ಮೂಡಿಗೆರೆಯಲ್ಲಿ ರಾಜಾರೋಷವಾಗಿ ಓಡಾಡಿದ ಒಂಟಿ ಸಲಗ
ಚಿಕ್ಕಮಗಳೂರು, ಆಗಸ್ಟ್ 16: ಚಿಕ್ಕಮಗಳೂರಿನಲ್ಲಿ ಸದ್ಯಕ್ಕೆ ಮಳೆ ಕಡಿಮೆಯಾಗಿದೆ. ಆದರೆ ಮಳೆಯ ಆತಂಕದಲ್ಲಿದ್ದ ಜನರಿಗೆ ಈಗ ಆನೆ ಭಯ ಶುರುವಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗ್ರಾಮಗಳಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಏಕಾಏಕಿ ಒಂಟಿ ಸಲಗವೊಂದು ರಸ್ತೆಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಒಂಟಿ ಸಲಗ ಕಂಡು ಜನರೂ ಬೆಚ್ಚಿಬಿದ್ದಿದ್ದಾರೆ.

ಬಿಳ್ಳೂರು, ಕೆಸವಳಲು ಸುತ್ತಮುತ್ತ ಒಂಟಿ ಸಲಗ ಓಡಾಡುತ್ತಿದ್ದು, ಮಳೆಯ ನಡುವೆ ಹೀಗೆ ಆನೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.












Click it and Unblock the Notifications