆ ಕೊಟ್ಟು ಮತಾಂತರ ಮಾಡುವುದು ತಪ್ಪು. ಅದು ಹಳೇ ಕಾಯ್ದೆಯೇ ಇದೆ. ಅದನ್ನು ನಾವು ಒಪ್ಪುತ್ತೇವೆ. ಆದರೆ, ಅವರು ಕೆಲವು ತಪ್ಪು ಮಾಡಿದ್ದಾರೆ. ಆರೋಪ ಮಾಡಿದವರು ದಾಖಲೆ ತೋರಿಸಬೇಕು. ಆರೋಪ ಮಾಡುವವರು ಸಾಕ್ಷಿ ಕೊಟ್ಟು ಹೇಳಬೇಕು ಎಂದು ತಿವಿದರು.
ನನ್ನ ಮೇಲೆ ಆರೋಪ ಮಾಡಿದರೆ, ನಾನೇ ಪ್ರೂವ್ ಮಾಡಬೇಕಾ. ಇದು ಯಾವ ಕಾನೂನಿನಲ್ಲಿ ಇದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಿಜೆಪಿಯವರು ಈ ರೀತಿ ತುಂಬಾ ತಪ್ಪುಗಳನ್ನು ಮಾಡಿದ್ದಾರೆ. ಅದನ್ನು ನಾವು ಸರಿ ಮಾಡುತ್ತೇವೆ. ಇಷ್ಟು ದಿನ ಅವರೇ ಇದ್ದರಲ್ಲಾ ಹೊಸದಾಗಿ ಏನು ಕಂಡುಹಿಡಿದಿದ್ದಾರೆ. ನಮಗೂ ಜವಾಬ್ದಾರಿ ಇದೆ, ಹಾಗಾಗಿ ಎಲ್ಲರಿಗೂ ಸರಿ ಆಗುವ ಕಾಯ್ದೆ ಜಾರಿಗೆ ಮಾಡುತ್ತೇವೆ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications